ಮನರಂಜನೆ

ಐಪಿಎಲ್‌ ಲೈವ್‌ಸ್ಟ್ರೀಮಿಂಗ್‌ ಆರೋಪ: ಬಾಹುಬಲಿ ಖ್ಯಾತಿಯ ನಟಿ ತಮನ್ನಾಗೆ ಸಮನ್ಸ್‌!

ಮಹಾರಾಷ್ಟ್ರ: ಸೌತ್‌ ಇಂಡಿಯನ್‌ ಸ್ಟಾರ್‌ ನಟಿ ತಮನ್ನಾ ಅವರು ಮಹದೇವ್‌ ಬೆಟ್ಟಿಂಗ್‌ ಆಪ್‌ನ ಅಂಗಸಂಸ್ಥೆಯಾದ fairplay ಅಪ್ಲಿಕೇಷನ್‌ಗೆ ಪ್ರಚಾರ ಹಾಗೂ ಪ್ರತಿನಿಧಿಸಿದ ಆರೋಪದ ಹಿನ್ನಲೆಯಲ್ಲಿ ಮುಂಬೈನ ಸೈಬರ್‌ ಕ್ರೈಂ ಪೊಲೀಸರು ಸಮನ್ಸ್‌ ನೀಡಿದ್ದಾರೆ.

2023ರ ಐಪಿಎಲ್‌ ಪಂದ್ಯವನ್ನು fairplay ಅಪ್ಲಿಕೇಷನ್‌ನಲ್ಲಿ ಅಕ್ರಮವಾಗಿ ನೇರಪ್ರಸಾರ ಮಾಡುವ ಮೂಲಕ ವಯಕಾಮ್‌ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ತಮನ್ನಾ ಏಪ್ರಿಲ್‌ 29ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಇವರ ಜೊತೆಗೆ ನಟ ಸಂಜಯ್‌ ದತ್‌ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಆದರೆ, ತಾವು ವಿದೇಶದಲ್ಲಿರುವುದರಿಂದ ವಿಚಾರಣೆಗೆ ಬೇರೆ ಸಮಯ, ದಿನಾಂಕ ನಿಗದಿ ಮಾಡುವಂತೆ ಅವರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

2023ರ ಐಪಿಎಲ್‌ ಪಂದ್ಯವಳಿಗಳನ್ನು ಫೇರ್‌ಪ್ಲೇ ಅಪ್ಲಿಕೇಷನ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಮಾಡಲಾಗಿತ್ತು. ಈ ಆಪ್‌ಗೆ ತಮನ್ನಾ ಪ್ರಚಾರ ಮಾಡಿದ್ದರು ಎಂದು ದೂರು ದಾಖಲಾಗಿದೆ. ಇವರೊಂದಿಗೆ ನಟ ಸಂಜಯ್‌ ದತ್‌, ಜಾಕ್ವೆಲಿನ್‌ ಫರ್ನಾಂಡಿಸ್‌ ಅವರ ಮ್ಯಾನೇಜರ್‌ಗಳ ಹೇಳಿಕೆಯನ್ನು ಮಹಾರಾಷ್ಟ್ರ ಕ್ರೈಂ ವಿಭಾಗದ ಪೊಲೀಸರು ಪಡೆದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಮಹದೇವ ಬೆಟ್ಟಿಂಗ್‌ ಆಪ್‌ನ ಅಕ್ರಮ ಮತ್ತು ಬೆಟ್ಟಿಂಗ್‌ ಕುರಿತು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿದೆ. ಇದರೊಂದಿಗೆ ತಮನ್ನಾ, ಸಂಜಯ್‌ ದತ್‌ ಅವರಿಗೆ ಕ್ರೈಂ ಬ್ರಾಂಚ್‌ ಪೊಲೀಸರು ಸಮನ್ಸ್‌ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

1 hour ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

1 hour ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago