ಮನರಂಜನೆ

ನಾನು ಗೋಮಾಂಸ ಅಥವಾ ಕೆಂಪು ಮಾಂಸವನ್ನು ಸೇವಿಸುವುದಿಲ್ಲ: ನಟಿ ಕಂಗನಾ

ನವದೆಹಲಿ: ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ನಟಿ ಕಂಗನಾ ರಣಾವತ್ ಸ್ವರ್ಧಿಸುತ್ತಿದ್ದಾರೆ. ಪ್ರತಿನಿತ್ಯ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ.

ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು ಎಕ್ಸ್​​ನಲ್ಲಿ ಹೇಳಿಕೆ ನೀಡಿದರು. ಈ ಹೇಳಿಕೆಯಿಂದ ಎಕ್ಸ್​​ನಲ್ಲಿ​​​ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರ ಹೇಳಿಕೆಗೆ ಎಕ್ಸ್​ನಲ್ಲೇ ಕಂಗನಾ ತಿರುಗೇಟು ನೀಡಿರುವ ಅವರು ತಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ ಎಂದಿದ್ದಾರೆ.

ಎಕ್ಸ್‌ನಲ್ಲೇನಿದೆ?
ನಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ, ನನ್ನ ಬಗ್ಗೆ ಸಂಪೂರ್ಣವಾಗಿ ಆಧಾರರಹಿತ ವದಂತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ, ನಾನು ದಶಕಗಳಿಂದ ಯೋಗ ಮತ್ತು ಆಯುರ್ವೇದ ಜೀವನ ವಿಧಾನವನ್ನು ಪ್ರತಿಪಾದಿಸುತ್ತಿದ್ದೇನೆ ಮತ್ತು ಪ್ರಚಾರ ಮಾಡುತ್ತಿದ್ದೇನೆ ಈಗ ಅಂತಹ ತಂತ್ರಗಳು ಕಳಂಕಕ್ಕೆ ಕಾರಣವಾಗುವುದಿಲ್ಲ. ನನ್ನ ಚಿತ್ರ. ನನ್ನ ಜನರು ನನ್ನನ್ನು ತಿಳಿದಿದ್ದಾರೆ ಮತ್ತು ನಾನು ಹೆಮ್ಮೆಯ ಹಿಂದೂ ಎಂದು ಅವರಿಗೆ ತಿಳಿದಿದೆ ಮತ್ತು ಯಾವುದೂ ಅವರನ್ನು ದಾರಿ ತಪ್ಪಿಸುವುದಿಲ್ಲ, ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಿತ್ರರಂಗದಲ್ಲಿ ಭರವಸೆ ಮೂಡಿಸುತ್ತಿರುವ ಕೊತ್ತೇಗಾಲದ ಯುವಕ ಮನ್ವಿತ್

ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ…

2 mins ago

ಒಳಚರಂಡಿ ಅವ್ಯವಸ್ಥೆ ಸರಿಪಡಿಸಿದ ತಿ.ನರಸೀಪುರ ಪುರಸಭೆ

ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ…

6 mins ago

ವಾಣಿಜ್ಯ ಗ್ಯಾಸ್ ಕೊರತೆ; ತರಕಾರಿ ಬೆಲೆ ಕುಸಿತ

ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆಯಾಗಿ…

9 mins ago

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

10 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

11 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

11 hours ago