ಮನರಂಜನೆ

ನಾನು ಬೆಳೆಯಬೇಕು ಎಂಬ ಸ್ವಾರ್ಥದಿಂದ ಈ ಚಿತ್ರ ಮಾಡಿದೆ: ಅಜೇಯ್‍ ರಾವ್‍

ಅಜೇಯ್‍ ರಾವ್ ಅಭಿನಯದ ‘ಯುದ್ಧ ಕಾಂಡ’ ಚಿತ್ರದ ಸುದ್ದಿಯೇ ಇರಲಿಲ್ಲ. ಎರಡು ವರ್ಷಗಳ ಹಿಂದೆಯೇ ಘೋಷಣೆಯಾದರೂ, ಚಿತ್ರ ಯಾವ ಹಂತದಲ್ಲಿದೆ ಎಂಬ ಸೂಕ್ತವಾದ ಮಾಹಿತಿ ಇರಲಿಲ್ಲ. ಈಗ ಚಿತ್ರವನ್ನು ಸದ್ದಿಲ್ಲದೆ ಮುಗಿಸಿಕೊಂಡು ಬಂದಿದ್ದಾರೆ ಅಜೇಯ್‍ ರಾವ್‍. ಅಷ್ಟೇ ಅಲ್ಲ, ಚಿತ್ರವನ್ನು ಏ.18ಕ್ಕೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

ಚಿತ್ರದ ಒಂದು ಹಾಡು ಬಿಡುಗಡೆ ಮತ್ತು ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯ ಪತ್ರಿಕಾಗೋಷ್ಠಿಯಲ್ಲಿ ಅಜೇಯ್‍ ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಈ ಚಿತ್ರ ಮಾಡುವುದಕ್ಕೆ ತಮಗೆ ಎರಡು ಸ್ವಾರ್ಥಗಳಿವೆ ಎಂದು ಹೇಳಿದ್ದಾರೆ. ಅದೇ ಕಾರಣಕ್ಕೆ ಅವರು ಚಿತ್ರವನ್ನು ನಿರ್ಮಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈ ಚಿತ್ರವು ದೇಶದಾದ್ಯಂತ ಸದ್ದು ಮಾಡಬೇಕೆಂಬುದು ಮೊದಲ ಸ್ವಾರ್ಥವಾದರೆ, ತಾನು ಕನ್ನಡದ ಮುಂಚೂಣಿಯ ನಾಯಕರ ಪೈಕಿ ಬಂದು ನಿಲ್ಲಬೇಕೆಂಬುದು ಎರಡನೆಯ ಸ್ವಾರ್ಥ ಎಂದು ಹೇಳಿದ್ದಾರೆ.

ತನಗೆ ಸಿಗಬೇಕಾದ ಮಾನ್ಯತೆ ಸಿಕ್ಕಿಲ್ಲ ಎಂಬ ಬೇಸರ, ಕೊರಗು ಇದೆ ಎನ್ನುವ ಅಜೇಯ್‍ ರಾವ್, ‘ಕನ್ನಡದಲ್ಲಿ ಯಾರೂ ನನ್ನನ್ನು ಸರಿಯಾಗಿ ಬಳಸಿಕೊಂಡಿಲ್ಲ. ಯಾರೂ ಬಳಸಿಕೊಳ್ಳದಿದ್ದಾಗ, ನಾವೇ ಆ ಪ್ರಯತ್ನ ಮಾಡಬೇಕು ಎಂದು ನಂಬಿರುವವನು ನಾನು. ನನ್ನನ್ನು ನಾನೇ ಸೃಷ್ಟಿ ಮಾಡಿಕೊಳ್ಳಬೇಕು, ನನ್ನ ಭವಿಷ್ಯವನ್ನು ನಾನೇ ಬರೆದುಕೊಳ್ಳಬೇಕು ಎಂದು ನಿರ್ಧಾರ ಮಾಡಿ, ಈ ಚಿತ್ರಕ್ಕೆ ನಿರ್ಮಾಣಕ್ಕೆ ಕೈ ಹಾಕಿದೆ. ನಾನು ಬೆಳೆಯಬೇಕು ಎಂಬ ಸ್ವಾರ್ಥದಿಂದ ಈ ಚಿತ್ರ ಮಾಡಿದೆ’ ಎನ್ನುತ್ತಾರೆ ಅಜೇಯ್‍.

ತನಗೆ ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡಬೇಕು ಎಂಬ ಆಸೆ ಎನ್ನುವ ಅಜೇಯ್‍, ‘ರೀ ನಟನೆ ಮಾಡಿಕೊಂಡಿರುತ್ತೇನೆ, ಬಂದ ದುಡ್ಡಲ್ಲಿ ಮನೆ ನೋಡಿಕೊಂಡಿದ್ದರೆ ಸಾಕು ಎಂದರೆ ಆರಾಮಾಗಿ ಇರಬಹುದು. ನನಗೆ ನಿರ್ಮಾಣ ಅಥವಾ ಹೋರಾಟ ಮಾಡುವ ಅವಶ್ಯಕತೆಯೇ ಇರುತ್ತಿರಲಿಲ್ಲ. ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡಬೇಕು ಎಂಬ ಆಸೆ ನನಗಿದೆ. ಈಗಾಗಲೇ ಯಶ್‍, ರಕ್ಷಿತ್‍ ಶೆಟ್ಟಿ, ರಿಷಭ್‍ ಶೆಟ್ಟಿ ಮುಂತಾದವರು ಕನ್ನಡ ಚಿತ್ರರಂಗವನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರೆಲ್ಲರಿಂದ ನಾನು ಬಹಳ ಸ್ಫೂರ್ತಿ ಪಡೆದಿದ್ದೇನೆ. ಅವರೆಲ್ಲರೂ ನಾನು ಬಂದ ನಂತರ ಬಂದವರು. ಈ ಕಾರಣಕ್ಕೆ ನಾನು ಮುಂಚೂಣಿಗೆ ಬರಬೇಕು ಎಂಬ ಆಸೆ ಇದೆಯೇ ಹೊರತು, ಕೋಟಿ ಕೋಟಿ ಸಂಭಾವನೆ ಪಡೆದು ಮೆರೆಯಬೇಕು ಎಂಬ ಆಸೆ ಇಲ್ಲ’ ಎನ್ನುತ್ತಾರೆ ಅಜೇಯ್‍.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

19 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

19 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago