ಮನರಂಜನೆ

ಸೈಮಾದಲ್ಲಿ ಕನ್ನಡಿಗರಿಗೆ ಅವಮಾನ : ನಡೆದ ಘಟನೆ ವಿವರಿಸಿದ ನಟ ದುನಿಯಾ ವಿಜಯ್

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ನಡೆದ ಅವಮಾನವನ್ನು ನಟ ದುನಿಯಾ ವಿಜಯ್ ನೇರವಾಗಿ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಇನ್ನೂ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ನಟ ದುನಿಯಾ ವಿಜಯ್, ನಿನ್ನೆ ಸೈಮಾನಲ್ಲಿ ನಡೆದಿದ್ದೇನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ.

ಇನ್ನು ಮುಂದೆ ನಾನು ಸೈಮಾಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ನಾನು ಮಾತ್ರವಲ್ಲ ನಾಳೆ ನನ್ನ ಮಕ್ಕಳಿಗೆ ಪ್ರಶಸ್ತಿ ಕೊಟ್ಟರೂ ಅದನ್ನೂ ಸ್ವೀಕರಿಸದಿರುವಂತೆ ಹೇಳಲಿದ್ದೇನೆ ಎಂದು ಬಲು ಬೇಸರದಿಂದಲೇ ಹೇಳಿದರು.

ಇದನ್ನು ಓದಿ:ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

ಮುಂದುವರೆದು ಮಾತನಾಡಿದ ಅವರು, ಮೊದಲು ತೆಲುಗು ನಟರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಆದರೆ ಕನ್ನಡಿಗರಿಗೆ ಪ್ರಶಸ್ತಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಡ ಮಾಡಿದರು. ಉದ್ದೇಶಪೂರ್ವಕವಾಗಿ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ಕನ್ನಡದ ಎಲ್ಲ ನಟ-ನಟಿಯರು, ತಂತ್ರಜ್ಞರು ಕೊನೆಯವರೆಗೆ ಕಾದು ಕುಳಿತುಕೊಳ್ಳುವಂತಾಯಿತು. ಕನ್ನಡದ ನಟ-ನಟಿಯರು ವೇದಿಕೆ ಮೇಲೆ ಹೋಗುವ ವೇಳೆಗೆ ಬೇರೆ ಭಾಷೆಯ ಯಾವೊಬ್ಬ ಕಲಾವಿದರೂ ಅಲ್ಲಿರಲಿಲ್ಲ. ನಾವು ಕೇವಲ ಕ್ಯಾಮೆರಾ ಫುಟೇಜ್​​ಗಾಗಿ ವೇದಿಕೆ ಮೇಲೆ ಹೋದಂತಾಯಿರು. ಇದು ಸ್ಪಷ್ಟವಾಗಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ದುನಿಯಾ ವಿಜಯ್ ಹೇಳಿದರು.

ಇಂತಹ ಅಪಮಾನ ಮೊದಲೇನೂ ಅಲ್ಲ, ಹಲವು ಕಡೆಗಳಲ್ಲಿ ಕನ್ನಡಿಗರಿಗೆ ಹೀಗೆ ಅವಮಾನ ಮಾಡಲಾಗಿದೆ. ಉಪೇಂದ್ರ ಅವರು ಎಂಥಹಾ ಲಿಜೆಂಡ್ ಅವರೂ ಸಹ ಪಾಪ ಕೊನೆಯ ವರೆಗೆ ಕಾದು ಕೂತಿದ್ದರು, ಅವರೂ ಸಹ ಆಯೋಜಕರ ಈ ದುರ್ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಾನು ವೇದಿಕೆ ಮೇಲೆ ಮಾತುಗಳಿಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರಿಯಾಗಿ ಮಾತನಾಡಿದಿರಿ ಎಂದು ಬೆನ್ನು ತಟ್ಟಿದರು’ ಎಂದರು ವಿಜಿ.

ಇಲ್ಲಿ ಮುಖ್ಯವಾದ ಸಮಸ್ಯೆ ಇರುವುದು ಆಯೋಜಕರದ್ದು. ಯಾರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಮಾಹಿತಿ ಅವರಿಗೆ ಇಲ್ಲ. ತೆಲುಗಿಗೆ ಒಂದು ಪ್ರಶಸ್ತಿ, ಕನ್ನಡಕ್ಕೆ ಒಂದು ಪ್ರಶಸ್ತಿ ಕೊಡುತ್ತಾ ಹೋಗಬಹುದು ಆದರೆ ಅದರ ಬದಲು ಕನ್ನಡಕ್ಕೆ ಕೊನೆಯದಾಗಿ ಕೊಟ್ಟರು. ಸುದೀಪ್ ಅವರ ಹೆಸರು ಹೇಳುವ ಸಂದರ್ಭದಲ್ಲಿ ಆಡಿಟೋರಿಯಂನಲ್ಲಿ ಒಬ್ಬರು ಸಹ ಇರಲಿಲ್ಲ. ಈಗ ನಾವು ಕನ್ನಡಿಗರು ಒಟ್ಟಾಗಿ ಒಂದು ನಿರ್ಣಯ ತೆಗೆದುಕೊಂಡು ಮುಂದಿನ ವರ್ಷ ಸೈಮಾ ಅನ್ನು ಬಾಯ್​​ಕಾಟ್ ಮಾಡಬೇಕು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago