ಮಹಾರಾಷ್ಟ್ರ: ಸೌತ್ ಇಂಡಿಯನ್ ಸ್ಟಾರ್ ನಟಿ ತಮನ್ನಾ ಅವರು ಮಹದೇವ್ ಬೆಟ್ಟಿಂಗ್ ಆಪ್ನ ಅಂಗಸಂಸ್ಥೆಯಾದ fairplay ಅಪ್ಲಿಕೇಷನ್ಗೆ ಪ್ರಚಾರ ಹಾಗೂ ಪ್ರತಿನಿಧಿಸಿದ ಆರೋಪದ ಹಿನ್ನಲೆಯಲ್ಲಿ ಮುಂಬೈನ ಸೈಬರ್ ಕ್ರೈಂ ಪೊಲೀಸರು ಸಮನ್ಸ್ ನೀಡಿದ್ದಾರೆ.
2023ರ ಐಪಿಎಲ್ ಪಂದ್ಯವನ್ನು fairplay ಅಪ್ಲಿಕೇಷನ್ನಲ್ಲಿ ಅಕ್ರಮವಾಗಿ ನೇರಪ್ರಸಾರ ಮಾಡುವ ಮೂಲಕ ವಯಕಾಮ್ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ತಮನ್ನಾ ಏಪ್ರಿಲ್ 29ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.
ಇವರ ಜೊತೆಗೆ ನಟ ಸಂಜಯ್ ದತ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ, ತಾವು ವಿದೇಶದಲ್ಲಿರುವುದರಿಂದ ವಿಚಾರಣೆಗೆ ಬೇರೆ ಸಮಯ, ದಿನಾಂಕ ನಿಗದಿ ಮಾಡುವಂತೆ ಅವರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
2023ರ ಐಪಿಎಲ್ ಪಂದ್ಯವಳಿಗಳನ್ನು ಫೇರ್ಪ್ಲೇ ಅಪ್ಲಿಕೇಷನ್ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗಿತ್ತು. ಈ ಆಪ್ಗೆ ತಮನ್ನಾ ಪ್ರಚಾರ ಮಾಡಿದ್ದರು ಎಂದು ದೂರು ದಾಖಲಾಗಿದೆ. ಇವರೊಂದಿಗೆ ನಟ ಸಂಜಯ್ ದತ್, ಜಾಕ್ವೆಲಿನ್ ಫರ್ನಾಂಡಿಸ್ ಅವರ ಮ್ಯಾನೇಜರ್ಗಳ ಹೇಳಿಕೆಯನ್ನು ಮಹಾರಾಷ್ಟ್ರ ಕ್ರೈಂ ವಿಭಾಗದ ಪೊಲೀಸರು ಪಡೆದಿದ್ದಾರೆ ಎನ್ನಲಾಗಿದೆ.
ಈಗಾಗಲೇ ಮಹದೇವ ಬೆಟ್ಟಿಂಗ್ ಆಪ್ನ ಅಕ್ರಮ ಮತ್ತು ಬೆಟ್ಟಿಂಗ್ ಕುರಿತು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿದೆ. ಇದರೊಂದಿಗೆ ತಮನ್ನಾ, ಸಂಜಯ್ ದತ್ ಅವರಿಗೆ ಕ್ರೈಂ ಬ್ರಾಂಚ್ ಪೊಲೀಸರು ಸಮನ್ಸ್ ನೀಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…