ಮನರಂಜನೆ

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀವಿ ಅಂದಿದ್ರಂತೆ: ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ

ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.

ಈ ಬಗ್ಗೆ ಸೆ.16ರಂದು ಸಭೆ ಕೂಡ ನಡೆದಿದೆ. ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಶೋಷಣೆ ಇಲ್ಲ ಎನ್ನೊದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್‌, ಚಿತ್ರರಂಗದಲ್ಲಿ ಲೈಂಗಿಕ ಶೋಷಣೆ ಇಲ್ಲ ಅಂತ ಹೇಳೊಕ್ಕಾಗಲ್ಲ. ಶೋಷಣೆ ಇಲ್ಲ ಎನ್ನುವುದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ. ನನಗೆ ಯಾವತ್ತೂ ಈ ರೀತಿಯ ಅನುಭವ ಆಗಿಲ್ಲ. ಆದರೆ ಶೋಷಣೆ ಆಗಿರುವವರು ನನ್ನ ಬಳಿ ಹೇಳಿ ಕೊಂಡಿದ್ದಾರೆ. ನನ್ನ ಎರಡನೇ ಚಿತ್ರದ  ಚಿತ್ರಿಕರಣ ವೇಳೆ ಜೂನಿಯರ್‌ ನಟಿ ತಮಗಾದ ಅನುಭವ ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀನಿ ಅಂದ್ರಿದ್ರು

ಜೂನಿಯರ್‌ ನಟಿಯೊಬ್ಬರು ಒಂದು ಸಿನಿಮಾಗಾಗಿ ಆಡಿಷನ್‌ ಕೊಟ್ಟಿದ್ರಂತೆ. ಮೊದಲ ರೌಂಡ್‌ನಲ್ಲಿ ಸೆಲೆಕ್ಟ್‌ ಆಗಿದ್ದೀರಾ ಅಂತ ಅವರು ಆಕೆಗೆ ಹೇಳಿದ್ರಂತೆ. ನಂತರ ಕಾಲ್‌ ಮಾಡಿ ನಮ್ಮ ಜೊತೆ ಟ್ರಿಪ್‌ಗೆ ಬನ್ನಿ ನಿಮ್ಮನ್ನ ನಾಯಕಿ ಮಾಡ್ತೀನಿ ಅಂದ್ರಂತೆ ಎಂದು ನಟಿ ಚೈತ್ರಾ ಆಚಾರ್‌ ಹೇಳಿದ್ದಾರೆ.

ಇನ್ನೂ, ನನಗೆ ಈ ರೀತಿಯ ಅನುಭವ ಆಗಿಲ್ಲ. ಆದರೆ ಕಮಿತಿ ಬಂದ್ರೆ ನಟಿಯರಿಗೆ ಅನುಕೂಲ ಆಗಲಿದೆ. ಆವಾಗ ಯಾರಿಗೆ ಏನೇ ಸಮಸ್ಯೆ ಬಂದ್ರು ಕಮಿಟಿ ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

12 seconds ago

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

35 mins ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

3 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

3 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

3 hours ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

3 hours ago