ಬೆಂಗಳೂರು: ಪುನೀತ್ ರಾಜ್ಕುಮಾರ್ ಪತ್ನಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಬಗ್ಗೆ ಇಂದು (ಏ.೬) ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ʼಪಾಸಿಟಿವ್ ಮತ್ತು ನೆಗಟಿವ್ ಹೇಗೆ ತೆಗೆದುಕೊಳ್ಳುತ್ತಿರಿʼ ಎಂದು ಮಾಧ್ಯಮದವರು ಕೇಳಿದ್ದಾರೆ. ಇದಕ್ಕೆ ಅವರು ನೇರ ಉತ್ತರ ನೀಡಿದ್ದಾರೆ. ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನು ಸಮಾನವಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ ಅಶ್ವಿನಿ ಪುನೀತ್ ರಾಜ್ಕುಮಾರ್. ಈ ಮೂಲಕ ಅವರು ಅವಹೇಳಕಾರಿ ಪೋಸ್ಟ್ ಬಗ್ಗೆ ಪರೋಕ್ಷವಾಗಿ ಉತ್ತರಿಸಿದ್ದಾರೆ.
ಪಿಆರ್ಕೆ ಸ್ಟುಡಿಯೋಸ್ ಅಡಿಯಲ್ಲಿ ಸಿದ್ಧವಾಗುತ್ತಿದ್ದ ಸಿನಿಮಾಗಳಿಗೆ ಪುನೀತ್ ಅವರು ಕಥೆ ಕೇಳಿ ಪೈನಲ್ ಮಾಡುತ್ತಿದ್ದರು. ʻಒ2ʼ ಚಿತ್ರದವರೆಗೂ ಅಪ್ಪು ಕಥೆಯನ್ನು ಕೇಳಿದ್ದರು. ಇನ್ಮುಂದೆ ನಾನು ಮತ್ತು ನನ್ನ ಟೀಮ್ ನಿರ್ಧಾರ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಗಜನಪಡೆ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಆರ್ಸಿಬಿ ಸೋಲಿಗೆ ನೇರ ಹೊಣೆ ಅಶ್ವಿನಿ ಎಂದು ಟ್ವೀಟ್ ಮಾಡಿ, ವೈರಲ್ ಆದ ಬಳಿಕ ಸುದೀಪ್ ಹೆಸರಿಗೆ ಅಕೌಂಟ್ ಬದಲಿಸಿಕೊಂಡು ಸ್ಟಾರ್ ವಾರ್ಗೆ ಕಾರಣವಾಗಿದ್ದ ವಿಚಾರದ ಬಗ್ಗೆ ಸದ್ಯ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…