ಮನರಂಜನೆ

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀವಿ ಅಂದಿದ್ರಂತೆ: ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ

ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.

ಈ ಬಗ್ಗೆ ಸೆ.16ರಂದು ಸಭೆ ಕೂಡ ನಡೆದಿದೆ. ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಶೋಷಣೆ ಇಲ್ಲ ಎನ್ನೊದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್‌, ಚಿತ್ರರಂಗದಲ್ಲಿ ಲೈಂಗಿಕ ಶೋಷಣೆ ಇಲ್ಲ ಅಂತ ಹೇಳೊಕ್ಕಾಗಲ್ಲ. ಶೋಷಣೆ ಇಲ್ಲ ಎನ್ನುವುದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ. ನನಗೆ ಯಾವತ್ತೂ ಈ ರೀತಿಯ ಅನುಭವ ಆಗಿಲ್ಲ. ಆದರೆ ಶೋಷಣೆ ಆಗಿರುವವರು ನನ್ನ ಬಳಿ ಹೇಳಿ ಕೊಂಡಿದ್ದಾರೆ. ನನ್ನ ಎರಡನೇ ಚಿತ್ರದ  ಚಿತ್ರಿಕರಣ ವೇಳೆ ಜೂನಿಯರ್‌ ನಟಿ ತಮಗಾದ ಅನುಭವ ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀನಿ ಅಂದ್ರಿದ್ರು

ಜೂನಿಯರ್‌ ನಟಿಯೊಬ್ಬರು ಒಂದು ಸಿನಿಮಾಗಾಗಿ ಆಡಿಷನ್‌ ಕೊಟ್ಟಿದ್ರಂತೆ. ಮೊದಲ ರೌಂಡ್‌ನಲ್ಲಿ ಸೆಲೆಕ್ಟ್‌ ಆಗಿದ್ದೀರಾ ಅಂತ ಅವರು ಆಕೆಗೆ ಹೇಳಿದ್ರಂತೆ. ನಂತರ ಕಾಲ್‌ ಮಾಡಿ ನಮ್ಮ ಜೊತೆ ಟ್ರಿಪ್‌ಗೆ ಬನ್ನಿ ನಿಮ್ಮನ್ನ ನಾಯಕಿ ಮಾಡ್ತೀನಿ ಅಂದ್ರಂತೆ ಎಂದು ನಟಿ ಚೈತ್ರಾ ಆಚಾರ್‌ ಹೇಳಿದ್ದಾರೆ.

ಇನ್ನೂ, ನನಗೆ ಈ ರೀತಿಯ ಅನುಭವ ಆಗಿಲ್ಲ. ಆದರೆ ಕಮಿತಿ ಬಂದ್ರೆ ನಟಿಯರಿಗೆ ಅನುಕೂಲ ಆಗಲಿದೆ. ಆವಾಗ ಯಾರಿಗೆ ಏನೇ ಸಮಸ್ಯೆ ಬಂದ್ರು ಕಮಿಟಿ ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

58 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

1 hour ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

1 hour ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

2 hours ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

3 hours ago