ಮನರಂಜನೆ

ಐಪಿಎಲ್‌ ಲೈವ್‌ಸ್ಟ್ರೀಮಿಂಗ್‌ ಆರೋಪ: ಬಾಹುಬಲಿ ಖ್ಯಾತಿಯ ನಟಿ ತಮನ್ನಾಗೆ ಸಮನ್ಸ್‌!

ಮಹಾರಾಷ್ಟ್ರ: ಸೌತ್‌ ಇಂಡಿಯನ್‌ ಸ್ಟಾರ್‌ ನಟಿ ತಮನ್ನಾ ಅವರು ಮಹದೇವ್‌ ಬೆಟ್ಟಿಂಗ್‌ ಆಪ್‌ನ ಅಂಗಸಂಸ್ಥೆಯಾದ fairplay ಅಪ್ಲಿಕೇಷನ್‌ಗೆ ಪ್ರಚಾರ ಹಾಗೂ ಪ್ರತಿನಿಧಿಸಿದ ಆರೋಪದ ಹಿನ್ನಲೆಯಲ್ಲಿ ಮುಂಬೈನ ಸೈಬರ್‌ ಕ್ರೈಂ ಪೊಲೀಸರು ಸಮನ್ಸ್‌ ನೀಡಿದ್ದಾರೆ.

2023ರ ಐಪಿಎಲ್‌ ಪಂದ್ಯವನ್ನು fairplay ಅಪ್ಲಿಕೇಷನ್‌ನಲ್ಲಿ ಅಕ್ರಮವಾಗಿ ನೇರಪ್ರಸಾರ ಮಾಡುವ ಮೂಲಕ ವಯಕಾಮ್‌ ಸಂಸ್ಥೆಗೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದ್ದು, ತಮನ್ನಾ ಏಪ್ರಿಲ್‌ 29ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಇವರ ಜೊತೆಗೆ ನಟ ಸಂಜಯ್‌ ದತ್‌ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಆದರೆ, ತಾವು ವಿದೇಶದಲ್ಲಿರುವುದರಿಂದ ವಿಚಾರಣೆಗೆ ಬೇರೆ ಸಮಯ, ದಿನಾಂಕ ನಿಗದಿ ಮಾಡುವಂತೆ ಅವರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

2023ರ ಐಪಿಎಲ್‌ ಪಂದ್ಯವಳಿಗಳನ್ನು ಫೇರ್‌ಪ್ಲೇ ಅಪ್ಲಿಕೇಷನ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಮಾಡಲಾಗಿತ್ತು. ಈ ಆಪ್‌ಗೆ ತಮನ್ನಾ ಪ್ರಚಾರ ಮಾಡಿದ್ದರು ಎಂದು ದೂರು ದಾಖಲಾಗಿದೆ. ಇವರೊಂದಿಗೆ ನಟ ಸಂಜಯ್‌ ದತ್‌, ಜಾಕ್ವೆಲಿನ್‌ ಫರ್ನಾಂಡಿಸ್‌ ಅವರ ಮ್ಯಾನೇಜರ್‌ಗಳ ಹೇಳಿಕೆಯನ್ನು ಮಹಾರಾಷ್ಟ್ರ ಕ್ರೈಂ ವಿಭಾಗದ ಪೊಲೀಸರು ಪಡೆದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಮಹದೇವ ಬೆಟ್ಟಿಂಗ್‌ ಆಪ್‌ನ ಅಕ್ರಮ ಮತ್ತು ಬೆಟ್ಟಿಂಗ್‌ ಕುರಿತು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿದೆ. ಇದರೊಂದಿಗೆ ತಮನ್ನಾ, ಸಂಜಯ್‌ ದತ್‌ ಅವರಿಗೆ ಕ್ರೈಂ ಬ್ರಾಂಚ್‌ ಪೊಲೀಸರು ಸಮನ್ಸ್‌ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

20 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

20 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

20 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

20 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

20 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

20 hours ago