ಮನರಂಜನೆ

ವಿಷ್ಣುವರ್ಧನ್‍ ಅವರಿಗಾಗಿ ನನ್ನ ಜಮೀನಿನಲ್ಲೇ ಜಾಗ ಕೊಡುತ್ತಿದ್ದೆ: ನಟಿ ಶ್ರುತಿ

ಡಾ.ವಿಷ್ಣುವರ್ಧನ್‍ ಅವರ ಪುಣ್ಯಭೂಮಿ ವಿಷಯದಲ್ಲಿ ಇಷ್ಟೊಂದು ಗೊಂದಲ ಆಗುತ್ತದೆ ಎಂದು ಗೊತ್ತಿದ್ದರೆ, ನಾನೇ ನನ್ನ ಜಮೀನಿನಲ್ಲಿ ಬೇಕಾದರೆ ಜಾಗ ಕೊಡುತ್ತಿದ್ದೆ ಎಂದು ಹಿರಿಯ ನಟಿ ಶ್ರುತಿ ಹೇಳಿದ್ದಾರೆ.

ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ಗುರುವಾರ ರಾತ್ರೋರಾತ್ರಿ ನೆಲೆಸಮ ಮಾಡಲಾಗಿದೆ. ಈ ಬಗ್ಗೆ ಅಭಿಮಾನಿಗಳು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ರರಂಗದವರು ಸಹ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಸುದೀಪ್‍, ರಿಷಭ್‍ ಶೆಟ್ಟಿ, ಧ್ರುವ ಸರ್ಜಾ ಮುಂತಾದವರು ತಾವು ಹೋರಾಟಕ್ಕೆ ಸಿದ್ಧ ಎನ್ನುವಂತಹ ಮಾತುಗಳನ್ನಾಡಿದ್ದಾರೆ.

ಶನಿವಾರ ನಡೆದ ‘ಏಳುಮಲೆ’ ಚಿತ್ರದ ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ಹಿರಿಯ ನಟಿ ಶ್ರುತಿ, ‘ಈ ವಿಷಯ ನ್ಯಾಯಾಲಯದ ಮೆಟ್ಟಿಲೇರಿತು ಎಂಬುದೇ ಬೇಸರದ ಸಂಗತಿ. ವಿಷ್ಣುವರ್ಧನ್‍ ಅವರು ಎಂಥಾ ದೊಡ್ಡ ಲೆಜೆಂಡ್‍ ಎಂದರೆ, ನಾವು ಮಣ್ಣಾಗಿ ಹೋದರೂ, ಅವರು ಮಣ್ಣಾಗುವುದಿಲ್ಲ. ಇವತ್ತು ಅವರನ್ನು ಮಣ್ಣು ಮಾಡಿದ ಜಾಗದಲ್ಲಿ ಇಷ್ಟೊಂದು ಗೊಂದಲ, ವಿವಾದ ನೋಡಿ ನಿಜಕ್ಕೂ ಬೇಸರವಾಗುತ್ತದೆ. ಕನ್ನಡದ ಒಬ್ಬ ಮೇರುನಟನ ಪುಣ್ಯಭೂಮಿಯನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಇಷ್ಟೊಂದು ಗೊಂದಲದ ಅವಶ್ಯಕತೆ ಇರಲಿಲ್ಲ. ವಿಷ್ಣುವರ್ಧನ್‍ ಅವರನ್ನು ನಾವು ಬಹಳ ಪ್ರೀತಿಯಿಂದ ನೆನಪಿಸಿಕೊಳ್ಳಬೇಕಿತ್ತು. ಪ್ರತೀ ವರ್ಷ ನಾವು ಆ ಜಾಗಕ್ಕೆ ಹೋಗುತ್ತಿದ್ದೆವು. ಅವರನ್ನು ನೆನಪಿಸಿಕೊಳ್ಳಲು ಒಂದು ಜಾಗ ಬೇಕು ಎಂದು ಹೇಳುತ್ತಿಲ್ಲ. ನಾವು ನಮ್ಮ ಹೃದಯದಲ್ಲಿ ಅವರಿಗೆ ಬಹಳ ದೊಡ್ಡ ಜಾಗವನ್ನು ಕೊಟ್ಟಿದ್ದೇವೆ. ಅದನ್ನು ಯಾರೂ ಕಿತ್ತುಕೊಳ್ಳೋಕೆ, ನೆಲಸಮ ಮಾಡುವುದಕ್ಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ಈ ತರಹದ್ದೊಂದು ವಿಷಯ ಆಗಬಾರದಾಗಿತ್ತು ಎಂಬ ನೋವು ಸದಾ ಇರುತ್ತದೆ ಎಂದ ಶ್ರುತಿ, ‘ನ್ಯಾಯಾಲಯದಲ್ಲಿರುವುದರಿಂದ ನಾವು ಏನೂ ಮಾಡೋಕೆ ಸಾಧ್ಯವಿರಲಿಲ್ಲ. ವಿಷ್ಣುವರ್ಧನ್‍ ಅವರಿಗೆ ನಮ್ಮ ಹೃದಯದಲ್ಲಿ ಜಾಗ ಕೊಟ್ಟವರಿಗೆ ಮನೆಯಲ್ಲಿ ಕೊಡೋಕೆ ಆಗುವುದಿಲ್ಲವಾ? ನಮ್ಮ ಜಮೀನಲ್ಲಿ ಜಾಗ ಕೊಡುತ್ತಿದ್ದೆವು. ಆದರೆ, ಇಷ್ಟೊಂದು ಗೊಂದಲ ಆಗುತ್ತದೆ ಎಂದು ಯಾರಿಗೆ ಗೊತ್ತಿತ್ತು. ಆ ಜಾಗದಲ್ಲಿ ವಿವಾದ, ಗೊಂದಲವಿದೆ ಎಂದೇ ಗೊತ್ತಿರಲಿಲ್ಲ. ಇದು ಗೊತ್ತಿದ್ದರೆ ನಾನೇ ಜಾಗ ಕೊಡುತ್ತಿದ್ದೆ. ನನ್ನದೇ ಪುಟ್ಟ ಜಾಗವಿದೆ. ಖಂಡಿತವಾಗಿಯೂ ಕೊಡುತ್ತಿದ್ದೆ. ಇದು ದುರ್ವಿಧಿ. ಅಲ್ಲಿ ಹೀಗಾಗಬಹುದು ಎಂದು ಯಾರಿಗೂ ಗೊತ್ತಿರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

11 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

11 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

11 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

12 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

12 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

13 hours ago