ಮನರಂಜನೆ

‘ಭೈರಾದೇವಿ’ ಗೆಲ್ಲದಿದ್ದರೆ ಚಿತ್ರರಂಗದಿಂದ ದೂರ; ರಾಧಿಕಾ ಘೋಷಣೆ

ಅಕ್ಟೋಬರ್‍ 03ರಂದು ಬಿಡುಗಡೆಯಾಗುತ್ತಿರುವ ತಮ್ಮ ನಿರ್ಮಾಣದ ಮತ್ತು ನಟನೆಯ ‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ ಚಿತ್ರರಂಗದಿಂದ ದೂರ ಸರಿಯುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ.

‘ಭೈರಾದೇವಿ’ ಚಿತ್ರದ ಟ್ರೇಲರ್‍ ಶನಿವಾರ ರಾತ್ರಿ ಮಂತ್ರಿ ಮಾಲ್‍ನಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಹಲವು ವಿಷಯಗಳನ್ನು ಮಾತನಾಡಿರುವ ರಾಧಿಕಾ ಕುಮಾರಸ್ವಾಮಿ, ಚಿತ್ರ ಗೆಲ್ಲದಿದ್ದರೆ ಇದೇ ತಮ್ಮ ಕೊನೆಯ ಚಿತ್ರವಾಗಲಿದೆ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ರಾ‍ಧಿಕಾ, ‘ನಿರ್ದೇಶಕ ಶ್ರೀಜೈ ಕಥ ಹೇಳಿದಾಗಲೇ, ಈ ಸಿನಿಮಾ ಗೆದ್ದರೆ, ಪ್ರೇಕ್ಷಕರಿಗೆ ಇಷ್ಟ ಆದರೆ ಇನ್ನೊಂದು ಸಿನಿಮಾ ಮಾಡುತ್ತೇನೆ. ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದ ದೂರ ಆಗಿಬಿಡುತ್ತೇನೆ ಎಂದು ಅವರಿಗೆ ಹೇಳಿದ್ದೆ. ಇದು ಇಷ್ಟವಾದರೆ, ಸಿನಿಪಯಣ ಮುಂದುವರೆಸುತ್ತೇನೆ. ಇಲ್ಲವಾದರೆ, ನಾನು ನಟನೆ ಮಾಡಿದ ಕೊನೆಯ ಸಿನಿಮಾ ಇದಾಗಿರುತ್ತದೆ’ ಎಂದು ಘೋಷಿಸಿದರು.

‘ಭೈರಾದೇವಿ’ ಚಿತ್ರ ಮಾಡುವಾಗ ಅವರು ಹಲವು ಸಮಸ್ಯೆಗಳನ್ನು ಎದುರಿಸಿದ್ದಾರಂತೆ. ‘ಈ ಚಿತ್ರಕ್ಕಾಗಿ ಹಲವು ತೊಂದರೆಗಳನ್ನು ಅನುಭವಿಸಿದ್ದೇನೆ. ಬರೀ ನಾನಷ್ಟೇ ಅಲ್ಲ, ಈ ಹಾಡಿನ ಹಿಂದೆ ಹಲವರ ಶ್ರಮ ಇದೆ. ಅಘೋರಿ ಗೆಟಪ್‍ ಹಾಕಿಕೊಂಡು ಹೆಣ್ಮಕ್ಕಳು ಅಳೋರು. ಮೈ ಉರಿಯುತ್ತಿದೆ ಎಂದು ಹೇಳುತ್ತಿದ್ದರು. ತುಂಬಾ ಸಮಸ್ಯೆ ಎದುರಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಸಿನಿಮಾ ನೋಡಿ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿದರೆ, ಇನ್ನಷ್ಟು ಚಿತ್ರಗಳನ್ನು ಮಾಡಬಹುದು’ ಎಂದರು.

ಹಾಡಿನ ಸಮಯದಲ್ಲಿ ತಾವು ಎದುರಿಸಿದ ಸಮಸ್ಯೆ ಕುರಿತು ಮಾತನಾಡಿದ ರಾಧಿಕಾ, ‘ಕಾಳಿ ಹಾಡಿನ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ನನಗೆ ಬಹಳ ಸುಸ್ತಾಗುತ್ತಿತ್ತು. ಮೊದಲ ದಿನ ಚಿತ್ರೀಕರಣ ಮಾಡುವಾಗ ನಡೆಯೋಕೆ, ಎದ್ದು ನಿಲ್ಲೋಕೂ ಆಗುತ್ತಿರಲಿಲ್ಲ. ಆ ಗೆಟಪ್‍ ಹಾಕಿದ ತಕ್ಷಣ ತಲೆ ಎತ್ತೋಕೂ ಆಗುತ್ತಿರಲಿಲ್ಲ. ಕೊನೆಗೆ ನಮ್ಮ ತಂಡದವರು ಅಲ್ಲೇ ಇದ್ದ ಒಂದು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದೃಷ್ಟಿ ತೆಗೆದರು. ಆ ನಂತರ ಚಿತ್ರೀಕರಣ ಶುರು ಮಾಡಿದೆವು’ ಎಂದರು.

ಭೂಮಿಕಾ

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago