ಅಕ್ಟೋಬರ್ 03ರಂದು ಬಿಡುಗಡೆಯಾಗುತ್ತಿರುವ ತಮ್ಮ ನಿರ್ಮಾಣದ ಮತ್ತು ನಟನೆಯ ‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ ಚಿತ್ರರಂಗದಿಂದ ದೂರ ಸರಿಯುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ.
‘ಭೈರಾದೇವಿ’ ಚಿತ್ರದ ಟ್ರೇಲರ್ ಶನಿವಾರ ರಾತ್ರಿ ಮಂತ್ರಿ ಮಾಲ್ನಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಹಲವು ವಿಷಯಗಳನ್ನು ಮಾತನಾಡಿರುವ ರಾಧಿಕಾ ಕುಮಾರಸ್ವಾಮಿ, ಚಿತ್ರ ಗೆಲ್ಲದಿದ್ದರೆ ಇದೇ ತಮ್ಮ ಕೊನೆಯ ಚಿತ್ರವಾಗಲಿದೆ ಎಂದಿದ್ದಾರೆ.
ಈ ಕುರಿತು ಮಾತನಾಡಿರುವ ರಾಧಿಕಾ, ‘ನಿರ್ದೇಶಕ ಶ್ರೀಜೈ ಕಥ ಹೇಳಿದಾಗಲೇ, ಈ ಸಿನಿಮಾ ಗೆದ್ದರೆ, ಪ್ರೇಕ್ಷಕರಿಗೆ ಇಷ್ಟ ಆದರೆ ಇನ್ನೊಂದು ಸಿನಿಮಾ ಮಾಡುತ್ತೇನೆ. ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದ ದೂರ ಆಗಿಬಿಡುತ್ತೇನೆ ಎಂದು ಅವರಿಗೆ ಹೇಳಿದ್ದೆ. ಇದು ಇಷ್ಟವಾದರೆ, ಸಿನಿಪಯಣ ಮುಂದುವರೆಸುತ್ತೇನೆ. ಇಲ್ಲವಾದರೆ, ನಾನು ನಟನೆ ಮಾಡಿದ ಕೊನೆಯ ಸಿನಿಮಾ ಇದಾಗಿರುತ್ತದೆ’ ಎಂದು ಘೋಷಿಸಿದರು.
‘ಭೈರಾದೇವಿ’ ಚಿತ್ರ ಮಾಡುವಾಗ ಅವರು ಹಲವು ಸಮಸ್ಯೆಗಳನ್ನು ಎದುರಿಸಿದ್ದಾರಂತೆ. ‘ಈ ಚಿತ್ರಕ್ಕಾಗಿ ಹಲವು ತೊಂದರೆಗಳನ್ನು ಅನುಭವಿಸಿದ್ದೇನೆ. ಬರೀ ನಾನಷ್ಟೇ ಅಲ್ಲ, ಈ ಹಾಡಿನ ಹಿಂದೆ ಹಲವರ ಶ್ರಮ ಇದೆ. ಅಘೋರಿ ಗೆಟಪ್ ಹಾಕಿಕೊಂಡು ಹೆಣ್ಮಕ್ಕಳು ಅಳೋರು. ಮೈ ಉರಿಯುತ್ತಿದೆ ಎಂದು ಹೇಳುತ್ತಿದ್ದರು. ತುಂಬಾ ಸಮಸ್ಯೆ ಎದುರಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಸಿನಿಮಾ ನೋಡಿ ಪ್ರೋತ್ಸಾಹಿಸಿ, ಆಶೀರ್ವಾದ ಮಾಡಿದರೆ, ಇನ್ನಷ್ಟು ಚಿತ್ರಗಳನ್ನು ಮಾಡಬಹುದು’ ಎಂದರು.
ಹಾಡಿನ ಸಮಯದಲ್ಲಿ ತಾವು ಎದುರಿಸಿದ ಸಮಸ್ಯೆ ಕುರಿತು ಮಾತನಾಡಿದ ರಾಧಿಕಾ, ‘ಕಾಳಿ ಹಾಡಿನ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ನನಗೆ ಬಹಳ ಸುಸ್ತಾಗುತ್ತಿತ್ತು. ಮೊದಲ ದಿನ ಚಿತ್ರೀಕರಣ ಮಾಡುವಾಗ ನಡೆಯೋಕೆ, ಎದ್ದು ನಿಲ್ಲೋಕೂ ಆಗುತ್ತಿರಲಿಲ್ಲ. ಆ ಗೆಟಪ್ ಹಾಕಿದ ತಕ್ಷಣ ತಲೆ ಎತ್ತೋಕೂ ಆಗುತ್ತಿರಲಿಲ್ಲ. ಕೊನೆಗೆ ನಮ್ಮ ತಂಡದವರು ಅಲ್ಲೇ ಇದ್ದ ಒಂದು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದೃಷ್ಟಿ ತೆಗೆದರು. ಆ ನಂತರ ಚಿತ್ರೀಕರಣ ಶುರು ಮಾಡಿದೆವು’ ಎಂದರು.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…