‘ಕೆಡಿ – ದಿ ಡೆವಿಲ್’ ಚಿತ್ರದ ಮೊದಲ ಹಾಡು, ‘ಶಿವ ಶಿವ’ ಅತೀ ಹೆಚ್ಚು ವೀಕ್ಷಣೆಯಾಗುವ ಮೂಲಕ ಎಲ್ಲಾ ಕಡೆ ವೈರಲ್ ಆಗಿತ್ತು. ಇದೀಗ ಚಿತ್ರದ ಮತ್ತೊಂದು ಹಾಡು ‘ಸೆಟ್ಟಾಗಲ್ಲಾ ಕಣೆ ನಂಗೂ ನಿಂಗೂ …’ ಬಿಡುಗಡೆಯಾಗಿದೆ. ಪ್ರೇಮ್ ಅವರೇ ರಚಿಸಿರುವ ಈ ಹಾಡಿಗೆ ಹೆಸರಾಂತ ಗಾಯಕ ಮಿಖಾ ಸಿಂಗ್ ದನಿಯಾಗಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್ನ ಆನಂದ್ ಆಡಿಯೋ ಚಾನಲ್ನಲ್ಲಿ ಬಿಡುಗಡೆಯಾಗಿದೆ.
ಈ ಹಾಡಿಗೆ ಪ್ರೇಮ್ ಹಾಗೂ ಅರ್ಜುನ್ ಜನ್ಯ ಸೇರಿ ಹೊಸ ಐಡಿಯಾ ಹುಡುಕಿದ್ದಾರೆ. ಸದ್ಯ ಈ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಆಗಿದ್ದು, ಚಿತ್ರೀಕರಣ ಇನ್ನೂ ಆಗಬೇಕಿದೆ. ಹೌದು, ಈ ಹಾಡನ್ನು ಕೇಳಿ, ಅದಕ್ಕೆ ಸೂಕ್ತವಾದ ಒಂದು ಹುಕ್ ಸ್ಟೆನ್ನ್ನು ಪ್ರೇಕ್ಷಕರೇ ತಾವೇ ಅದನ್ನು ಚಿತ್ರತಂಡಕ್ಕೆ ಕಳಿಸಬೇಕು. ಅದರಲ್ಲಿ ಅತ್ಯುತ್ತಮವಾದ ನೃತ್ಯವನ್ನು ಆಯ್ಕೆ ಮಾಡಿ, ಹಾಡಿನಲ್ಲಿ ಬಳಸಿಕೊಳ್ಳಲಾಗುತ್ತದೆ. ಅಭಿಮಾನಿಗಳು ಹಾಕಿದ ಸ್ಟೆಪ್ ಅನ್ನು ನಾಯಕ, ನಾಯಕಿ ಹಾಡಿನಲ್ಲಿ ಹಾಕುತ್ತಾರೆ.
ಆ ಸ್ಟೆಪ್ ಕಳಿಸಿದವರನ್ನು ಕರೆಸಿ ಗೌರವಿಸುತ್ತೇವೆ ಎಂದ ನಿರ್ದೇಶಕ ಪ್ರೇಮ್, ‘ಪ್ರೇಕ್ಷಕರ ಪ್ರತಿಭೆಯನ್ನು ಪ್ರೋತ್ಸಾಹಿಸುವ ಪ್ರಯತ್ನ ಇದು. ತಮ್ಮ ಮೆಚ್ಚಿನ ಸ್ಟಾರ್ ಹೀಗೇ ಡಾನ್ಸ್ ಮಾಡಿದರೆ ಚೆನ್ನಾಗಿರುತ್ತೆ ಎಂದು ಕಲ್ಪಿಸಿಕೊಂಡಿರುತ್ತಾರೆ. ಅದು ನಮಗೂ ಚೆನ್ನಾಗಿದೆ ಎಂದೆನಿಸಿದರೆ, ಅದನ್ನು ಚಿತ್ರದಲ್ಲಿ ಬಳಸಿಕೊಳ್ಳುತ್ತೇವೆ’ ಎಂದರು.
1970-75ರ ಸಮಯದಲ್ಲಿ ನಡೆದ ನೈಜ ಘಟನೆ ಆಧಾರಿತ ಗ್ಯಾಂಗ್ಸ್ಟರ್ ಕಥೆ ಈ ಚಿತ್ರದಲ್ಲಿದೆ. ಚಿತ್ರಕ್ಕಾಗಿಯೇ 20 ಎಕರೆಯಷ್ಟು ವಿಶಾಲವಾದ ಜಾಗದಲ್ಲಿ ಬಹು ಕೋಟಿ ವೆಚ್ಚದಲ್ಲಿ ಅದ್ದೂರಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ‘ವಿಕ್ರಾಂತ್ ರೋಣ’ ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಚಿತ್ರಕ್ಕಿದ್ದು, ಸಂಜಯ್ ದತ್, ಶಿಲ್ಪಾ ಶೆಟ್ಟಿ, ನೋರಾ ಫತೇಹಿ, ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದವರು ಅಭಿನಯಿಸಿದ್ದಾರೆ.
ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಕೆಡಿ – ದಿ ಡೆವಿಲ್’ ಚಿತ್ರವು ಕನ್ನಡ, ತೆಲುಗು, ತಮಿಳು ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…