ಮನರಂಜನೆ

ಸೈಮಾದಲ್ಲಿ ಕನ್ನಡಿಗರಿಗೆ ಅವಮಾನ : ನಡೆದ ಘಟನೆ ವಿವರಿಸಿದ ನಟ ದುನಿಯಾ ವಿಜಯ್

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ನಡೆದ ಅವಮಾನವನ್ನು ನಟ ದುನಿಯಾ ವಿಜಯ್ ನೇರವಾಗಿ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಇನ್ನೂ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ನಟ ದುನಿಯಾ ವಿಜಯ್, ನಿನ್ನೆ ಸೈಮಾನಲ್ಲಿ ನಡೆದಿದ್ದೇನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ.

ಇನ್ನು ಮುಂದೆ ನಾನು ಸೈಮಾಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ನಾನು ಮಾತ್ರವಲ್ಲ ನಾಳೆ ನನ್ನ ಮಕ್ಕಳಿಗೆ ಪ್ರಶಸ್ತಿ ಕೊಟ್ಟರೂ ಅದನ್ನೂ ಸ್ವೀಕರಿಸದಿರುವಂತೆ ಹೇಳಲಿದ್ದೇನೆ ಎಂದು ಬಲು ಬೇಸರದಿಂದಲೇ ಹೇಳಿದರು.

ಇದನ್ನು ಓದಿ:ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

ಮುಂದುವರೆದು ಮಾತನಾಡಿದ ಅವರು, ಮೊದಲು ತೆಲುಗು ನಟರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಆದರೆ ಕನ್ನಡಿಗರಿಗೆ ಪ್ರಶಸ್ತಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಡ ಮಾಡಿದರು. ಉದ್ದೇಶಪೂರ್ವಕವಾಗಿ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ಕನ್ನಡದ ಎಲ್ಲ ನಟ-ನಟಿಯರು, ತಂತ್ರಜ್ಞರು ಕೊನೆಯವರೆಗೆ ಕಾದು ಕುಳಿತುಕೊಳ್ಳುವಂತಾಯಿತು. ಕನ್ನಡದ ನಟ-ನಟಿಯರು ವೇದಿಕೆ ಮೇಲೆ ಹೋಗುವ ವೇಳೆಗೆ ಬೇರೆ ಭಾಷೆಯ ಯಾವೊಬ್ಬ ಕಲಾವಿದರೂ ಅಲ್ಲಿರಲಿಲ್ಲ. ನಾವು ಕೇವಲ ಕ್ಯಾಮೆರಾ ಫುಟೇಜ್​​ಗಾಗಿ ವೇದಿಕೆ ಮೇಲೆ ಹೋದಂತಾಯಿರು. ಇದು ಸ್ಪಷ್ಟವಾಗಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ದುನಿಯಾ ವಿಜಯ್ ಹೇಳಿದರು.

ಇಂತಹ ಅಪಮಾನ ಮೊದಲೇನೂ ಅಲ್ಲ, ಹಲವು ಕಡೆಗಳಲ್ಲಿ ಕನ್ನಡಿಗರಿಗೆ ಹೀಗೆ ಅವಮಾನ ಮಾಡಲಾಗಿದೆ. ಉಪೇಂದ್ರ ಅವರು ಎಂಥಹಾ ಲಿಜೆಂಡ್ ಅವರೂ ಸಹ ಪಾಪ ಕೊನೆಯ ವರೆಗೆ ಕಾದು ಕೂತಿದ್ದರು, ಅವರೂ ಸಹ ಆಯೋಜಕರ ಈ ದುರ್ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಾನು ವೇದಿಕೆ ಮೇಲೆ ಮಾತುಗಳಿಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರಿಯಾಗಿ ಮಾತನಾಡಿದಿರಿ ಎಂದು ಬೆನ್ನು ತಟ್ಟಿದರು’ ಎಂದರು ವಿಜಿ.

ಇಲ್ಲಿ ಮುಖ್ಯವಾದ ಸಮಸ್ಯೆ ಇರುವುದು ಆಯೋಜಕರದ್ದು. ಯಾರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಮಾಹಿತಿ ಅವರಿಗೆ ಇಲ್ಲ. ತೆಲುಗಿಗೆ ಒಂದು ಪ್ರಶಸ್ತಿ, ಕನ್ನಡಕ್ಕೆ ಒಂದು ಪ್ರಶಸ್ತಿ ಕೊಡುತ್ತಾ ಹೋಗಬಹುದು ಆದರೆ ಅದರ ಬದಲು ಕನ್ನಡಕ್ಕೆ ಕೊನೆಯದಾಗಿ ಕೊಟ್ಟರು. ಸುದೀಪ್ ಅವರ ಹೆಸರು ಹೇಳುವ ಸಂದರ್ಭದಲ್ಲಿ ಆಡಿಟೋರಿಯಂನಲ್ಲಿ ಒಬ್ಬರು ಸಹ ಇರಲಿಲ್ಲ. ಈಗ ನಾವು ಕನ್ನಡಿಗರು ಒಟ್ಟಾಗಿ ಒಂದು ನಿರ್ಣಯ ತೆಗೆದುಕೊಂಡು ಮುಂದಿನ ವರ್ಷ ಸೈಮಾ ಅನ್ನು ಬಾಯ್​​ಕಾಟ್ ಮಾಡಬೇಕು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

1 hour ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago