Categories: ಮನರಂಜನೆ

ಆಪರೇಷನ್‍ ಸಿಂಧೂರ್ ಮೆಚ್ಚಿ ಪ್ರಧಾನಿಗೆ ಪತ್ರ ಬರೆದ ಸುದೀಪ್‍

ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್‍ ಮಾಡಿದ್ದ ಸುದೀಪ್‍, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ‌ಗುಣಗಾನ ಮಾಡಿ ಸುದೀರ್ಘ ಪತ್ರವನ್ನು ಸುದೀಪ್‍ ಬರೆದಿದ್ದಾರೆ.

ಶನಿವಾರ ತಮ್ಮ ಕಿಚ್ಚ ಕ್ರಿಯೇಷನ್ಸ್ನ ‘ಎಕ್ಸ್’ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ ಸುದೀಪ್‍, ಕನ್ನಡ ಚಿತ್ರರಂಗವು ನಿಮ್ಮ ನಿಲುವಿನೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ತಮ್ಮ ತಾಯಿ ಸರೋಜಾ ಸಂಜೀವ್ ಅವರ ನಿಧನದ ಬಗ್ಗೆ ನರೇಂದ್ರ ಮೋದಿ ಅವರು ಬರೆದ ಹೃದಯಸ್ಪರ್ಶಿ ಸಂತಾಪ ಪತ್ರಕ್ಕೆ ಧನ್ಯವಾದ ಹೇಳಿರುವ ಸುದೀಪ್‍, ‘ವೈಯಕ್ತಿಕ ನಷ್ಟದ ಆ ಕ್ಷಣದಲ್ಲಿ, ನಿಮ್ಮ ಮಾತುಗಳು ನನ್ನೊಂದಿಗೆ ಶಾಶ್ವತವಾಗಿ ಸಾಗಿಸುವ ಶಕ್ತಿ ಮತ್ತು ಸಹಾನುಭೂತಿಯನ್ನು ನೀಡಿತು’ ಎಂದು ಹೇಳಿದ್ದಾರೆ.

ನಾನು ಕೇವಲ ಮಗನಾಗಿ ಮಾತ್ರವಲ್ಲ, ಒಬ್ಬ ಹೆಮ್ಮೆಯ ಭಾರತೀಯನಾಗಿ ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ ಎಂದಿರುವ ಅವರು, ‘ಆಪರೇಷನ್ ಸಿಂಧೂರ, ಜಗತ್ತಿಗೆ ಒಂದು ಮಹತ್ವದ ಸಂದೇಶವಾಗಿದೆ. ಭಾರತದ ಸ್ಥಿರತೆಯ ದ್ಯೋತಕವಾಗಿದೆ. ಈ ಮೂಲಕ ಭಾರತ ಎಂದೂ ಹಿಂದೆ ಸರಿಯದು, ಏನನ್ನೂ ಮರೆಯದು, ಯಾವಾಗಲೂ ಎಚ್ಚೆತ್ತ ಸ್ಥಿತಿಯಲ್ಲಿರುತ್ತದೆ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ನೀಡಲಾಗಿದೆ’ ಎಂದಿದ್ದಾರೆ.

‘ನಿಮ್ಮ ನಿರ್ಣಯಗಳಿಗೆ ಪ್ರತಿಯೊಬ್ಬ ಕನ್ನಡಿಗನ, ಇಡೀ ಕನ್ನಡ ಚಿತ್ರರಂಗದ ಬೆಂಬಲವಿದೆ. ನಿಮ್ಮ ಧೈರ್ಯದಿಂದ ನಾವು ಸ್ಫೂರ್ತಿ ಪಡೆಯುತ್ತೇವೆ. ನಿಮ್ಮ ನಾಯಕತ್ವದಲ್ಲಿ ನಮ್ಮ ರಕ್ಷಣಾ ಪಡೆಗಳು ಯಾವುದೇ ಸಾಟಿ ಇಲ್ಲದ ನಿಖರತೆ, ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿದೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವೆಲ್ಲಾ ಒಂದು ರಾಷ್ಟ್ರ, ಒಂದೇ ಧ್ವನಿಯಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ. ಪ್ರತಿಯೊಬ್ಬ ಕನ್ನಡಿಗನೂ, ಸಂಪೂರ್ಣ ಕನ್ನಡ ಚಿತ್ರರಂಗವೂ ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತದೆ. ನಿಮ್ಮ ಧೈರ್ಯದಿಂದ ನಾವು ಸ್ಫೂರ್ತಿಯನ್ನು ಪಡೆಯುತ್ತೇವೆ. ಜೈ ಹಿಂದ್. ಜೈ ಕರ್ನಾಟಕ. ಜೈ ಭಾರತ್’ ಎಂದು ಬರೆದಿದ್ದಾರೆ.

ಸುದೀಪ್‍ ಅವರ ಈ ನಡೆಗೆ, ಅವರ ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

3 mins ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

32 mins ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

2 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

2 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

2 hours ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

3 hours ago