ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್ವುಡ್ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.
ಈ ಬಗ್ಗೆ ಸೆ.16ರಂದು ಸಭೆ ಕೂಡ ನಡೆದಿದೆ. ಸ್ಯಾಂಡಲ್ವುಡ್ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಶೋಷಣೆ ಇಲ್ಲ ಎನ್ನೊದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್, ಚಿತ್ರರಂಗದಲ್ಲಿ ಲೈಂಗಿಕ ಶೋಷಣೆ ಇಲ್ಲ ಅಂತ ಹೇಳೊಕ್ಕಾಗಲ್ಲ. ಶೋಷಣೆ ಇಲ್ಲ ಎನ್ನುವುದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ. ನನಗೆ ಯಾವತ್ತೂ ಈ ರೀತಿಯ ಅನುಭವ ಆಗಿಲ್ಲ. ಆದರೆ ಶೋಷಣೆ ಆಗಿರುವವರು ನನ್ನ ಬಳಿ ಹೇಳಿ ಕೊಂಡಿದ್ದಾರೆ. ನನ್ನ ಎರಡನೇ ಚಿತ್ರದ ಚಿತ್ರಿಕರಣ ವೇಳೆ ಜೂನಿಯರ್ ನಟಿ ತಮಗಾದ ಅನುಭವ ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.
ಟ್ರಿಪ್ಗೆ ಬಂದ್ರೆ ಹೀರೋಯಿನ್ ಮಾಡ್ತೀನಿ ಅಂದ್ರಿದ್ರು
ಜೂನಿಯರ್ ನಟಿಯೊಬ್ಬರು ಒಂದು ಸಿನಿಮಾಗಾಗಿ ಆಡಿಷನ್ ಕೊಟ್ಟಿದ್ರಂತೆ. ಮೊದಲ ರೌಂಡ್ನಲ್ಲಿ ಸೆಲೆಕ್ಟ್ ಆಗಿದ್ದೀರಾ ಅಂತ ಅವರು ಆಕೆಗೆ ಹೇಳಿದ್ರಂತೆ. ನಂತರ ಕಾಲ್ ಮಾಡಿ ನಮ್ಮ ಜೊತೆ ಟ್ರಿಪ್ಗೆ ಬನ್ನಿ ನಿಮ್ಮನ್ನ ನಾಯಕಿ ಮಾಡ್ತೀನಿ ಅಂದ್ರಂತೆ ಎಂದು ನಟಿ ಚೈತ್ರಾ ಆಚಾರ್ ಹೇಳಿದ್ದಾರೆ.
ಇನ್ನೂ, ನನಗೆ ಈ ರೀತಿಯ ಅನುಭವ ಆಗಿಲ್ಲ. ಆದರೆ ಕಮಿತಿ ಬಂದ್ರೆ ನಟಿಯರಿಗೆ ಅನುಕೂಲ ಆಗಲಿದೆ. ಆವಾಗ ಯಾರಿಗೆ ಏನೇ ಸಮಸ್ಯೆ ಬಂದ್ರು ಕಮಿಟಿ ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…