ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಸ್ಯಾಂಡಲ್ವುಡ್ನ ಹಲವು ತಾರೆಯರು ಶುಭ ಕೋರಿದ್ದಾರೆ.
ಮುಂಚೆ ಕ್ರಿಕೆಟ್ ಆಡುತ್ತಿದ್ದೆ, ಈಗ ಬರೀ ನೋಡುತ್ತಿದ್ದೇನೆ. ನಮ್ಮ ಭಾರತ ಗೆಲ್ಲಲಿ ಆಲ್ ದಿ ಬೆಸ್ಟ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಮಾತನಾಡಿದ್ದಾರೆ.
ಇಂಡಿಯಾ ವಿನ್ ಆಗೇ ಆಗುತ್ತಾರೆ. ಆ ಕಡೆ ಟೀಂ ನ್ಯೂಜಿಲೆಂಡ್ ಕೂಡ ಕಡಿಮೆಯಿಲ್ಲ. ಅವರ ಫೀಲ್ಡಿಂಗ್ ನೋಡಿದರೆ ಭಯ ಆಗುತ್ತದೆ. ಈ ಬಾರಿ ಇಂಡಿಯಾ ಗೆಲ್ಲಬೇಕು ಅಂದರೆ, ಪ್ರತಿ ಬಾಲ್ 6 ರನ್ ಹೊಡೆಯಬೇಕು. 4 ರನ್ ಹೊಡೆದರೆ ಪಕ್ಕಾ ಹಿಡಿಯುತ್ತಾರೆ. ಈ ಸಲ ಭಾರತ ತಂಡ ಗೆಲ್ಲಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಚಂದನ್ ಶೆಟ್ಟಿ ಶುಭ ಹಾರೈಸಿದ್ದಾರೆ.
ಆಲ್ ದಿ ಬೆಸ್ಟ್ ಟೀಂ ಇಂಡಿಯಾ. ಆವತ್ತಿನ ದಿನ ಯಾರು ಉತ್ತಮ ಆಟವಾಡುತ್ತಾರೋ ಅವರಿಗೆ ಗೆಲುವು ಸಿಗುತ್ತದೆ. ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವ ಮುಖ್ಯ. ಯಾರೇ ಸೋತರೂ ಟ್ರೋಲ್ ಮಾಡಬೇಡಿ. ಆಟ ಕೂಡ ಕಲೆ ತರಾನೇ ಜನರನ್ನು, ದೇಶವನ್ನು ಬೆಸೆಯಬೇಕು ಎಂದು ನಟ ಕಿಶೋರ್ ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.
ಟೀಂ ಇಂಡಿಯಾಗೆ ಆಲ್ದಿ ಬೆಸ್ಟ್. ನಮ್ಮ ದೇಶಕ್ಕೆ ಗೆಲುವಾಗಲಿ. ನಮ್ಮ ಇಂಡಿಯಾ ಟೀಂ ಚೆನ್ನಾಗಿ ಆಡಲಿ ಎಂದು ನಟಿ ಅಂಕಿತಾ ಅಮರ್ ಹೇಳಿದ್ದಾರೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…