ಮನರಂಜನೆ

ಸೈಮಾದಲ್ಲಿ ಕನ್ನಡಿಗರಿಗೆ ಅವಮಾನ : ನಡೆದ ಘಟನೆ ವಿವರಿಸಿದ ನಟ ದುನಿಯಾ ವಿಜಯ್

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ನಡೆದ ಅವಮಾನವನ್ನು ನಟ ದುನಿಯಾ ವಿಜಯ್ ನೇರವಾಗಿ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಇನ್ನೂ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ನಟ ದುನಿಯಾ ವಿಜಯ್, ನಿನ್ನೆ ಸೈಮಾನಲ್ಲಿ ನಡೆದಿದ್ದೇನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ.

ಇನ್ನು ಮುಂದೆ ನಾನು ಸೈಮಾಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ನಾನು ಮಾತ್ರವಲ್ಲ ನಾಳೆ ನನ್ನ ಮಕ್ಕಳಿಗೆ ಪ್ರಶಸ್ತಿ ಕೊಟ್ಟರೂ ಅದನ್ನೂ ಸ್ವೀಕರಿಸದಿರುವಂತೆ ಹೇಳಲಿದ್ದೇನೆ ಎಂದು ಬಲು ಬೇಸರದಿಂದಲೇ ಹೇಳಿದರು.

ಇದನ್ನು ಓದಿ:ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

ಮುಂದುವರೆದು ಮಾತನಾಡಿದ ಅವರು, ಮೊದಲು ತೆಲುಗು ನಟರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಆದರೆ ಕನ್ನಡಿಗರಿಗೆ ಪ್ರಶಸ್ತಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಡ ಮಾಡಿದರು. ಉದ್ದೇಶಪೂರ್ವಕವಾಗಿ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ಕನ್ನಡದ ಎಲ್ಲ ನಟ-ನಟಿಯರು, ತಂತ್ರಜ್ಞರು ಕೊನೆಯವರೆಗೆ ಕಾದು ಕುಳಿತುಕೊಳ್ಳುವಂತಾಯಿತು. ಕನ್ನಡದ ನಟ-ನಟಿಯರು ವೇದಿಕೆ ಮೇಲೆ ಹೋಗುವ ವೇಳೆಗೆ ಬೇರೆ ಭಾಷೆಯ ಯಾವೊಬ್ಬ ಕಲಾವಿದರೂ ಅಲ್ಲಿರಲಿಲ್ಲ. ನಾವು ಕೇವಲ ಕ್ಯಾಮೆರಾ ಫುಟೇಜ್​​ಗಾಗಿ ವೇದಿಕೆ ಮೇಲೆ ಹೋದಂತಾಯಿರು. ಇದು ಸ್ಪಷ್ಟವಾಗಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ದುನಿಯಾ ವಿಜಯ್ ಹೇಳಿದರು.

ಇಂತಹ ಅಪಮಾನ ಮೊದಲೇನೂ ಅಲ್ಲ, ಹಲವು ಕಡೆಗಳಲ್ಲಿ ಕನ್ನಡಿಗರಿಗೆ ಹೀಗೆ ಅವಮಾನ ಮಾಡಲಾಗಿದೆ. ಉಪೇಂದ್ರ ಅವರು ಎಂಥಹಾ ಲಿಜೆಂಡ್ ಅವರೂ ಸಹ ಪಾಪ ಕೊನೆಯ ವರೆಗೆ ಕಾದು ಕೂತಿದ್ದರು, ಅವರೂ ಸಹ ಆಯೋಜಕರ ಈ ದುರ್ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಾನು ವೇದಿಕೆ ಮೇಲೆ ಮಾತುಗಳಿಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರಿಯಾಗಿ ಮಾತನಾಡಿದಿರಿ ಎಂದು ಬೆನ್ನು ತಟ್ಟಿದರು’ ಎಂದರು ವಿಜಿ.

ಇಲ್ಲಿ ಮುಖ್ಯವಾದ ಸಮಸ್ಯೆ ಇರುವುದು ಆಯೋಜಕರದ್ದು. ಯಾರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಮಾಹಿತಿ ಅವರಿಗೆ ಇಲ್ಲ. ತೆಲುಗಿಗೆ ಒಂದು ಪ್ರಶಸ್ತಿ, ಕನ್ನಡಕ್ಕೆ ಒಂದು ಪ್ರಶಸ್ತಿ ಕೊಡುತ್ತಾ ಹೋಗಬಹುದು ಆದರೆ ಅದರ ಬದಲು ಕನ್ನಡಕ್ಕೆ ಕೊನೆಯದಾಗಿ ಕೊಟ್ಟರು. ಸುದೀಪ್ ಅವರ ಹೆಸರು ಹೇಳುವ ಸಂದರ್ಭದಲ್ಲಿ ಆಡಿಟೋರಿಯಂನಲ್ಲಿ ಒಬ್ಬರು ಸಹ ಇರಲಿಲ್ಲ. ಈಗ ನಾವು ಕನ್ನಡಿಗರು ಒಟ್ಟಾಗಿ ಒಂದು ನಿರ್ಣಯ ತೆಗೆದುಕೊಂಡು ಮುಂದಿನ ವರ್ಷ ಸೈಮಾ ಅನ್ನು ಬಾಯ್​​ಕಾಟ್ ಮಾಡಬೇಕು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

4 mins ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

17 mins ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

2 hours ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

2 hours ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

3 hours ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

3 hours ago