ಮನರಂಜನೆ

ವಿಷ್ಣುವರ್ಧನ್‍ ಅವರಿಗಾಗಿ ನನ್ನ ಜಮೀನಿನಲ್ಲೇ ಜಾಗ ಕೊಡುತ್ತಿದ್ದೆ: ನಟಿ ಶ್ರುತಿ

ಡಾ.ವಿಷ್ಣುವರ್ಧನ್‍ ಅವರ ಪುಣ್ಯಭೂಮಿ ವಿಷಯದಲ್ಲಿ ಇಷ್ಟೊಂದು ಗೊಂದಲ ಆಗುತ್ತದೆ ಎಂದು ಗೊತ್ತಿದ್ದರೆ, ನಾನೇ ನನ್ನ ಜಮೀನಿನಲ್ಲಿ ಬೇಕಾದರೆ ಜಾಗ ಕೊಡುತ್ತಿದ್ದೆ ಎಂದು ಹಿರಿಯ ನಟಿ ಶ್ರುತಿ ಹೇಳಿದ್ದಾರೆ.

ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ಗುರುವಾರ ರಾತ್ರೋರಾತ್ರಿ ನೆಲೆಸಮ ಮಾಡಲಾಗಿದೆ. ಈ ಬಗ್ಗೆ ಅಭಿಮಾನಿಗಳು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ರರಂಗದವರು ಸಹ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಸುದೀಪ್‍, ರಿಷಭ್‍ ಶೆಟ್ಟಿ, ಧ್ರುವ ಸರ್ಜಾ ಮುಂತಾದವರು ತಾವು ಹೋರಾಟಕ್ಕೆ ಸಿದ್ಧ ಎನ್ನುವಂತಹ ಮಾತುಗಳನ್ನಾಡಿದ್ದಾರೆ.

ಶನಿವಾರ ನಡೆದ ‘ಏಳುಮಲೆ’ ಚಿತ್ರದ ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ಹಿರಿಯ ನಟಿ ಶ್ರುತಿ, ‘ಈ ವಿಷಯ ನ್ಯಾಯಾಲಯದ ಮೆಟ್ಟಿಲೇರಿತು ಎಂಬುದೇ ಬೇಸರದ ಸಂಗತಿ. ವಿಷ್ಣುವರ್ಧನ್‍ ಅವರು ಎಂಥಾ ದೊಡ್ಡ ಲೆಜೆಂಡ್‍ ಎಂದರೆ, ನಾವು ಮಣ್ಣಾಗಿ ಹೋದರೂ, ಅವರು ಮಣ್ಣಾಗುವುದಿಲ್ಲ. ಇವತ್ತು ಅವರನ್ನು ಮಣ್ಣು ಮಾಡಿದ ಜಾಗದಲ್ಲಿ ಇಷ್ಟೊಂದು ಗೊಂದಲ, ವಿವಾದ ನೋಡಿ ನಿಜಕ್ಕೂ ಬೇಸರವಾಗುತ್ತದೆ. ಕನ್ನಡದ ಒಬ್ಬ ಮೇರುನಟನ ಪುಣ್ಯಭೂಮಿಯನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಇಷ್ಟೊಂದು ಗೊಂದಲದ ಅವಶ್ಯಕತೆ ಇರಲಿಲ್ಲ. ವಿಷ್ಣುವರ್ಧನ್‍ ಅವರನ್ನು ನಾವು ಬಹಳ ಪ್ರೀತಿಯಿಂದ ನೆನಪಿಸಿಕೊಳ್ಳಬೇಕಿತ್ತು. ಪ್ರತೀ ವರ್ಷ ನಾವು ಆ ಜಾಗಕ್ಕೆ ಹೋಗುತ್ತಿದ್ದೆವು. ಅವರನ್ನು ನೆನಪಿಸಿಕೊಳ್ಳಲು ಒಂದು ಜಾಗ ಬೇಕು ಎಂದು ಹೇಳುತ್ತಿಲ್ಲ. ನಾವು ನಮ್ಮ ಹೃದಯದಲ್ಲಿ ಅವರಿಗೆ ಬಹಳ ದೊಡ್ಡ ಜಾಗವನ್ನು ಕೊಟ್ಟಿದ್ದೇವೆ. ಅದನ್ನು ಯಾರೂ ಕಿತ್ತುಕೊಳ್ಳೋಕೆ, ನೆಲಸಮ ಮಾಡುವುದಕ್ಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ಈ ತರಹದ್ದೊಂದು ವಿಷಯ ಆಗಬಾರದಾಗಿತ್ತು ಎಂಬ ನೋವು ಸದಾ ಇರುತ್ತದೆ ಎಂದ ಶ್ರುತಿ, ‘ನ್ಯಾಯಾಲಯದಲ್ಲಿರುವುದರಿಂದ ನಾವು ಏನೂ ಮಾಡೋಕೆ ಸಾಧ್ಯವಿರಲಿಲ್ಲ. ವಿಷ್ಣುವರ್ಧನ್‍ ಅವರಿಗೆ ನಮ್ಮ ಹೃದಯದಲ್ಲಿ ಜಾಗ ಕೊಟ್ಟವರಿಗೆ ಮನೆಯಲ್ಲಿ ಕೊಡೋಕೆ ಆಗುವುದಿಲ್ಲವಾ? ನಮ್ಮ ಜಮೀನಲ್ಲಿ ಜಾಗ ಕೊಡುತ್ತಿದ್ದೆವು. ಆದರೆ, ಇಷ್ಟೊಂದು ಗೊಂದಲ ಆಗುತ್ತದೆ ಎಂದು ಯಾರಿಗೆ ಗೊತ್ತಿತ್ತು. ಆ ಜಾಗದಲ್ಲಿ ವಿವಾದ, ಗೊಂದಲವಿದೆ ಎಂದೇ ಗೊತ್ತಿರಲಿಲ್ಲ. ಇದು ಗೊತ್ತಿದ್ದರೆ ನಾನೇ ಜಾಗ ಕೊಡುತ್ತಿದ್ದೆ. ನನ್ನದೇ ಪುಟ್ಟ ಜಾಗವಿದೆ. ಖಂಡಿತವಾಗಿಯೂ ಕೊಡುತ್ತಿದ್ದೆ. ಇದು ದುರ್ವಿಧಿ. ಅಲ್ಲಿ ಹೀಗಾಗಬಹುದು ಎಂದು ಯಾರಿಗೂ ಗೊತ್ತಿರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

3 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

3 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

3 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago