ಬೆಂಗಳೂರು: ಪುನೀತ್ ರಾಜ್ಕುಮಾರ್ ಪತ್ನಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಬಗ್ಗೆ ಇಂದು (ಏ.೬) ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ʼಪಾಸಿಟಿವ್ ಮತ್ತು ನೆಗಟಿವ್ ಹೇಗೆ ತೆಗೆದುಕೊಳ್ಳುತ್ತಿರಿʼ ಎಂದು ಮಾಧ್ಯಮದವರು ಕೇಳಿದ್ದಾರೆ. ಇದಕ್ಕೆ ಅವರು ನೇರ ಉತ್ತರ ನೀಡಿದ್ದಾರೆ. ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನು ಸಮಾನವಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ ಅಶ್ವಿನಿ ಪುನೀತ್ ರಾಜ್ಕುಮಾರ್. ಈ ಮೂಲಕ ಅವರು ಅವಹೇಳಕಾರಿ ಪೋಸ್ಟ್ ಬಗ್ಗೆ ಪರೋಕ್ಷವಾಗಿ ಉತ್ತರಿಸಿದ್ದಾರೆ.
ಪಿಆರ್ಕೆ ಸ್ಟುಡಿಯೋಸ್ ಅಡಿಯಲ್ಲಿ ಸಿದ್ಧವಾಗುತ್ತಿದ್ದ ಸಿನಿಮಾಗಳಿಗೆ ಪುನೀತ್ ಅವರು ಕಥೆ ಕೇಳಿ ಪೈನಲ್ ಮಾಡುತ್ತಿದ್ದರು. ʻಒ2ʼ ಚಿತ್ರದವರೆಗೂ ಅಪ್ಪು ಕಥೆಯನ್ನು ಕೇಳಿದ್ದರು. ಇನ್ಮುಂದೆ ನಾನು ಮತ್ತು ನನ್ನ ಟೀಮ್ ನಿರ್ಧಾರ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಗಜನಪಡೆ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಆರ್ಸಿಬಿ ಸೋಲಿಗೆ ನೇರ ಹೊಣೆ ಅಶ್ವಿನಿ ಎಂದು ಟ್ವೀಟ್ ಮಾಡಿ, ವೈರಲ್ ಆದ ಬಳಿಕ ಸುದೀಪ್ ಹೆಸರಿಗೆ ಅಕೌಂಟ್ ಬದಲಿಸಿಕೊಂಡು ಸ್ಟಾರ್ ವಾರ್ಗೆ ಕಾರಣವಾಗಿದ್ದ ವಿಚಾರದ ಬಗ್ಗೆ ಸದ್ಯ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…