ಮನರಂಜನೆ

‘UI’ ಟ್ರೇಲರ್ ನೋಡಿ ನನಗೆ ಶಾಕ್‍ ಆಯ್ತು; ಆಮೀರ್ ಖಾನ್‍ ಮೆಚ್ಚುಗೆ

ಉಪೇಂದ್ರ ಅಭಿಮಾನಿ ಬಳಗದಲ್ಲಿ ಮತ್ತು ಅವರನ್ನು ಮೆಚ್ಚುವವರ ಪೈಕಿ ಬೇರೆ ಭಾಷೆಯ ನಟ-ನಿರ್ದೇಶಕರು ನಿರ್ದೇಶಕರಿದ್ದಾರೆ. ಈಗಾಗಲೇ ತೆಲುಗಿನ ಹಲವು ನಟ-ನಿರ್ದೇಶಕರು ತಾವು ಉಪೇಂದ್ರ ಅಭಿಮಾನಿಗಳೆಂದು ಹೇಳಿಕೊಂಡಿದ್ದಾರೆ. ಈಗ ಮೊದಲ ಬಾರಿಗೆ ಬಾಲಿವುಡ್‍ ನಟ ಆಮೀರ್‍ ಖಾನ್‍ ಸಹ ತಾನು ಉಪೇಂದ್ರ ಅವರ ಅಭಿಮಾನಿ ಎಂದು ಹೇಳಿಕೊಳ್ಳುವುದರ ಜೊತೆಗೆ ಈ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರದ ಬಿಡುಗಡೆಗೆ ಇನ್ನೊಂದು ವಾರವಿದೆ. ಡಿ.20ರಂದು ಚಿತ್ರವು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಹೀಗಿರುವಾಗಲೇ, ಬಾಲಿವುಡ್‍ ನಟ ಆಮೀರ್‍ ಖಾನ್‍ ಖುದ್ದು ಉಪೇಂದ್ರರ ಜೊತೆಗೆ ನಿಂತು ಒಂದು ವೀಡಿಯೋ ಮಾಡಿದ್ದಾರೆ. ಅದರಲ್ಲಿ ಚಿತ್ರದ ಬಗ್ಗೆ ಒಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಆಮೀರ್, ‘ಉಪೇಂದ್ರ ಬಹಳ ಚೆನ್ನಾಗಿ ಟ್ರೇಲರ್‍ ಮಾಡಿದ್ದಾರೆ. ಇದು ದೊಡ್ಡ ಹಿಟ್‍ ಆಗುತ್ತದೆ ಎಂಬ ನಂಬಿಕೆ ಇದೆ. ಹಿಂದಿ ಪ್ರೇಕ್ಷಕರು ಸಹ ಈ ಚಿತ್ರವನ್ನು ಇಷ್ಟಪಡುವುದರಲ್ಲಿ ಸಂಶಯವೇ ಇಲ್ಲ. ನನಗೆ ಟ್ರೇಲರ್‍ ನೋಡಿದಾಗ ನಿಜಕ್ಕೂ ಶಾಕ್‍ ಆಯ್ತು. ಅದ್ಭುತ ಟ್ರೇಲರ್‍. ನಿಜಕ್ಕೂ ಚೆನ್ನಾಗಿ ಮೂಡಿಬಂದಿದೆ. ನಿಮಗೆ ಒಳ್ಳೇಯದಾಗಬೇಕು, ಚಿತ್ರ ದೊಡ್ಡ ಯಶಸ್ಸು ಕಾಣಬೇಕು’ ಎಂದು ಹಾರೈಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಪೇಂದ್ರ, ‘ಆಮೀರ್ ಖಾನ್‍ ಅವರನನು ಭೇಟಿ ಮಾಡುವ ನನ್ನ ಬಹು ವರ್ಷಗಳ ಕನಸು ಇಂದು ನನಸಾಗಿದೆ. ‘‘UI’ ಚಿತ್ರದ ಮೂಲಕ ಅದು ಸಾಧ್ಯವಾಗಿದೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು’ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಇಷ್ಟಕ್ಕೂ ಉಪೇಂದ್ರ ಮತ್ತು ಆಮೀರ್‍ ಖಾನ್‍ ಭೇಟಿಯಾಗಿದ್ದು ಎಲ್ಲಿ ಎಂಬ ಪ್ರಶ್ನೆ ಸಹಜ. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ಉಪೇಂದ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದರೆ, ಆಮೀರ್‍ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ಚಿತ್ರೀಕರಣ ನಡೆದಿದ್ದು, ಇದರಲ್ಲಿ ಉಪೇಂದ್ರ ಮತ್ತು ಆಮೀರ್‍ ಜೊತೆಯಾಗಿ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಮೀರ್ ಖಾನ್‍ ‘UI’ ಚಿತ್ರದ ಟ್ರೇಲರ್‍ ನೋಡಿದ್ದಷ್ಟೇ ಅಲ್ಲ, ಮೆಚ್ಚಿ ಮಾತನಾಡಿದ್ದಾರೆ.

ಭೂಮಿಕಾ

Recent Posts

ಚೆಕ್‌ ಬೌನ್ಸ್‌ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ :‌ ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು

ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್‌ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…

3 mins ago

‌ಶಾಮನೂರು | ಓದಿದ್ದೂ 10ನೇ ತರಗತಿ ; ಕಟ್ಟಿದ್ದೂ ಬೃಹತ್ ಶಿಕ್ಷಣ ಸಾಮ್ರಾಜ್ಯ…..!

ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…

7 mins ago

ಫಸಲು ಬಿಮಾ : ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ : ಸಚಿವ ಖಂಡ್ರೆ

ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ…

28 mins ago

ದಿಲ್ಲಿಯಲ್ಲಿ ಮೆಸ್ಸಿ : ಮೋದಿ ಭೇಟಿ ನಿರೀಕ್ಷೆ, ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ.!

ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ…

45 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 15, ಸೋಮವಾರ  

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ರಾಜ್ಯ ಕಾಂಗ್ರೆಸ್‌ನ ಗೊಂದಲ, ವರಿಷ್ಠರ ಪ್ಲಾನ್ ವಿಫಲ

ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್…

3 hours ago