ಮನರಂಜನೆ

ಐಪಿಎಲ್‌ ಲೈವ್‌ಸ್ಟ್ರೀಮಿಂಗ್‌ ಆರೋಪ: ಬಾಹುಬಲಿ ಖ್ಯಾತಿಯ ನಟಿ ತಮನ್ನಾಗೆ ಸಮನ್ಸ್‌!

ಮಹಾರಾಷ್ಟ್ರ: ಸೌತ್‌ ಇಂಡಿಯನ್‌ ಸ್ಟಾರ್‌ ನಟಿ ತಮನ್ನಾ ಅವರು ಮಹದೇವ್‌ ಬೆಟ್ಟಿಂಗ್‌ ಆಪ್‌ನ ಅಂಗಸಂಸ್ಥೆಯಾದ fairplay ಅಪ್ಲಿಕೇಷನ್‌ಗೆ ಪ್ರಚಾರ ಹಾಗೂ ಪ್ರತಿನಿಧಿಸಿದ ಆರೋಪದ ಹಿನ್ನಲೆಯಲ್ಲಿ ಮುಂಬೈನ ಸೈಬರ್‌ ಕ್ರೈಂ ಪೊಲೀಸರು ಸಮನ್ಸ್‌ ನೀಡಿದ್ದಾರೆ.

2023ರ ಐಪಿಎಲ್‌ ಪಂದ್ಯವನ್ನು fairplay ಅಪ್ಲಿಕೇಷನ್‌ನಲ್ಲಿ ಅಕ್ರಮವಾಗಿ ನೇರಪ್ರಸಾರ ಮಾಡುವ ಮೂಲಕ ವಯಕಾಮ್‌ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ತಮನ್ನಾ ಏಪ್ರಿಲ್‌ 29ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಇವರ ಜೊತೆಗೆ ನಟ ಸಂಜಯ್‌ ದತ್‌ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಆದರೆ, ತಾವು ವಿದೇಶದಲ್ಲಿರುವುದರಿಂದ ವಿಚಾರಣೆಗೆ ಬೇರೆ ಸಮಯ, ದಿನಾಂಕ ನಿಗದಿ ಮಾಡುವಂತೆ ಅವರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

2023ರ ಐಪಿಎಲ್‌ ಪಂದ್ಯವಳಿಗಳನ್ನು ಫೇರ್‌ಪ್ಲೇ ಅಪ್ಲಿಕೇಷನ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಮಾಡಲಾಗಿತ್ತು. ಈ ಆಪ್‌ಗೆ ತಮನ್ನಾ ಪ್ರಚಾರ ಮಾಡಿದ್ದರು ಎಂದು ದೂರು ದಾಖಲಾಗಿದೆ. ಇವರೊಂದಿಗೆ ನಟ ಸಂಜಯ್‌ ದತ್‌, ಜಾಕ್ವೆಲಿನ್‌ ಫರ್ನಾಂಡಿಸ್‌ ಅವರ ಮ್ಯಾನೇಜರ್‌ಗಳ ಹೇಳಿಕೆಯನ್ನು ಮಹಾರಾಷ್ಟ್ರ ಕ್ರೈಂ ವಿಭಾಗದ ಪೊಲೀಸರು ಪಡೆದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಮಹದೇವ ಬೆಟ್ಟಿಂಗ್‌ ಆಪ್‌ನ ಅಕ್ರಮ ಮತ್ತು ಬೆಟ್ಟಿಂಗ್‌ ಕುರಿತು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿದೆ. ಇದರೊಂದಿಗೆ ತಮನ್ನಾ, ಸಂಜಯ್‌ ದತ್‌ ಅವರಿಗೆ ಕ್ರೈಂ ಬ್ರಾಂಚ್‌ ಪೊಲೀಸರು ಸಮನ್ಸ್‌ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

1 hour ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

9 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

9 hours ago