ಮನರಂಜನೆ

ಸೈಮಾದಲ್ಲಿ ಕನ್ನಡಿಗರಿಗೆ ಅವಮಾನ : ನಡೆದ ಘಟನೆ ವಿವರಿಸಿದ ನಟ ದುನಿಯಾ ವಿಜಯ್

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು ಮತ್ತು ತಂತ್ರಜ್ಞರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ನಡೆದ ಅವಮಾನವನ್ನು ನಟ ದುನಿಯಾ ವಿಜಯ್ ನೇರವಾಗಿ ಕಾರ್ಯಕ್ರಮದ ವೇದಿಕೆಯಲ್ಲಿಯೇ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಇನ್ನೂ ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ನಟ ದುನಿಯಾ ವಿಜಯ್, ನಿನ್ನೆ ಸೈಮಾನಲ್ಲಿ ನಡೆದಿದ್ದೇನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ.

ಇನ್ನು ಮುಂದೆ ನಾನು ಸೈಮಾಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ನಾನು ಮಾತ್ರವಲ್ಲ ನಾಳೆ ನನ್ನ ಮಕ್ಕಳಿಗೆ ಪ್ರಶಸ್ತಿ ಕೊಟ್ಟರೂ ಅದನ್ನೂ ಸ್ವೀಕರಿಸದಿರುವಂತೆ ಹೇಳಲಿದ್ದೇನೆ ಎಂದು ಬಲು ಬೇಸರದಿಂದಲೇ ಹೇಳಿದರು.

ಇದನ್ನು ಓದಿ:ನಮ್ ಋಷಿ ಈಗ ‘ಫ್ರಾಡ್ ಋಷಿ’: ಹಾಡುಗಳ ಬಿಡುಗಡೆ

ಮುಂದುವರೆದು ಮಾತನಾಡಿದ ಅವರು, ಮೊದಲು ತೆಲುಗು ನಟರಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಆದರೆ ಕನ್ನಡಿಗರಿಗೆ ಪ್ರಶಸ್ತಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಡ ಮಾಡಿದರು. ಉದ್ದೇಶಪೂರ್ವಕವಾಗಿ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ಕನ್ನಡದ ಎಲ್ಲ ನಟ-ನಟಿಯರು, ತಂತ್ರಜ್ಞರು ಕೊನೆಯವರೆಗೆ ಕಾದು ಕುಳಿತುಕೊಳ್ಳುವಂತಾಯಿತು. ಕನ್ನಡದ ನಟ-ನಟಿಯರು ವೇದಿಕೆ ಮೇಲೆ ಹೋಗುವ ವೇಳೆಗೆ ಬೇರೆ ಭಾಷೆಯ ಯಾವೊಬ್ಬ ಕಲಾವಿದರೂ ಅಲ್ಲಿರಲಿಲ್ಲ. ನಾವು ಕೇವಲ ಕ್ಯಾಮೆರಾ ಫುಟೇಜ್​​ಗಾಗಿ ವೇದಿಕೆ ಮೇಲೆ ಹೋದಂತಾಯಿರು. ಇದು ಸ್ಪಷ್ಟವಾಗಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ದುನಿಯಾ ವಿಜಯ್ ಹೇಳಿದರು.

ಇಂತಹ ಅಪಮಾನ ಮೊದಲೇನೂ ಅಲ್ಲ, ಹಲವು ಕಡೆಗಳಲ್ಲಿ ಕನ್ನಡಿಗರಿಗೆ ಹೀಗೆ ಅವಮಾನ ಮಾಡಲಾಗಿದೆ. ಉಪೇಂದ್ರ ಅವರು ಎಂಥಹಾ ಲಿಜೆಂಡ್ ಅವರೂ ಸಹ ಪಾಪ ಕೊನೆಯ ವರೆಗೆ ಕಾದು ಕೂತಿದ್ದರು, ಅವರೂ ಸಹ ಆಯೋಜಕರ ಈ ದುರ್ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಾನು ವೇದಿಕೆ ಮೇಲೆ ಮಾತುಗಳಿಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರಿಯಾಗಿ ಮಾತನಾಡಿದಿರಿ ಎಂದು ಬೆನ್ನು ತಟ್ಟಿದರು’ ಎಂದರು ವಿಜಿ.

ಇಲ್ಲಿ ಮುಖ್ಯವಾದ ಸಮಸ್ಯೆ ಇರುವುದು ಆಯೋಜಕರದ್ದು. ಯಾರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಮಾಹಿತಿ ಅವರಿಗೆ ಇಲ್ಲ. ತೆಲುಗಿಗೆ ಒಂದು ಪ್ರಶಸ್ತಿ, ಕನ್ನಡಕ್ಕೆ ಒಂದು ಪ್ರಶಸ್ತಿ ಕೊಡುತ್ತಾ ಹೋಗಬಹುದು ಆದರೆ ಅದರ ಬದಲು ಕನ್ನಡಕ್ಕೆ ಕೊನೆಯದಾಗಿ ಕೊಟ್ಟರು. ಸುದೀಪ್ ಅವರ ಹೆಸರು ಹೇಳುವ ಸಂದರ್ಭದಲ್ಲಿ ಆಡಿಟೋರಿಯಂನಲ್ಲಿ ಒಬ್ಬರು ಸಹ ಇರಲಿಲ್ಲ. ಈಗ ನಾವು ಕನ್ನಡಿಗರು ಒಟ್ಟಾಗಿ ಒಂದು ನಿರ್ಣಯ ತೆಗೆದುಕೊಂಡು ಮುಂದಿನ ವರ್ಷ ಸೈಮಾ ಅನ್ನು ಬಾಯ್​​ಕಾಟ್ ಮಾಡಬೇಕು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

28 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago