ಮನರಂಜನೆ

ಸೈಮಾದಲ್ಲಿ ಕನ್ನಡಿಗರಿಗೆ ಅವಮಾನ : ನಡೆದ ಘಟನೆ ವಿವರಿಸಿದ ನಟ ದುನಿಯಾ ವಿಜಯ್

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ನಡೆದ ಅವಮಾನವನ್ನು ನಟ ದುನಿಯಾ ವಿಜಯ್ ನೇರವಾಗಿ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಇನ್ನೂ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ನಟ ದುನಿಯಾ ವಿಜಯ್, ನಿನ್ನೆ ಸೈಮಾನಲ್ಲಿ ನಡೆದಿದ್ದೇನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ.

ಇನ್ನು ಮುಂದೆ ನಾನು ಸೈಮಾಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ನಾನು ಮಾತ್ರವಲ್ಲ ನಾಳೆ ನನ್ನ ಮಕ್ಕಳಿಗೆ ಪ್ರಶಸ್ತಿ ಕೊಟ್ಟರೂ ಅದನ್ನೂ ಸ್ವೀಕರಿಸದಿರುವಂತೆ ಹೇಳಲಿದ್ದೇನೆ ಎಂದು ಬಲು ಬೇಸರದಿಂದಲೇ ಹೇಳಿದರು.

ಇದನ್ನು ಓದಿ:ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

ಮುಂದುವರೆದು ಮಾತನಾಡಿದ ಅವರು, ಮೊದಲು ತೆಲುಗು ನಟರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಆದರೆ ಕನ್ನಡಿಗರಿಗೆ ಪ್ರಶಸ್ತಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಡ ಮಾಡಿದರು. ಉದ್ದೇಶಪೂರ್ವಕವಾಗಿ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ಕನ್ನಡದ ಎಲ್ಲ ನಟ-ನಟಿಯರು, ತಂತ್ರಜ್ಞರು ಕೊನೆಯವರೆಗೆ ಕಾದು ಕುಳಿತುಕೊಳ್ಳುವಂತಾಯಿತು. ಕನ್ನಡದ ನಟ-ನಟಿಯರು ವೇದಿಕೆ ಮೇಲೆ ಹೋಗುವ ವೇಳೆಗೆ ಬೇರೆ ಭಾಷೆಯ ಯಾವೊಬ್ಬ ಕಲಾವಿದರೂ ಅಲ್ಲಿರಲಿಲ್ಲ. ನಾವು ಕೇವಲ ಕ್ಯಾಮೆರಾ ಫುಟೇಜ್​​ಗಾಗಿ ವೇದಿಕೆ ಮೇಲೆ ಹೋದಂತಾಯಿರು. ಇದು ಸ್ಪಷ್ಟವಾಗಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ದುನಿಯಾ ವಿಜಯ್ ಹೇಳಿದರು.

ಇಂತಹ ಅಪಮಾನ ಮೊದಲೇನೂ ಅಲ್ಲ, ಹಲವು ಕಡೆಗಳಲ್ಲಿ ಕನ್ನಡಿಗರಿಗೆ ಹೀಗೆ ಅವಮಾನ ಮಾಡಲಾಗಿದೆ. ಉಪೇಂದ್ರ ಅವರು ಎಂಥಹಾ ಲಿಜೆಂಡ್ ಅವರೂ ಸಹ ಪಾಪ ಕೊನೆಯ ವರೆಗೆ ಕಾದು ಕೂತಿದ್ದರು, ಅವರೂ ಸಹ ಆಯೋಜಕರ ಈ ದುರ್ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಾನು ವೇದಿಕೆ ಮೇಲೆ ಮಾತುಗಳಿಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರಿಯಾಗಿ ಮಾತನಾಡಿದಿರಿ ಎಂದು ಬೆನ್ನು ತಟ್ಟಿದರು’ ಎಂದರು ವಿಜಿ.

ಇಲ್ಲಿ ಮುಖ್ಯವಾದ ಸಮಸ್ಯೆ ಇರುವುದು ಆಯೋಜಕರದ್ದು. ಯಾರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಮಾಹಿತಿ ಅವರಿಗೆ ಇಲ್ಲ. ತೆಲುಗಿಗೆ ಒಂದು ಪ್ರಶಸ್ತಿ, ಕನ್ನಡಕ್ಕೆ ಒಂದು ಪ್ರಶಸ್ತಿ ಕೊಡುತ್ತಾ ಹೋಗಬಹುದು ಆದರೆ ಅದರ ಬದಲು ಕನ್ನಡಕ್ಕೆ ಕೊನೆಯದಾಗಿ ಕೊಟ್ಟರು. ಸುದೀಪ್ ಅವರ ಹೆಸರು ಹೇಳುವ ಸಂದರ್ಭದಲ್ಲಿ ಆಡಿಟೋರಿಯಂನಲ್ಲಿ ಒಬ್ಬರು ಸಹ ಇರಲಿಲ್ಲ. ಈಗ ನಾವು ಕನ್ನಡಿಗರು ಒಟ್ಟಾಗಿ ಒಂದು ನಿರ್ಣಯ ತೆಗೆದುಕೊಂಡು ಮುಂದಿನ ವರ್ಷ ಸೈಮಾ ಅನ್ನು ಬಾಯ್​​ಕಾಟ್ ಮಾಡಬೇಕು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

2 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

2 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

2 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

2 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

2 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

3 hours ago