ಮನರಂಜನೆ

‘ಭೈರಾದೇವಿ’ ಗೆಲ್ಲದಿದ್ದರೆ ಚಿತ್ರರಂಗದಿಂದ ದೂರ; ರಾಧಿಕಾ ಘೋಷಣೆ

ಅಕ್ಟೋಬರ್‍ 03ರಂದು ಬಿಡುಗಡೆಯಾಗುತ್ತಿರುವ ತಮ್ಮ ನಿರ್ಮಾಣದ ಮತ್ತು ನಟನೆಯ ‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ ಚಿತ್ರರಂಗದಿಂದ ದೂರ ಸರಿಯುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ.

‘ಭೈರಾದೇವಿ’ ಚಿತ್ರದ ಟ್ರೇಲರ್‍ ಶನಿವಾರ ರಾತ್ರಿ ಮಂತ್ರಿ ಮಾಲ್‍ನಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಹಲವು ವಿಷಯಗಳನ್ನು ಮಾತನಾಡಿರುವ ರಾಧಿಕಾ ಕುಮಾರಸ್ವಾಮಿ, ಚಿತ್ರ ಗೆಲ್ಲದಿದ್ದರೆ ಇದೇ ತಮ್ಮ ಕೊನೆಯ ಚಿತ್ರವಾಗಲಿದೆ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ರಾ‍ಧಿಕಾ, ‘ನಿರ್ದೇಶಕ ಶ್ರೀಜೈ ಕಥ ಹೇಳಿದಾಗಲೇ, ಈ ಸಿನಿಮಾ ಗೆದ್ದರೆ, ಪ್ರೇಕ್ಷಕರಿಗೆ ಇಷ್ಟ ಆದರೆ ಇನ್ನೊಂದು ಸಿನಿಮಾ ಮಾಡುತ್ತೇನೆ. ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದ ದೂರ ಆಗಿಬಿಡುತ್ತೇನೆ ಎಂದು ಅವರಿಗೆ ಹೇಳಿದ್ದೆ. ಇದು ಇಷ್ಟವಾದರೆ, ಸಿನಿಪಯಣ ಮುಂದುವರೆಸುತ್ತೇನೆ. ಇಲ್ಲವಾದರೆ, ನಾನು ನಟನೆ ಮಾಡಿದ ಕೊನೆಯ ಸಿನಿಮಾ ಇದಾಗಿರುತ್ತದೆ’ ಎಂದು ಘೋಷಿಸಿದರು.

‘ಭೈರಾದೇವಿ’ ಚಿತ್ರ ಮಾಡುವಾಗ ಅವರು ಹಲವು ಸಮಸ್ಯೆಗಳನ್ನು ಎದುರಿಸಿದ್ದಾರಂತೆ. ‘ಈ ಚಿತ್ರಕ್ಕಾಗಿ ಹಲವು ತೊಂದರೆಗಳನ್ನು ಅನುಭವಿಸಿದ್ದೇನೆ. ಬರೀ ನಾನಷ್ಟೇ ಅಲ್ಲ, ಈ ಹಾಡಿನ ಹಿಂದೆ ಹಲವರ ಶ್ರಮ ಇದೆ. ಅಘೋರಿ ಗೆಟಪ್‍ ಹಾಕಿಕೊಂಡು ಹೆಣ್ಮಕ್ಕಳು ಅಳೋರು. ಮೈ ಉರಿಯುತ್ತಿದೆ ಎಂದು ಹೇಳುತ್ತಿದ್ದರು. ತುಂಬಾ ಸಮಸ್ಯೆ ಎದುರಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಸಿನಿಮಾ ನೋಡಿ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿದರೆ, ಇನ್ನಷ್ಟು ಚಿತ್ರಗಳನ್ನು ಮಾಡಬಹುದು’ ಎಂದರು.

ಹಾಡಿನ ಸಮಯದಲ್ಲಿ ತಾವು ಎದುರಿಸಿದ ಸಮಸ್ಯೆ ಕುರಿತು ಮಾತನಾಡಿದ ರಾಧಿಕಾ, ‘ಕಾಳಿ ಹಾಡಿನ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ನನಗೆ ಬಹಳ ಸುಸ್ತಾಗುತ್ತಿತ್ತು. ಮೊದಲ ದಿನ ಚಿತ್ರೀಕರಣ ಮಾಡುವಾಗ ನಡೆಯೋಕೆ, ಎದ್ದು ನಿಲ್ಲೋಕೂ ಆಗುತ್ತಿರಲಿಲ್ಲ. ಆ ಗೆಟಪ್‍ ಹಾಕಿದ ತಕ್ಷಣ ತಲೆ ಎತ್ತೋಕೂ ಆಗುತ್ತಿರಲಿಲ್ಲ. ಕೊನೆಗೆ ನಮ್ಮ ತಂಡದವರು ಅಲ್ಲೇ ಇದ್ದ ಒಂದು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದೃಷ್ಟಿ ತೆಗೆದರು. ಆ ನಂತರ ಚಿತ್ರೀಕರಣ ಶುರು ಮಾಡಿದೆವು’ ಎಂದರು.

ಭೂಮಿಕಾ

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

3 mins ago

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

12 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

13 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

13 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

13 hours ago