ಮನರಂಜನೆ

ನಿಂತೇ ಹೋಯ್ತಾ ಯುವ, ‘ದುನಿಯಾ’ ಸೂರಿ ಹೊಸ ಸಿನಿಮಾ?

ಯುವ ಅಭಿನಯದ ‘ಎಕ್ಕ’ ಚಿತ್ರವು ಜುಲೈ ತಿಂಗಳಲ್ಲಿ ಬಿಡುಗಡೆಯಾಗಿ ಒಂದಿಷ್ಟು ಸದ್ದು ಮಾಡಿತಾದರೂ, ದೊಡ್ಡ ಯಶಸ್ಸನ್ನೇನೂ ಕಾಣಲಿಲ್ಲ. ಚಿತ್ರ ಗೆದ್ದಿದೆ ಎಂದು ಚಿತ್ರತಂಡದವರು ಸಂಭ್ರಮಪಟ್ಟರಾದರೂ, ಆ ಸಂಭ್ರಮ ಹೆಚ್ಚು ದಿನ ಮುಂದುವರೆಯಲಿಲ್ಲ. ಈ ಚಿತ್ರದ ನಂತರ ಯುವ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕೇಳಿಬರುತ್ತಿದೆ.

‘ಎಕ್ಕ’ ಚಿತ್ರವನ್ನು ಚಿತ್ರವನ್ನು ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ KRG ಸ್ಟುಡಿಯೋಸ್‍ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲಂಸ್‍ ಜೊತೆಯಾಗಿ ನಿರ್ಮಿಸಿದ್ದವು. ‘ಎಕ್ಕ’ ಚಿತ್ರದ ಬಿಡುಗಡೆಗೂ ಮೊದಲೇ ಇದೇ ಸಂಸ್ಥೆಗಳಡಿ ಹೊಸದೊಂದು ಚಿತ್ರ ಘೋಷಣೆಯಾಗಿತ್ತು.

ವಿಶೇಷವೆಂದರೆ, ಈ ಚಿತ್ರದಲ್ಲೂ ಯುವ ರಾಜಕುಮಾರ್ ನಟಿಸುತ್ತಿದ್ದು, ಸೂರಿ ನಿರ್ದೇಶಿಸಬೇಕಿತ್ತು. ವಿಶೇಷವೆಂದರೆ, ಚಿತ್ರದ ಮೂಲಕ ವಿಜಯ್‍ ಅವರನ್ನು ಹೀರೋ ಮಾಡಿದ್ದ ಸೂರಿ, ಈ ಚಿತ್ರದಲ್ಲಿ ವಿಜಯ್‍ ಅವರ ಮಗಳು ರಿತನ್ಯಾ ಅವರನ್ನು ಮೊದಲ ಬಾರಿಗೆ ನಿರ್ದೇಶನ ಮಾಡಬೇಕಿತ್ತು. ಈ ಚಿತ್ರದ ಮುಹೂರ್ತ ಈ ವರ್ಷದ ಅಕ್ಷಯ ತೃತೀಯ ದಿನ ಆಗಿತ್ತು. ಆದರೆ, ಈ ಚಿತ್ರ ಇದೀಗ ನಿಂತಿರುವ ಸುದ್ದಿ ಕೇಳಿಬರುತ್ತಿದೆ.

ಇದನ್ನು ಓದಿ: ನವೆಂಬರ್.06ಕ್ಕೆ ಬರಲಿದೆ ಉಪೇಂದ್ರ, ರಮ್ಯಾ ಅಭಿನಯದ ‘ರಕ್ತ ಕಾಶ್ಮೀರ’

ಇನ್ನೂ ಹೆಸರಿಡದ ಈ ಚಿತ್ರಕ್ಕೆ ಮೇ ತಿಂಗಳ ಕೊನೆಯಲ್ಲಿ ಚಿತ್ರೀಕರಣ ಪ್ರಾರಂಭವಾಗಬೇಕಿತ್ತು. ಆದರೆ, ಅಕ್ಟೋಬರ್ ಆದರೂ ಚಿತ್ರ ಮುಂದುವರೆಯುವ ಲಕ್ಷಣಗಳು ಕಾಣುತ್ತಿಲ್ಲ. ಈ ಮಧ್ಯೆ, ಧ್ರುವ ಸರ್ಜಾ ಅಭಿನಯದಲ್ಲಿ ಸೂರಿ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಮತ್ತು ಆ ಚಿತ್ರ ಸದ್ಯದಲ್ಲೇ ಸೆಟ್ಟೇರಲಿದೆ ಎಂಬ ಮಾತು ಕೇಳಿಬರುತ್ತಿದೆ. ಹೀಗಿರುವಾಗ, ಸೂರಿ ಮತ್ತು ಯುವ ಕಾಂಬಿನೇಷನ್‍ನ ಚಿತ್ರ ನಿಂತು ಹೋಯಿತಾ? ಎಂಬ ಚರ್ಚೆಯಾಗುತ್ತಿದೆ.

ಮೂಲಗಳ ಪ್ರಕಾರ, ‘ಎಕ್ಕ’ ಚಿತ್ರವನ್ನು ಮುಹೂರ್ತದಿಂದ ಏಳೂವರೆ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ, ಹೊಸ ಚಿತ್ರವನ್ನು ಎಂಟು ತಿಂಗಳಲ್ಲಿ ಮುಗಿಸಿ ಕೊಡಬೇಕು ಎಂದು ನಿರ್ಮಾಪಕರ ಷರತ್ತಾಗಿತ್ತಂತೆ. ಆದರೆ, ಸೂರಿ ತಮಗೆ ಚಿತ್ರೀಕರಣಕ್ಕೆ ಹೆಚ್ಚು ಸಮಯ ಬೇಕು ಮತ್ತು ಎಂಟು ತಿಂಗಳಲ್ಲಿ ಸಿನಿಮಾ ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ, ಈ ಚಿತ್ರವನ್ನು ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ, ಯುವ ಕೂಡಾ ಈ ಚಿತ್ರ ಬಿಟ್ಟು ಬೇರೆ ಕಥೆಗಳನ್ನು ಕೇಳುತ್ತಿದ್ದಾರೆ ಎಂಬ ಸುದ್ದಿ ಇದೆ.

ಆದರೆ, ಚಿತ್ರ ನಿಂತಿರುವ ಕುರಿತು ಚಿತ್ರತಂಡದವರು ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

ಆಂದೋಲನ ಡೆಸ್ಕ್

Recent Posts

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

11 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

26 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

47 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago