ಬೆಂಗಳೂರು: ಪುನೀತ್ ರಾಜ್ಕುಮಾರ್ ಪತ್ನಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಬಗ್ಗೆ ಇಂದು (ಏ.೬) ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ʼಪಾಸಿಟಿವ್ ಮತ್ತು ನೆಗಟಿವ್ ಹೇಗೆ ತೆಗೆದುಕೊಳ್ಳುತ್ತಿರಿʼ ಎಂದು ಮಾಧ್ಯಮದವರು ಕೇಳಿದ್ದಾರೆ. ಇದಕ್ಕೆ ಅವರು ನೇರ ಉತ್ತರ ನೀಡಿದ್ದಾರೆ. ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನು ಸಮಾನವಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ ಅಶ್ವಿನಿ ಪುನೀತ್ ರಾಜ್ಕುಮಾರ್. ಈ ಮೂಲಕ ಅವರು ಅವಹೇಳಕಾರಿ ಪೋಸ್ಟ್ ಬಗ್ಗೆ ಪರೋಕ್ಷವಾಗಿ ಉತ್ತರಿಸಿದ್ದಾರೆ.
ಪಿಆರ್ಕೆ ಸ್ಟುಡಿಯೋಸ್ ಅಡಿಯಲ್ಲಿ ಸಿದ್ಧವಾಗುತ್ತಿದ್ದ ಸಿನಿಮಾಗಳಿಗೆ ಪುನೀತ್ ಅವರು ಕಥೆ ಕೇಳಿ ಪೈನಲ್ ಮಾಡುತ್ತಿದ್ದರು. ʻಒ2ʼ ಚಿತ್ರದವರೆಗೂ ಅಪ್ಪು ಕಥೆಯನ್ನು ಕೇಳಿದ್ದರು. ಇನ್ಮುಂದೆ ನಾನು ಮತ್ತು ನನ್ನ ಟೀಮ್ ನಿರ್ಧಾರ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಗಜನಪಡೆ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಆರ್ಸಿಬಿ ಸೋಲಿಗೆ ನೇರ ಹೊಣೆ ಅಶ್ವಿನಿ ಎಂದು ಟ್ವೀಟ್ ಮಾಡಿ, ವೈರಲ್ ಆದ ಬಳಿಕ ಸುದೀಪ್ ಹೆಸರಿಗೆ ಅಕೌಂಟ್ ಬದಲಿಸಿಕೊಂಡು ಸ್ಟಾರ್ ವಾರ್ಗೆ ಕಾರಣವಾಗಿದ್ದ ವಿಚಾರದ ಬಗ್ಗೆ ಸದ್ಯ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…