ಮನರಂಜನೆ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಓಟಿಟಿಯಲ್ಲಿ ‘ಇಂಡಿಯನ್‍ 2’

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ, ಮೊದಲ ದಿನವೇ ಫ್ಲಾಪ್‍ ಪಟ್ಟಿಗೆ ಸೇರಿದೆ. ಸ್ಟಾರ್ ನಟರ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಎಂಟು ವಾರಗಳ ನಂತರ ಓಟಿಟಿಯಲ್ಲಿ ಬಿಡುಗಡೆ ಆಗಬೇಕು ಎಂಬ ಒತ್ತಾಯ ಕೇಳಿಬರುತ್ತಿರುವಾಗಲೇ, ‘ಇಂಡಿಯನ್ 2’ ಬಿಡುಡೆಯಾಗಿ ನಾಲ್ಕೇ ವಾರಗಳ ಅಂತರದಲ್ಲಿ ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಹೌದು, ‘ಇಂಡಿಯನ್‍ 2’ ಚಿತ್ರವು ಇದೇ ಆಗಸ್ಟ್ 09ರಂದು ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಚಿತ್ರವು ಕಳೆದ ತಿಂಗಳು ಅಂದರೆ ಜುಲೈ 12ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಅದಾಗಿ ಒಂದೇ ತಿಂಗಳೊಳಗೆ ಚಿತ್ರ ಇದೀಗ ಓಟಿಟಿಯಲ್ಲಿ ಪ್ರದರ್ಶನ ಕಾಣುತ್ತಿದೆ.

ಬರೀ ಅಷ್ಟೇ ಆದರೆ ಪರವಾಗಿಲ್ಲ, ಚಿತ್ರ ಬಾಕ್ಸ್ ಆಫೀಸ್‍ನಲ್ಲಿ ಸೋತಿರುವುದರಿಂದ ಮೊದಲ ಒಪ್ಪಂದಕ್ಕಿಂತ ಕಡಿಮೆ ಮೊತ್ತ ಕೊಡುವುದಾಗಿ ನೆಟ್‍ಫ್ಲಿಕ್ಸ್ ಸಂಸ್ಥೆ ಹೇಳುತ್ತಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಮೊದಲು ಚಿತ್ರದ ಡಿಜಿಟಲ್‍ ಹಕ್ಕುಗಳನ್ನು ನೆಟ್‍ಫ್ಲಿಕ್ಸ್ ಸಂಸ್ಥೆಯು 120 ಕೋಟಿ ರೂ. ಕೊಟ್ಟು ಖರೀದಿಸಿತ್ತಂತೆ. ಆದರೆ, ಚಿತ್ರ ಸೋತಿರುವುದರಿಂದ, ಚಿತ್ರಕ್ಕೆ 60 ಕೋಟಿ ರೂ. ಮಾತ್ರ ಕೊಡುವುದಾಗಿ ನೆಟ್‍ಫ್ಲಿಕ್ಸ್ ಸಂಸ್ಥೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಚಿತ್ರತಂಡದವರು ಏನು ಉತ್ತರ ಕೊಡುತ್ತಾರೋ ನೋಡಬೇಕಿದೆ.

‘ಇಂಡಿಯನ್‍ 2’ ಚಿತ್ರವು ಮೊದಲ ದಿನವೇ ಅತ್ಯಂತ ಕಡಿಮೆ ಗಳಿಕೆ ಮಾಡಿತ್ತು. ಚಿತ್ರದ ಬಗ್ಗೆ ಅದೆಷ್ಟೇ ನಿರೀಕ್ಷೆಗಳಿದ್ದರೂ, ಚಿತ್ರ ಅಷ್ಟೇನೂ ದೊಡ್ಡ ಓಪನಿಂಗ್‍ ಪಡೆಯಲಿಲ್ಲ. ಇನ್ನು, ಮೊದಲ ದಿನ ಚಿತ್ರವು 25.6 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ತಮಿಳು ಅವತರಣಿಕೆಯಾದ ‘ಇಂಡಿಯನ್‍ 2’ ಚಿತ್ರವು 16.5 ಕೋಟಿ ರೂ ಸಂಗ್ರಹಿಸಿದರೆ, ತೆಲುಗು ಅವತರಣಿಕೆಯಾದ ‘ಭಾರತೀಯುಡು 2’ ಮತ್ತು ಹಿಂದಿಯ ‘ಹಿಂದುಸ್ಥಾನಿ 2’ ಚಿತ್ರವು 7.9 ಮತ್ತು 1.2 ಕೋಟಿ ರೂ. ಕ್ರಮವಾಗಿ ಸಂಗ್ರಹಿಸಿದೆ. ಒಟ್ಟಾರೆ, ಚಿತ್ರವು 147 ಕೋಟಿ ರೂ.ನಷ್ಟು ಗಳಿಕೆ ಮಾಡಿ, ಎಷ್ಟೋ ಚಿತ್ರಮಂದಿರಗಳಿಂದ ಮಾಯವಾಗಿದೆ.

‘ಇಂಡಿಯನ್‍ 2’ ಚಿತ್ರದಲ್ಲಿ ಕಮಲ್‍ ಹಾಸನ್‍, ಸಿದ್ಧಾರ್ಥ್‍, ರಾಕುಲ್‍ ಪ್ರೀತ್‍ ಸಿಂಗ್‍, ಎಸ್‍.ಜೆ. ಸೂರ್ಯ, ಬಾಬಿ ಸಿಂಹ ಸೇರಿದಂತೆ ಹಲವರು ನಟಿಸಿದ್ದು, ಹಿರಿಯ ನಿರ್ದೇಶಕ ಶಂಕರ್ ನಿರ್ದೇಶನ ಮಾಡಿದರೆ, ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯು ಚಿತ್ರವನ್ನು ನಿರ್ಮಿಸಿದೆ.

ಭೂಮಿಕಾ

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago