ಮನರಂಜನೆ

ಕ್ಷಮೆ ಕೇಳದಿದ್ದರೆ ರಾಜ್ಯದಲ್ಲಿ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆಗೆ ನಿಷೇಧ

ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್‍ ಹಾಸನ್‍, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್‍ ಲೈಫ್‍’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮದಲ್ಲಿ ಮಾತನಾಡುವ ಭರದಲ್ಲಿ ‘ಕನ್ನಡವು ತಮಿಳಿನಿಂದ ಹುಟ್ಟಿತು …’ ಎಂದು ಕಮಲ್‍ ಹಾಸನ್‍ ಹೇಳಿದ್ದರು. ನಟ ಶಿವರಾಜಕುಮಾರ್‍ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

ಕಮಲ್‍ ಹಾಸನ್‍ ಅವರ ಈ ಹೇಳಿಕೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅವರು ಕ್ಷಮಾಪಣೆ ಕೇಳಬೇಕು ಎಂಬ ಒತ್ತಾಯ ಹೆಚ್ಚಾಯಿತು. ಆದರೆ, ಕಮಲ್‍ ಹಾಸನ್‍ ತಾವು ಕ್ಷಮಾಪಣೆ ಕೇಳುವುದಿಲ್ಲ ಎಂದು ಹೇಳಿದ್ದರು. ‘ಇತಿಹಾಸಕಾರರು ಹೇಳಿದ್ದನ್ನೇ ನಾನು ಹೇಳಿದ್ದೇನೆ, ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ. ಪ್ರೀತಿಯಲ್ಲಿ ಕ್ಷಮೆಯ ಮಾತು ಬರುವುದಿಲ್ಲ’ ಎಂದು ಹೇಳಿದ್ದರು.

ಕಮಲ್‍ ಅವರ ಹೇಳಿಕೆಯನ್ನು ವಿರೋಧಿಸಿ, ಕನ್ನಡಪರ ಹೋರಾಟಗಾರರು ಗುರುವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕಿದರು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣ ಮುತ್ತಿಗೆ ಹಾಕಿ ಕಮಲ್ ಕ್ಷಮೆ ಕೇಳೋವರೆಗೂ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿದರು.

ನಂತರ ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ‘ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳು ಸಂಸ್ಥೆಗಳು ಕಮಲ್‍ ಹಾಸನ್‍ ಅವರ ಮಾತುಗಳನ್ನು ಖಂಡಿಸಿವೆ. ಅವರ ಹೊಸ ಚಿತ್ರಗೆ ನಿರ್ಬಂಧ ಹಾಕಬೇಕು ಎಂದು ಹೇಳಿವೆ. ಕಮಲ್ ಹಾಸನ್ ಮಾಡಿರುವ ತಪ್ಪನ್ನ ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕ್ಷಮೆ ಯಾಚಿಸದ ಹೊರತು ಚಿತ್ರ ಬಿಡುಗಡೆ ಮಾಡದಂತೆ ಈಗಾಗಲೇ ರಾಜ್ಯದಲ್ಲಿ ಚಿತ್ರ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರಿಗೆ ಸೂಚಿಸಲಾಗಿದೆ. ಕಮಲ್‍ ಹಾಸನ್‍ ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ, ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

33 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago