ಮನರಂಜನೆ

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀವಿ ಅಂದಿದ್ರಂತೆ: ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ

ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.

ಈ ಬಗ್ಗೆ ಸೆ.16ರಂದು ಸಭೆ ಕೂಡ ನಡೆದಿದೆ. ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಶೋಷಣೆ ಇಲ್ಲ ಎನ್ನೊದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್‌, ಚಿತ್ರರಂಗದಲ್ಲಿ ಲೈಂಗಿಕ ಶೋಷಣೆ ಇಲ್ಲ ಅಂತ ಹೇಳೊಕ್ಕಾಗಲ್ಲ. ಶೋಷಣೆ ಇಲ್ಲ ಎನ್ನುವುದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ. ನನಗೆ ಯಾವತ್ತೂ ಈ ರೀತಿಯ ಅನುಭವ ಆಗಿಲ್ಲ. ಆದರೆ ಶೋಷಣೆ ಆಗಿರುವವರು ನನ್ನ ಬಳಿ ಹೇಳಿ ಕೊಂಡಿದ್ದಾರೆ. ನನ್ನ ಎರಡನೇ ಚಿತ್ರದ  ಚಿತ್ರಿಕರಣ ವೇಳೆ ಜೂನಿಯರ್‌ ನಟಿ ತಮಗಾದ ಅನುಭವ ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀನಿ ಅಂದ್ರಿದ್ರು

ಜೂನಿಯರ್‌ ನಟಿಯೊಬ್ಬರು ಒಂದು ಸಿನಿಮಾಗಾಗಿ ಆಡಿಷನ್‌ ಕೊಟ್ಟಿದ್ರಂತೆ. ಮೊದಲ ರೌಂಡ್‌ನಲ್ಲಿ ಸೆಲೆಕ್ಟ್‌ ಆಗಿದ್ದೀರಾ ಅಂತ ಅವರು ಆಕೆಗೆ ಹೇಳಿದ್ರಂತೆ. ನಂತರ ಕಾಲ್‌ ಮಾಡಿ ನಮ್ಮ ಜೊತೆ ಟ್ರಿಪ್‌ಗೆ ಬನ್ನಿ ನಿಮ್ಮನ್ನ ನಾಯಕಿ ಮಾಡ್ತೀನಿ ಅಂದ್ರಂತೆ ಎಂದು ನಟಿ ಚೈತ್ರಾ ಆಚಾರ್‌ ಹೇಳಿದ್ದಾರೆ.

ಇನ್ನೂ, ನನಗೆ ಈ ರೀತಿಯ ಅನುಭವ ಆಗಿಲ್ಲ. ಆದರೆ ಕಮಿತಿ ಬಂದ್ರೆ ನಟಿಯರಿಗೆ ಅನುಕೂಲ ಆಗಲಿದೆ. ಆವಾಗ ಯಾರಿಗೆ ಏನೇ ಸಮಸ್ಯೆ ಬಂದ್ರು ಕಮಿಟಿ ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago