Categories: ಮನರಂಜನೆ

ಆಪರೇಷನ್‍ ಸಿಂಧೂರ್ ಮೆಚ್ಚಿ ಪ್ರಧಾನಿಗೆ ಪತ್ರ ಬರೆದ ಸುದೀಪ್‍

ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್‍ ಮಾಡಿದ್ದ ಸುದೀಪ್‍, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ‌ಗುಣಗಾನ ಮಾಡಿ ಸುದೀರ್ಘ ಪತ್ರವನ್ನು ಸುದೀಪ್‍ ಬರೆದಿದ್ದಾರೆ.

ಶನಿವಾರ ತಮ್ಮ ಕಿಚ್ಚ ಕ್ರಿಯೇಷನ್ಸ್ನ ‘ಎಕ್ಸ್’ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ ಸುದೀಪ್‍, ಕನ್ನಡ ಚಿತ್ರರಂಗವು ನಿಮ್ಮ ನಿಲುವಿನೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ತಮ್ಮ ತಾಯಿ ಸರೋಜಾ ಸಂಜೀವ್ ಅವರ ನಿಧನದ ಬಗ್ಗೆ ನರೇಂದ್ರ ಮೋದಿ ಅವರು ಬರೆದ ಹೃದಯಸ್ಪರ್ಶಿ ಸಂತಾಪ ಪತ್ರಕ್ಕೆ ಧನ್ಯವಾದ ಹೇಳಿರುವ ಸುದೀಪ್‍, ‘ವೈಯಕ್ತಿಕ ನಷ್ಟದ ಆ ಕ್ಷಣದಲ್ಲಿ, ನಿಮ್ಮ ಮಾತುಗಳು ನನ್ನೊಂದಿಗೆ ಶಾಶ್ವತವಾಗಿ ಸಾಗಿಸುವ ಶಕ್ತಿ ಮತ್ತು ಸಹಾನುಭೂತಿಯನ್ನು ನೀಡಿತು’ ಎಂದು ಹೇಳಿದ್ದಾರೆ.

ನಾನು ಕೇವಲ ಮಗನಾಗಿ ಮಾತ್ರವಲ್ಲ, ಒಬ್ಬ ಹೆಮ್ಮೆಯ ಭಾರತೀಯನಾಗಿ ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ ಎಂದಿರುವ ಅವರು, ‘ಆಪರೇಷನ್ ಸಿಂಧೂರ, ಜಗತ್ತಿಗೆ ಒಂದು ಮಹತ್ವದ ಸಂದೇಶವಾಗಿದೆ. ಭಾರತದ ಸ್ಥಿರತೆಯ ದ್ಯೋತಕವಾಗಿದೆ. ಈ ಮೂಲಕ ಭಾರತ ಎಂದೂ ಹಿಂದೆ ಸರಿಯದು, ಏನನ್ನೂ ಮರೆಯದು, ಯಾವಾಗಲೂ ಎಚ್ಚೆತ್ತ ಸ್ಥಿತಿಯಲ್ಲಿರುತ್ತದೆ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ನೀಡಲಾಗಿದೆ’ ಎಂದಿದ್ದಾರೆ.

‘ನಿಮ್ಮ ನಿರ್ಣಯಗಳಿಗೆ ಪ್ರತಿಯೊಬ್ಬ ಕನ್ನಡಿಗನ, ಇಡೀ ಕನ್ನಡ ಚಿತ್ರರಂಗದ ಬೆಂಬಲವಿದೆ. ನಿಮ್ಮ ಧೈರ್ಯದಿಂದ ನಾವು ಸ್ಫೂರ್ತಿ ಪಡೆಯುತ್ತೇವೆ. ನಿಮ್ಮ ನಾಯಕತ್ವದಲ್ಲಿ ನಮ್ಮ ರಕ್ಷಣಾ ಪಡೆಗಳು ಯಾವುದೇ ಸಾಟಿ ಇಲ್ಲದ ನಿಖರತೆ, ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿದೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವೆಲ್ಲಾ ಒಂದು ರಾಷ್ಟ್ರ, ಒಂದೇ ಧ್ವನಿಯಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ. ಪ್ರತಿಯೊಬ್ಬ ಕನ್ನಡಿಗನೂ, ಸಂಪೂರ್ಣ ಕನ್ನಡ ಚಿತ್ರರಂಗವೂ ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತದೆ. ನಿಮ್ಮ ಧೈರ್ಯದಿಂದ ನಾವು ಸ್ಫೂರ್ತಿಯನ್ನು ಪಡೆಯುತ್ತೇವೆ. ಜೈ ಹಿಂದ್. ಜೈ ಕರ್ನಾಟಕ. ಜೈ ಭಾರತ್’ ಎಂದು ಬರೆದಿದ್ದಾರೆ.

ಸುದೀಪ್‍ ಅವರ ಈ ನಡೆಗೆ, ಅವರ ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago