ಮನರಂಜನೆ

ಸೈಮಾದಲ್ಲಿ ಕನ್ನಡಿಗರಿಗೆ ಅವಮಾನ : ನಡೆದ ಘಟನೆ ವಿವರಿಸಿದ ನಟ ದುನಿಯಾ ವಿಜಯ್

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ನಡೆದ ಅವಮಾನವನ್ನು ನಟ ದುನಿಯಾ ವಿಜಯ್ ನೇರವಾಗಿ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಇನ್ನೂ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ನಟ ದುನಿಯಾ ವಿಜಯ್, ನಿನ್ನೆ ಸೈಮಾನಲ್ಲಿ ನಡೆದಿದ್ದೇನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ.

ಇನ್ನು ಮುಂದೆ ನಾನು ಸೈಮಾಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ನಾನು ಮಾತ್ರವಲ್ಲ ನಾಳೆ ನನ್ನ ಮಕ್ಕಳಿಗೆ ಪ್ರಶಸ್ತಿ ಕೊಟ್ಟರೂ ಅದನ್ನೂ ಸ್ವೀಕರಿಸದಿರುವಂತೆ ಹೇಳಲಿದ್ದೇನೆ ಎಂದು ಬಲು ಬೇಸರದಿಂದಲೇ ಹೇಳಿದರು.

ಇದನ್ನು ಓದಿ:ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

ಮುಂದುವರೆದು ಮಾತನಾಡಿದ ಅವರು, ಮೊದಲು ತೆಲುಗು ನಟರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಆದರೆ ಕನ್ನಡಿಗರಿಗೆ ಪ್ರಶಸ್ತಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಡ ಮಾಡಿದರು. ಉದ್ದೇಶಪೂರ್ವಕವಾಗಿ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ಕನ್ನಡದ ಎಲ್ಲ ನಟ-ನಟಿಯರು, ತಂತ್ರಜ್ಞರು ಕೊನೆಯವರೆಗೆ ಕಾದು ಕುಳಿತುಕೊಳ್ಳುವಂತಾಯಿತು. ಕನ್ನಡದ ನಟ-ನಟಿಯರು ವೇದಿಕೆ ಮೇಲೆ ಹೋಗುವ ವೇಳೆಗೆ ಬೇರೆ ಭಾಷೆಯ ಯಾವೊಬ್ಬ ಕಲಾವಿದರೂ ಅಲ್ಲಿರಲಿಲ್ಲ. ನಾವು ಕೇವಲ ಕ್ಯಾಮೆರಾ ಫುಟೇಜ್​​ಗಾಗಿ ವೇದಿಕೆ ಮೇಲೆ ಹೋದಂತಾಯಿರು. ಇದು ಸ್ಪಷ್ಟವಾಗಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ದುನಿಯಾ ವಿಜಯ್ ಹೇಳಿದರು.

ಇಂತಹ ಅಪಮಾನ ಮೊದಲೇನೂ ಅಲ್ಲ, ಹಲವು ಕಡೆಗಳಲ್ಲಿ ಕನ್ನಡಿಗರಿಗೆ ಹೀಗೆ ಅವಮಾನ ಮಾಡಲಾಗಿದೆ. ಉಪೇಂದ್ರ ಅವರು ಎಂಥಹಾ ಲಿಜೆಂಡ್ ಅವರೂ ಸಹ ಪಾಪ ಕೊನೆಯ ವರೆಗೆ ಕಾದು ಕೂತಿದ್ದರು, ಅವರೂ ಸಹ ಆಯೋಜಕರ ಈ ದುರ್ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಾನು ವೇದಿಕೆ ಮೇಲೆ ಮಾತುಗಳಿಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರಿಯಾಗಿ ಮಾತನಾಡಿದಿರಿ ಎಂದು ಬೆನ್ನು ತಟ್ಟಿದರು’ ಎಂದರು ವಿಜಿ.

ಇಲ್ಲಿ ಮುಖ್ಯವಾದ ಸಮಸ್ಯೆ ಇರುವುದು ಆಯೋಜಕರದ್ದು. ಯಾರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಮಾಹಿತಿ ಅವರಿಗೆ ಇಲ್ಲ. ತೆಲುಗಿಗೆ ಒಂದು ಪ್ರಶಸ್ತಿ, ಕನ್ನಡಕ್ಕೆ ಒಂದು ಪ್ರಶಸ್ತಿ ಕೊಡುತ್ತಾ ಹೋಗಬಹುದು ಆದರೆ ಅದರ ಬದಲು ಕನ್ನಡಕ್ಕೆ ಕೊನೆಯದಾಗಿ ಕೊಟ್ಟರು. ಸುದೀಪ್ ಅವರ ಹೆಸರು ಹೇಳುವ ಸಂದರ್ಭದಲ್ಲಿ ಆಡಿಟೋರಿಯಂನಲ್ಲಿ ಒಬ್ಬರು ಸಹ ಇರಲಿಲ್ಲ. ಈಗ ನಾವು ಕನ್ನಡಿಗರು ಒಟ್ಟಾಗಿ ಒಂದು ನಿರ್ಣಯ ತೆಗೆದುಕೊಂಡು ಮುಂದಿನ ವರ್ಷ ಸೈಮಾ ಅನ್ನು ಬಾಯ್​​ಕಾಟ್ ಮಾಡಬೇಕು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

2 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

4 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

4 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

4 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

4 hours ago