ಮನರಂಜನೆ

ಕ್ಷಮೆ ಕೇಳದಿದ್ದರೆ ರಾಜ್ಯದಲ್ಲಿ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆಗೆ ನಿಷೇಧ

ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್‍ ಹಾಸನ್‍, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್‍ ಲೈಫ್‍’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮದಲ್ಲಿ ಮಾತನಾಡುವ ಭರದಲ್ಲಿ ‘ಕನ್ನಡವು ತಮಿಳಿನಿಂದ ಹುಟ್ಟಿತು …’ ಎಂದು ಕಮಲ್‍ ಹಾಸನ್‍ ಹೇಳಿದ್ದರು. ನಟ ಶಿವರಾಜಕುಮಾರ್‍ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

ಕಮಲ್‍ ಹಾಸನ್‍ ಅವರ ಈ ಹೇಳಿಕೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅವರು ಕ್ಷಮಾಪಣೆ ಕೇಳಬೇಕು ಎಂಬ ಒತ್ತಾಯ ಹೆಚ್ಚಾಯಿತು. ಆದರೆ, ಕಮಲ್‍ ಹಾಸನ್‍ ತಾವು ಕ್ಷಮಾಪಣೆ ಕೇಳುವುದಿಲ್ಲ ಎಂದು ಹೇಳಿದ್ದರು. ‘ಇತಿಹಾಸಕಾರರು ಹೇಳಿದ್ದನ್ನೇ ನಾನು ಹೇಳಿದ್ದೇನೆ, ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ. ಪ್ರೀತಿಯಲ್ಲಿ ಕ್ಷಮೆಯ ಮಾತು ಬರುವುದಿಲ್ಲ’ ಎಂದು ಹೇಳಿದ್ದರು.

ಕಮಲ್‍ ಅವರ ಹೇಳಿಕೆಯನ್ನು ವಿರೋಧಿಸಿ, ಕನ್ನಡಪರ ಹೋರಾಟಗಾರರು ಗುರುವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕಿದರು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣ ಮುತ್ತಿಗೆ ಹಾಕಿ ಕಮಲ್ ಕ್ಷಮೆ ಕೇಳೋವರೆಗೂ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿದರು.

ನಂತರ ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ‘ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳು ಸಂಸ್ಥೆಗಳು ಕಮಲ್‍ ಹಾಸನ್‍ ಅವರ ಮಾತುಗಳನ್ನು ಖಂಡಿಸಿವೆ. ಅವರ ಹೊಸ ಚಿತ್ರಗೆ ನಿರ್ಬಂಧ ಹಾಕಬೇಕು ಎಂದು ಹೇಳಿವೆ. ಕಮಲ್ ಹಾಸನ್ ಮಾಡಿರುವ ತಪ್ಪನ್ನ ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕ್ಷಮೆ ಯಾಚಿಸದ ಹೊರತು ಚಿತ್ರ ಬಿಡುಗಡೆ ಮಾಡದಂತೆ ಈಗಾಗಲೇ ರಾಜ್ಯದಲ್ಲಿ ಚಿತ್ರ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರಿಗೆ ಸೂಚಿಸಲಾಗಿದೆ. ಕಮಲ್‍ ಹಾಸನ್‍ ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ, ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

4 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

6 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

7 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

7 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

8 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

9 hours ago