ಮನರಂಜನೆ

ಐಪಿಎಲ್‌ ಲೈವ್‌ಸ್ಟ್ರೀಮಿಂಗ್‌ ಆರೋಪ: ಬಾಹುಬಲಿ ಖ್ಯಾತಿಯ ನಟಿ ತಮನ್ನಾಗೆ ಸಮನ್ಸ್‌!

ಮಹಾರಾಷ್ಟ್ರ: ಸೌತ್‌ ಇಂಡಿಯನ್‌ ಸ್ಟಾರ್‌ ನಟಿ ತಮನ್ನಾ ಅವರು ಮಹದೇವ್‌ ಬೆಟ್ಟಿಂಗ್‌ ಆಪ್‌ನ ಅಂಗಸಂಸ್ಥೆಯಾದ fairplay ಅಪ್ಲಿಕೇಷನ್‌ಗೆ ಪ್ರಚಾರ ಹಾಗೂ ಪ್ರತಿನಿಧಿಸಿದ ಆರೋಪದ ಹಿನ್ನಲೆಯಲ್ಲಿ ಮುಂಬೈನ ಸೈಬರ್‌ ಕ್ರೈಂ ಪೊಲೀಸರು ಸಮನ್ಸ್‌ ನೀಡಿದ್ದಾರೆ.

2023ರ ಐಪಿಎಲ್‌ ಪಂದ್ಯವನ್ನು fairplay ಅಪ್ಲಿಕೇಷನ್‌ನಲ್ಲಿ ಅಕ್ರಮವಾಗಿ ನೇರಪ್ರಸಾರ ಮಾಡುವ ಮೂಲಕ ವಯಕಾಮ್‌ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ತಮನ್ನಾ ಏಪ್ರಿಲ್‌ 29ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಇವರ ಜೊತೆಗೆ ನಟ ಸಂಜಯ್‌ ದತ್‌ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಆದರೆ, ತಾವು ವಿದೇಶದಲ್ಲಿರುವುದರಿಂದ ವಿಚಾರಣೆಗೆ ಬೇರೆ ಸಮಯ, ದಿನಾಂಕ ನಿಗದಿ ಮಾಡುವಂತೆ ಅವರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

2023ರ ಐಪಿಎಲ್‌ ಪಂದ್ಯವಳಿಗಳನ್ನು ಫೇರ್‌ಪ್ಲೇ ಅಪ್ಲಿಕೇಷನ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಮಾಡಲಾಗಿತ್ತು. ಈ ಆಪ್‌ಗೆ ತಮನ್ನಾ ಪ್ರಚಾರ ಮಾಡಿದ್ದರು ಎಂದು ದೂರು ದಾಖಲಾಗಿದೆ. ಇವರೊಂದಿಗೆ ನಟ ಸಂಜಯ್‌ ದತ್‌, ಜಾಕ್ವೆಲಿನ್‌ ಫರ್ನಾಂಡಿಸ್‌ ಅವರ ಮ್ಯಾನೇಜರ್‌ಗಳ ಹೇಳಿಕೆಯನ್ನು ಮಹಾರಾಷ್ಟ್ರ ಕ್ರೈಂ ವಿಭಾಗದ ಪೊಲೀಸರು ಪಡೆದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಮಹದೇವ ಬೆಟ್ಟಿಂಗ್‌ ಆಪ್‌ನ ಅಕ್ರಮ ಮತ್ತು ಬೆಟ್ಟಿಂಗ್‌ ಕುರಿತು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿದೆ. ಇದರೊಂದಿಗೆ ತಮನ್ನಾ, ಸಂಜಯ್‌ ದತ್‌ ಅವರಿಗೆ ಕ್ರೈಂ ಬ್ರಾಂಚ್‌ ಪೊಲೀಸರು ಸಮನ್ಸ್‌ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

1 hour ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

1 hour ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

5 hours ago