ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್ವುಡ್ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ.
ಈ ಬಗ್ಗೆ ಸೆ.16ರಂದು ಸಭೆ ಕೂಡ ನಡೆದಿದೆ. ಸ್ಯಾಂಡಲ್ವುಡ್ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಶೋಷಣೆ ಇಲ್ಲ ಎನ್ನೊದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಚೈತ್ರಾ ಆಚಾರ್, ಚಿತ್ರರಂಗದಲ್ಲಿ ಲೈಂಗಿಕ ಶೋಷಣೆ ಇಲ್ಲ ಅಂತ ಹೇಳೊಕ್ಕಾಗಲ್ಲ. ಶೋಷಣೆ ಇಲ್ಲ ಎನ್ನುವುದು ಪ್ರಪಂಚದಲ್ಲಿ ಕಳ್ಳತನ ಇಲ್ಲ ಎಂದಂತೆ. ನನಗೆ ಯಾವತ್ತೂ ಈ ರೀತಿಯ ಅನುಭವ ಆಗಿಲ್ಲ. ಆದರೆ ಶೋಷಣೆ ಆಗಿರುವವರು ನನ್ನ ಬಳಿ ಹೇಳಿ ಕೊಂಡಿದ್ದಾರೆ. ನನ್ನ ಎರಡನೇ ಚಿತ್ರದ ಚಿತ್ರಿಕರಣ ವೇಳೆ ಜೂನಿಯರ್ ನಟಿ ತಮಗಾದ ಅನುಭವ ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.
ಟ್ರಿಪ್ಗೆ ಬಂದ್ರೆ ಹೀರೋಯಿನ್ ಮಾಡ್ತೀನಿ ಅಂದ್ರಿದ್ರು
ಜೂನಿಯರ್ ನಟಿಯೊಬ್ಬರು ಒಂದು ಸಿನಿಮಾಗಾಗಿ ಆಡಿಷನ್ ಕೊಟ್ಟಿದ್ರಂತೆ. ಮೊದಲ ರೌಂಡ್ನಲ್ಲಿ ಸೆಲೆಕ್ಟ್ ಆಗಿದ್ದೀರಾ ಅಂತ ಅವರು ಆಕೆಗೆ ಹೇಳಿದ್ರಂತೆ. ನಂತರ ಕಾಲ್ ಮಾಡಿ ನಮ್ಮ ಜೊತೆ ಟ್ರಿಪ್ಗೆ ಬನ್ನಿ ನಿಮ್ಮನ್ನ ನಾಯಕಿ ಮಾಡ್ತೀನಿ ಅಂದ್ರಂತೆ ಎಂದು ನಟಿ ಚೈತ್ರಾ ಆಚಾರ್ ಹೇಳಿದ್ದಾರೆ.
ಇನ್ನೂ, ನನಗೆ ಈ ರೀತಿಯ ಅನುಭವ ಆಗಿಲ್ಲ. ಆದರೆ ಕಮಿತಿ ಬಂದ್ರೆ ನಟಿಯರಿಗೆ ಅನುಕೂಲ ಆಗಲಿದೆ. ಆವಾಗ ಯಾರಿಗೆ ಏನೇ ಸಮಸ್ಯೆ ಬಂದ್ರು ಕಮಿಟಿ ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…