ಅಕ್ಟೋಬರ್ 03ರಂದು ಬಿಡುಗಡೆಯಾಗುತ್ತಿರುವ ತಮ್ಮ ನಿರ್ಮಾಣದ ಮತ್ತು ನಟನೆಯ ‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ ಚಿತ್ರರಂಗದಿಂದ ದೂರ ಸರಿಯುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ.
‘ಭೈರಾದೇವಿ’ ಚಿತ್ರದ ಟ್ರೇಲರ್ ಶನಿವಾರ ರಾತ್ರಿ ಮಂತ್ರಿ ಮಾಲ್ನಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಹಲವು ವಿಷಯಗಳನ್ನು ಮಾತನಾಡಿರುವ ರಾಧಿಕಾ ಕುಮಾರಸ್ವಾಮಿ, ಚಿತ್ರ ಗೆಲ್ಲದಿದ್ದರೆ ಇದೇ ತಮ್ಮ ಕೊನೆಯ ಚಿತ್ರವಾಗಲಿದೆ ಎಂದಿದ್ದಾರೆ.
ಈ ಕುರಿತು ಮಾತನಾಡಿರುವ ರಾಧಿಕಾ, ‘ನಿರ್ದೇಶಕ ಶ್ರೀಜೈ ಕಥ ಹೇಳಿದಾಗಲೇ, ಈ ಸಿನಿಮಾ ಗೆದ್ದರೆ, ಪ್ರೇಕ್ಷಕರಿಗೆ ಇಷ್ಟ ಆದರೆ ಇನ್ನೊಂದು ಸಿನಿಮಾ ಮಾಡುತ್ತೇನೆ. ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದ ದೂರ ಆಗಿಬಿಡುತ್ತೇನೆ ಎಂದು ಅವರಿಗೆ ಹೇಳಿದ್ದೆ. ಇದು ಇಷ್ಟವಾದರೆ, ಸಿನಿಪಯಣ ಮುಂದುವರೆಸುತ್ತೇನೆ. ಇಲ್ಲವಾದರೆ, ನಾನು ನಟನೆ ಮಾಡಿದ ಕೊನೆಯ ಸಿನಿಮಾ ಇದಾಗಿರುತ್ತದೆ’ ಎಂದು ಘೋಷಿಸಿದರು.
‘ಭೈರಾದೇವಿ’ ಚಿತ್ರ ಮಾಡುವಾಗ ಅವರು ಹಲವು ಸಮಸ್ಯೆಗಳನ್ನು ಎದುರಿಸಿದ್ದಾರಂತೆ. ‘ಈ ಚಿತ್ರಕ್ಕಾಗಿ ಹಲವು ತೊಂದರೆಗಳನ್ನು ಅನುಭವಿಸಿದ್ದೇನೆ. ಬರೀ ನಾನಷ್ಟೇ ಅಲ್ಲ, ಈ ಹಾಡಿನ ಹಿಂದೆ ಹಲವರ ಶ್ರಮ ಇದೆ. ಅಘೋರಿ ಗೆಟಪ್ ಹಾಕಿಕೊಂಡು ಹೆಣ್ಮಕ್ಕಳು ಅಳೋರು. ಮೈ ಉರಿಯುತ್ತಿದೆ ಎಂದು ಹೇಳುತ್ತಿದ್ದರು. ತುಂಬಾ ಸಮಸ್ಯೆ ಎದುರಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಸಿನಿಮಾ ನೋಡಿ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿದರೆ, ಇನ್ನಷ್ಟು ಚಿತ್ರಗಳನ್ನು ಮಾಡಬಹುದು’ ಎಂದರು.
ಹಾಡಿನ ಸಮಯದಲ್ಲಿ ತಾವು ಎದುರಿಸಿದ ಸಮಸ್ಯೆ ಕುರಿತು ಮಾತನಾಡಿದ ರಾಧಿಕಾ, ‘ಕಾಳಿ ಹಾಡಿನ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ನನಗೆ ಬಹಳ ಸುಸ್ತಾಗುತ್ತಿತ್ತು. ಮೊದಲ ದಿನ ಚಿತ್ರೀಕರಣ ಮಾಡುವಾಗ ನಡೆಯೋಕೆ, ಎದ್ದು ನಿಲ್ಲೋಕೂ ಆಗುತ್ತಿರಲಿಲ್ಲ. ಆ ಗೆಟಪ್ ಹಾಕಿದ ತಕ್ಷಣ ತಲೆ ಎತ್ತೋಕೂ ಆಗುತ್ತಿರಲಿಲ್ಲ. ಕೊನೆಗೆ ನಮ್ಮ ತಂಡದವರು ಅಲ್ಲೇ ಇದ್ದ ಒಂದು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದೃಷ್ಟಿ ತೆಗೆದರು. ಆ ನಂತರ ಚಿತ್ರೀಕರಣ ಶುರು ಮಾಡಿದೆವು’ ಎಂದರು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…