ಮನರಂಜನೆ

‘UI’ ಟ್ರೇಲರ್ ನೋಡಿ ನನಗೆ ಶಾಕ್‍ ಆಯ್ತು; ಆಮೀರ್ ಖಾನ್‍ ಮೆಚ್ಚುಗೆ

ಉಪೇಂದ್ರ ಅಭಿಮಾನಿ ಬಳಗದಲ್ಲಿ ಮತ್ತು ಅವರನ್ನು ಮೆಚ್ಚುವವರ ಪೈಕಿ ಬೇರೆ ಭಾಷೆಯ ನಟ-ನಿರ್ದೇಶಕರು ನಿರ್ದೇಶಕರಿದ್ದಾರೆ. ಈಗಾಗಲೇ ತೆಲುಗಿನ ಹಲವು ನಟ-ನಿರ್ದೇಶಕರು ತಾವು ಉಪೇಂದ್ರ ಅಭಿಮಾನಿಗಳೆಂದು ಹೇಳಿಕೊಂಡಿದ್ದಾರೆ. ಈಗ ಮೊದಲ ಬಾರಿಗೆ ಬಾಲಿವುಡ್‍ ನಟ ಆಮೀರ್‍ ಖಾನ್‍ ಸಹ ತಾನು ಉಪೇಂದ್ರ ಅವರ ಅಭಿಮಾನಿ ಎಂದು ಹೇಳಿಕೊಳ್ಳುವುದರ ಜೊತೆಗೆ ಈ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರದ ಬಿಡುಗಡೆಗೆ ಇನ್ನೊಂದು ವಾರವಿದೆ. ಡಿ.20ರಂದು ಚಿತ್ರವು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಹೀಗಿರುವಾಗಲೇ, ಬಾಲಿವುಡ್‍ ನಟ ಆಮೀರ್‍ ಖಾನ್‍ ಖುದ್ದು ಉಪೇಂದ್ರರ ಜೊತೆಗೆ ನಿಂತು ಒಂದು ವೀಡಿಯೋ ಮಾಡಿದ್ದಾರೆ. ಅದರಲ್ಲಿ ಚಿತ್ರದ ಬಗ್ಗೆ ಒಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಆಮೀರ್, ‘ಉಪೇಂದ್ರ ಬಹಳ ಚೆನ್ನಾಗಿ ಟ್ರೇಲರ್‍ ಮಾಡಿದ್ದಾರೆ. ಇದು ದೊಡ್ಡ ಹಿಟ್‍ ಆಗುತ್ತದೆ ಎಂಬ ನಂಬಿಕೆ ಇದೆ. ಹಿಂದಿ ಪ್ರೇಕ್ಷಕರು ಸಹ ಈ ಚಿತ್ರವನ್ನು ಇಷ್ಟಪಡುವುದರಲ್ಲಿ ಸಂಶಯವೇ ಇಲ್ಲ. ನನಗೆ ಟ್ರೇಲರ್‍ ನೋಡಿದಾಗ ನಿಜಕ್ಕೂ ಶಾಕ್‍ ಆಯ್ತು. ಅದ್ಭುತ ಟ್ರೇಲರ್‍. ನಿಜಕ್ಕೂ ಚೆನ್ನಾಗಿ ಮೂಡಿಬಂದಿದೆ. ನಿಮಗೆ ಒಳ್ಳೇಯದಾಗಬೇಕು, ಚಿತ್ರ ದೊಡ್ಡ ಯಶಸ್ಸು ಕಾಣಬೇಕು’ ಎಂದು ಹಾರೈಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಪೇಂದ್ರ, ‘ಆಮೀರ್ ಖಾನ್‍ ಅವರನನು ಭೇಟಿ ಮಾಡುವ ನನ್ನ ಬಹು ವರ್ಷಗಳ ಕನಸು ಇಂದು ನನಸಾಗಿದೆ. ‘‘UI’ ಚಿತ್ರದ ಮೂಲಕ ಅದು ಸಾಧ್ಯವಾಗಿದೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು’ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಇಷ್ಟಕ್ಕೂ ಉಪೇಂದ್ರ ಮತ್ತು ಆಮೀರ್‍ ಖಾನ್‍ ಭೇಟಿಯಾಗಿದ್ದು ಎಲ್ಲಿ ಎಂಬ ಪ್ರಶ್ನೆ ಸಹಜ. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ಉಪೇಂದ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದರೆ, ಆಮೀರ್‍ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ಚಿತ್ರೀಕರಣ ನಡೆದಿದ್ದು, ಇದರಲ್ಲಿ ಉಪೇಂದ್ರ ಮತ್ತು ಆಮೀರ್‍ ಜೊತೆಯಾಗಿ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಮೀರ್ ಖಾನ್‍ ‘UI’ ಚಿತ್ರದ ಟ್ರೇಲರ್‍ ನೋಡಿದ್ದಷ್ಟೇ ಅಲ್ಲ, ಮೆಚ್ಚಿ ಮಾತನಾಡಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

4 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

4 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

4 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

4 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

4 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

4 hours ago