ಮನರಂಜನೆ

ಸಿದ್ದರಾಮಯ್ಯ ಇರದಿದ್ದರೆ ಚಿತ್ರನಗರಿ ಕನಸಿನ ಮಾತು: ರಾಜೇಂದ್ರ ಸಿಂಗ್‍ ಬಾಬು

ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಚಿತ್ರನಗರಿಯು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾಲದಲ್ಲಿ ಆದರೆ ಆಯಿತು, ಇಲ್ಲವಾದರೆ ಅದು ಕನಸಿನ ಮಾತು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್‍ ಬಾಬು ಹೇಳಿದ್ದಾರೆ.

‘ರಕ್ತ ಕಾಶ್ಮೀರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ದೇವರಾಜ ಅರಸರ ಕಾಲದಿಂದ ಇಲ್ಲಿಯವರೆಗೂ ಇಲ್ಲಿ ಚಿತ್ರನಗರಿ ಆಗುವುದಕ್ಕೂ ಬಿಡುತ್ತಿಲ್ಲ. ಚಿತ್ರ ನಗರಿಗಾಗಿ ಮೈಸೂರಿನಲ್ಲಿ 150 ಎಕರೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಇರುವವರೆಗೂ ಫಿಲಂ ಸಿಟಿ ಆದರೆ ಉಂಟು, ಇಲ್ಲವಾದರೆ ಖಂಡಿತಾ ಆಗುವುದಿಲ್ಲ. ಅವರಿಗೆ ಸಿನಿಮಾ ಬಗ್ಗೆ ಕಾಳಜಿ, ಕನಿಕರ ಇದೆ. ಆದರೆ, ಅಧಿಕಾರಿಗಳು ಅದನ್ನು ತಡೆ ಹಿಡಿಯುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ವೈಡ್‌ ಆಂಗಲ್: ಉದ್ಯಮದತ್ತ ಸರ್ಕಾರದ ಗಮನ; ಚಿತ್ರನಗರಿ ಯೋಜನೆಗೆ ಮತ್ತೆ ಚಾಲನೆ

ಬರೀ ಚಿತ್ರನಗರಿಯಷ್ಟೇ ಅಲ್ಲ, ಜನತಾ ಚಿತ್ರಮಂದಿರಗಳ ನಿರ್ಮಾಣದಲ್ಲೂ ವಿಳಂಬವಾಗುತ್ತಿದೆ ಎಂದಿರುವ ಅವರು, ‘ಚಿಕ್ಕ ಚಿತ್ರಗಳಿಗೆ ಜನತಾ ಚಿತ್ರಮಂದಿರಗಳು ಸೂಕ್ತವಾದ್ದರಿಂದ, ಜನತಾ ಚಿತ್ರಮಂದಿರಗಳನ್ನು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದ್ದೆ. ಅವರು ತಕ್ಷಣವೇ 50 ಲಕ್ಷ ರೂ. ಸಬ್ಸಿಡಿ ಘೋಷಿಸಿದರು. ಸರ್ಕಾರದ 50 ಬೈ 80 ಅಡಿ ಜಾಗ ಕೊಡಿ ಎಂದು ಆದೇಶಿಸಿದ್ದರು. ಆದರೆ, ನಮ್ಮ ದುರಾದೃಷ್ಟವೋ, ಶಾಪವೋ ಗೊತ್ತಿಲ್ಲ. ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರೂ ಅಧಿಕಾರಿಗಳು ಕೊಕ್ಕೆ ಹಾಕಿಡುತ್ತಾರೆ. ಯಾವುದೂ ಮುಂದುವರೆಯುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಿತ್ರಮಂದಿರಗಳು ಮುಚ್ಚುವುದರಿಂದ ವ್ಯಾಪಾರಕ್ಕೆ ಏಟು ಬೀಳುತ್ತಿದೆ ಎಂದಿರುವ ಅವರು, ‘ಹೆಚ್ಚು ಚಿತ್ರಮಂದಿರಗಳು ಪ್ರಾರಂಭವಾಗುವುದರಿಂದ ಸಾಕಷ್ಟು ಉದ್ಯೋಗ ಸಿಗುತ್ತದೆ. ಬಸ್‍ ನಿಲ್ದಾಣಗಳಲ್ಲಿ ಚಿತ್ರಮಂದಿರ ಪ್ರಾರಂಭ ಮಾಡಬಹುದು ಎಂದು ರಾಮಲಿಂಗಾ ರೆಡ್ಡಿ ಆದೇಶ ಮಾಡಿದರು. ಆದರೆ, ಅಧಿಕಾರಿಗಳು ಕೊಕ್ಕೆ ಇಟ್ಟಿದ್ದಾರೆ. ಒಂದೊಂದು ಪ್ರದೇಶದಲ್ಲಿ 250 ಸೀಟ್‍ಗಳಿರುವ ಚಿತ್ರಮಂದಿರಗಳು ಇದ್ದರೆ ಸಾಕು. ಇವತ್ತು ಬೆಂಗಳೂರಿನಲ್ಲೇ ಇಂದಿರಾನಗರ, ಕೋರಮಂಗಲ ಮುಂತಾದ ಕಡೆ ಚಿತ್ರಮಂದಿರಗಳೇ ಇಲ್ಲ. ಜನ ಚಿತ್ರ ನೋಡಬೇಕೆಂದರೂ, ನೋಡುವುದಕ್ಕೆ ಆಗುತ್ತಿಲ್ಲ. 75 ರೂ.ಗಳಿಗೆ ಸಿನಿಮಾ ತೋರಿಸಬೇಕೆಂಬ ಆಸೆ ಸಿದ್ದರಾಮಯ್ಯನವರದ್ದು. ಅದಕ್ಕೆ ಅಧಿಕಾರಿಗಳು ಜೀವ ಕೊಡುತ್ತಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago