ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ರನ್ನು ಮದುವೆಗೆ ಯಾಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಇದೀಗ ನಟ ಡಾಲಿ ಧನಂಜಯ್ ಉತ್ತರ ನೀಡಿದ್ದಾರೆ.
ಇದೇ ಫೆಬ್ರವರಿ.16ರಂದು ಡಾಲಿ ಧನಂಜರ್ ಅವರು ವೈದ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ಗಣ್ಯರನ್ನು ಭೇಟಿ ಮಾಡಿ ಮದುವೆಯ ಆಮಂತ್ರಣ ಪತ್ರ ನೀಡುತ್ತಿದ್ದಾರೆ.
ಆದರೆ ಡಾಲಿ ಧನಂಜಯ್ ಅವರು, ನಟ ದರ್ಶನ್ಗೆ ಇದುವರೆಗೂ ಆಮಂತ್ರಣ ಪತ್ರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗ ಉತ್ತರಿಸಿದರು.
ನಾನು ಕಳೆದ ಕೆಲ ದಿನಗಳಿಂದ ದರ್ಶನ್ರನ್ನು ಸಂಪರ್ಕಿಸಲು ಪ್ರಯತ್ನ ಪಟ್ಟೆ. ಆದರೆ ಅದು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ದರ್ಶನ್ರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡುತ್ತೇನೆ. ಮದುವೆಗೆ ಯಾರನ್ನೂ ಬಿಟ್ಟಿಲ್ಲ. ಎಲ್ಲರನ್ನೂ ಕರೆದಿದ್ದೇನೆ. ಸದ್ಯದಲ್ಲೇ ಅವರನ್ನು ಕೂಡ ಕರೆಯುತ್ತೇನೆ. ಅದು ಬಿಟ್ಟು ಬೇರೆ ಏನೂ ಇಲ್ಲ ಎಂದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…