ಮನರಂಜನೆ

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀವಿ ಅಂದಿದ್ರಂತೆ: ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ

ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.

ಈ ಬಗ್ಗೆ ಸೆ.16ರಂದು ಸಭೆ ಕೂಡ ನಡೆದಿದೆ. ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಶೋಷಣೆ ಇಲ್ಲ ಎನ್ನೊದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್‌, ಚಿತ್ರರಂಗದಲ್ಲಿ ಲೈಂಗಿಕ ಶೋಷಣೆ ಇಲ್ಲ ಅಂತ ಹೇಳೊಕ್ಕಾಗಲ್ಲ. ಶೋಷಣೆ ಇಲ್ಲ ಎನ್ನುವುದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ. ನನಗೆ ಯಾವತ್ತೂ ಈ ರೀತಿಯ ಅನುಭವ ಆಗಿಲ್ಲ. ಆದರೆ ಶೋಷಣೆ ಆಗಿರುವವರು ನನ್ನ ಬಳಿ ಹೇಳಿ ಕೊಂಡಿದ್ದಾರೆ. ನನ್ನ ಎರಡನೇ ಚಿತ್ರದ  ಚಿತ್ರಿಕರಣ ವೇಳೆ ಜೂನಿಯರ್‌ ನಟಿ ತಮಗಾದ ಅನುಭವ ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀನಿ ಅಂದ್ರಿದ್ರು

ಜೂನಿಯರ್‌ ನಟಿಯೊಬ್ಬರು ಒಂದು ಸಿನಿಮಾಗಾಗಿ ಆಡಿಷನ್‌ ಕೊಟ್ಟಿದ್ರಂತೆ. ಮೊದಲ ರೌಂಡ್‌ನಲ್ಲಿ ಸೆಲೆಕ್ಟ್‌ ಆಗಿದ್ದೀರಾ ಅಂತ ಅವರು ಆಕೆಗೆ ಹೇಳಿದ್ರಂತೆ. ನಂತರ ಕಾಲ್‌ ಮಾಡಿ ನಮ್ಮ ಜೊತೆ ಟ್ರಿಪ್‌ಗೆ ಬನ್ನಿ ನಿಮ್ಮನ್ನ ನಾಯಕಿ ಮಾಡ್ತೀನಿ ಅಂದ್ರಂತೆ ಎಂದು ನಟಿ ಚೈತ್ರಾ ಆಚಾರ್‌ ಹೇಳಿದ್ದಾರೆ.

ಇನ್ನೂ, ನನಗೆ ಈ ರೀತಿಯ ಅನುಭವ ಆಗಿಲ್ಲ. ಆದರೆ ಕಮಿತಿ ಬಂದ್ರೆ ನಟಿಯರಿಗೆ ಅನುಕೂಲ ಆಗಲಿದೆ. ಆವಾಗ ಯಾರಿಗೆ ಏನೇ ಸಮಸ್ಯೆ ಬಂದ್ರು ಕಮಿಟಿ ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

2 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

10 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

10 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

11 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

13 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

14 hours ago