ಮನರಂಜನೆ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಓಟಿಟಿಯಲ್ಲಿ ‘ಇಂಡಿಯನ್‍ 2’

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ, ಮೊದಲ ದಿನವೇ ಫ್ಲಾಪ್‍ ಪಟ್ಟಿಗೆ ಸೇರಿದೆ. ಸ್ಟಾರ್ ನಟರ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಎಂಟು ವಾರಗಳ ನಂತರ ಓಟಿಟಿಯಲ್ಲಿ ಬಿಡುಗಡೆ ಆಗಬೇಕು ಎಂಬ ಒತ್ತಾಯ ಕೇಳಿಬರುತ್ತಿರುವಾಗಲೇ, ‘ಇಂಡಿಯನ್ 2’ ಬಿಡುಡೆಯಾಗಿ ನಾಲ್ಕೇ ವಾರಗಳ ಅಂತರದಲ್ಲಿ ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಹೌದು, ‘ಇಂಡಿಯನ್‍ 2’ ಚಿತ್ರವು ಇದೇ ಆಗಸ್ಟ್ 09ರಂದು ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಚಿತ್ರವು ಕಳೆದ ತಿಂಗಳು ಅಂದರೆ ಜುಲೈ 12ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಅದಾಗಿ ಒಂದೇ ತಿಂಗಳೊಳಗೆ ಚಿತ್ರ ಇದೀಗ ಓಟಿಟಿಯಲ್ಲಿ ಪ್ರದರ್ಶನ ಕಾಣುತ್ತಿದೆ.

ಬರೀ ಅಷ್ಟೇ ಆದರೆ ಪರವಾಗಿಲ್ಲ, ಚಿತ್ರ ಬಾಕ್ಸ್ ಆಫೀಸ್‍ನಲ್ಲಿ ಸೋತಿರುವುದರಿಂದ ಮೊದಲ ಒಪ್ಪಂದಕ್ಕಿಂತ ಕಡಿಮೆ ಮೊತ್ತ ಕೊಡುವುದಾಗಿ ನೆಟ್‍ಫ್ಲಿಕ್ಸ್ ಸಂಸ್ಥೆ ಹೇಳುತ್ತಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಮೊದಲು ಚಿತ್ರದ ಡಿಜಿಟಲ್‍ ಹಕ್ಕುಗಳನ್ನು ನೆಟ್‍ಫ್ಲಿಕ್ಸ್ ಸಂಸ್ಥೆಯು 120 ಕೋಟಿ ರೂ. ಕೊಟ್ಟು ಖರೀದಿಸಿತ್ತಂತೆ. ಆದರೆ, ಚಿತ್ರ ಸೋತಿರುವುದರಿಂದ, ಚಿತ್ರಕ್ಕೆ 60 ಕೋಟಿ ರೂ. ಮಾತ್ರ ಕೊಡುವುದಾಗಿ ನೆಟ್‍ಫ್ಲಿಕ್ಸ್ ಸಂಸ್ಥೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಚಿತ್ರತಂಡದವರು ಏನು ಉತ್ತರ ಕೊಡುತ್ತಾರೋ ನೋಡಬೇಕಿದೆ.

‘ಇಂಡಿಯನ್‍ 2’ ಚಿತ್ರವು ಮೊದಲ ದಿನವೇ ಅತ್ಯಂತ ಕಡಿಮೆ ಗಳಿಕೆ ಮಾಡಿತ್ತು. ಚಿತ್ರದ ಬಗ್ಗೆ ಅದೆಷ್ಟೇ ನಿರೀಕ್ಷೆಗಳಿದ್ದರೂ, ಚಿತ್ರ ಅಷ್ಟೇನೂ ದೊಡ್ಡ ಓಪನಿಂಗ್‍ ಪಡೆಯಲಿಲ್ಲ. ಇನ್ನು, ಮೊದಲ ದಿನ ಚಿತ್ರವು 25.6 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ತಮಿಳು ಅವತರಣಿಕೆಯಾದ ‘ಇಂಡಿಯನ್‍ 2’ ಚಿತ್ರವು 16.5 ಕೋಟಿ ರೂ ಸಂಗ್ರಹಿಸಿದರೆ, ತೆಲುಗು ಅವತರಣಿಕೆಯಾದ ‘ಭಾರತೀಯುಡು 2’ ಮತ್ತು ಹಿಂದಿಯ ‘ಹಿಂದುಸ್ಥಾನಿ 2’ ಚಿತ್ರವು 7.9 ಮತ್ತು 1.2 ಕೋಟಿ ರೂ. ಕ್ರಮವಾಗಿ ಸಂಗ್ರಹಿಸಿದೆ. ಒಟ್ಟಾರೆ, ಚಿತ್ರವು 147 ಕೋಟಿ ರೂ.ನಷ್ಟು ಗಳಿಕೆ ಮಾಡಿ, ಎಷ್ಟೋ ಚಿತ್ರಮಂದಿರಗಳಿಂದ ಮಾಯವಾಗಿದೆ.

‘ಇಂಡಿಯನ್‍ 2’ ಚಿತ್ರದಲ್ಲಿ ಕಮಲ್‍ ಹಾಸನ್‍, ಸಿದ್ಧಾರ್ಥ್‍, ರಾಕುಲ್‍ ಪ್ರೀತ್‍ ಸಿಂಗ್‍, ಎಸ್‍.ಜೆ. ಸೂರ್ಯ, ಬಾಬಿ ಸಿಂಹ ಸೇರಿದಂತೆ ಹಲವರು ನಟಿಸಿದ್ದು, ಹಿರಿಯ ನಿರ್ದೇಶಕ ಶಂಕರ್ ನಿರ್ದೇಶನ ಮಾಡಿದರೆ, ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯು ಚಿತ್ರವನ್ನು ನಿರ್ಮಿಸಿದೆ.

ಭೂಮಿಕಾ

Recent Posts

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

2 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

9 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago