‘ಕೆಡಿ – ದಿ ಡೆವಿಲ್’ ಚಿತ್ರದ ಮೊದಲ ಹಾಡು, ‘ಶಿವ ಶಿವ’ ಅತೀ ಹೆಚ್ಚು ವೀಕ್ಷಣೆಯಾಗುವ ಮೂಲಕ ಎಲ್ಲಾ ಕಡೆ ವೈರಲ್ ಆಗಿತ್ತು. ಇದೀಗ ಚಿತ್ರದ ಮತ್ತೊಂದು ಹಾಡು ‘ಸೆಟ್ಟಾಗಲ್ಲಾ ಕಣೆ ನಂಗೂ ನಿಂಗೂ …’ ಬಿಡುಗಡೆಯಾಗಿದೆ. ಪ್ರೇಮ್ ಅವರೇ ರಚಿಸಿರುವ ಈ ಹಾಡಿಗೆ ಹೆಸರಾಂತ ಗಾಯಕ ಮಿಖಾ ಸಿಂಗ್ ದನಿಯಾಗಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್ನ ಆನಂದ್ ಆಡಿಯೋ ಚಾನಲ್ನಲ್ಲಿ ಬಿಡುಗಡೆಯಾಗಿದೆ.
ಈ ಹಾಡಿಗೆ ಪ್ರೇಮ್ ಹಾಗೂ ಅರ್ಜುನ್ ಜನ್ಯ ಸೇರಿ ಹೊಸ ಐಡಿಯಾ ಹುಡುಕಿದ್ದಾರೆ. ಸದ್ಯ ಈ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಆಗಿದ್ದು, ಚಿತ್ರೀಕರಣ ಇನ್ನೂ ಆಗಬೇಕಿದೆ. ಹೌದು, ಈ ಹಾಡನ್ನು ಕೇಳಿ, ಅದಕ್ಕೆ ಸೂಕ್ತವಾದ ಒಂದು ಹುಕ್ ಸ್ಟೆನ್ನ್ನು ಪ್ರೇಕ್ಷಕರೇ ತಾವೇ ಅದನ್ನು ಚಿತ್ರತಂಡಕ್ಕೆ ಕಳಿಸಬೇಕು. ಅದರಲ್ಲಿ ಅತ್ಯುತ್ತಮವಾದ ನೃತ್ಯವನ್ನು ಆಯ್ಕೆ ಮಾಡಿ, ಹಾಡಿನಲ್ಲಿ ಬಳಸಿಕೊಳ್ಳಲಾಗುತ್ತದೆ. ಅಭಿಮಾನಿಗಳು ಹಾಕಿದ ಸ್ಟೆಪ್ ಅನ್ನು ನಾಯಕ, ನಾಯಕಿ ಹಾಡಿನಲ್ಲಿ ಹಾಕುತ್ತಾರೆ.
ಆ ಸ್ಟೆಪ್ ಕಳಿಸಿದವರನ್ನು ಕರೆಸಿ ಗೌರವಿಸುತ್ತೇವೆ ಎಂದ ನಿರ್ದೇಶಕ ಪ್ರೇಮ್, ‘ಪ್ರೇಕ್ಷಕರ ಪ್ರತಿಭೆಯನ್ನು ಪ್ರೋತ್ಸಾಹಿಸುವ ಪ್ರಯತ್ನ ಇದು. ತಮ್ಮ ಮೆಚ್ಚಿನ ಸ್ಟಾರ್ ಹೀಗೇ ಡಾನ್ಸ್ ಮಾಡಿದರೆ ಚೆನ್ನಾಗಿರುತ್ತೆ ಎಂದು ಕಲ್ಪಿಸಿಕೊಂಡಿರುತ್ತಾರೆ. ಅದು ನಮಗೂ ಚೆನ್ನಾಗಿದೆ ಎಂದೆನಿಸಿದರೆ, ಅದನ್ನು ಚಿತ್ರದಲ್ಲಿ ಬಳಸಿಕೊಳ್ಳುತ್ತೇವೆ’ ಎಂದರು.
1970-75ರ ಸಮಯದಲ್ಲಿ ನಡೆದ ನೈಜ ಘಟನೆ ಆಧಾರಿತ ಗ್ಯಾಂಗ್ಸ್ಟರ್ ಕಥೆ ಈ ಚಿತ್ರದಲ್ಲಿದೆ. ಚಿತ್ರಕ್ಕಾಗಿಯೇ 20 ಎಕರೆಯಷ್ಟು ವಿಶಾಲವಾದ ಜಾಗದಲ್ಲಿ ಬಹು ಕೋಟಿ ವೆಚ್ಚದಲ್ಲಿ ಅದ್ದೂರಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ‘ವಿಕ್ರಾಂತ್ ರೋಣ’ ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಚಿತ್ರಕ್ಕಿದ್ದು, ಸಂಜಯ್ ದತ್, ಶಿಲ್ಪಾ ಶೆಟ್ಟಿ, ನೋರಾ ಫತೇಹಿ, ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದವರು ಅಭಿನಯಿಸಿದ್ದಾರೆ.
ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಕೆಡಿ – ದಿ ಡೆವಿಲ್’ ಚಿತ್ರವು ಕನ್ನಡ, ತೆಲುಗು, ತಮಿಳು ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…