ಮನರಂಜನೆ

ನಿಂತೇ ಹೋಯ್ತಾ ಯುವ, ‘ದುನಿಯಾ’ ಸೂರಿ ಹೊಸ ಸಿನಿಮಾ?

ಯುವ ಅಭಿನಯದ ‘ಎಕ್ಕ’ ಚಿತ್ರವು ಜುಲೈ ತಿಂಗಳಲ್ಲಿ ಬಿಡುಗಡೆಯಾಗಿ ಒಂದಿಷ್ಟು ಸದ್ದು ಮಾಡಿತಾದರೂ, ದೊಡ್ಡ ಯಶಸ್ಸನ್ನೇನೂ ಕಾಣಲಿಲ್ಲ. ಚಿತ್ರ ಗೆದ್ದಿದೆ ಎಂದು ಚಿತ್ರತಂಡದವರು ಸಂಭ್ರಮಪಟ್ಟರಾದರೂ, ಆ ಸಂಭ್ರಮ ಹೆಚ್ಚು ದಿನ ಮುಂದುವರೆಯಲಿಲ್ಲ. ಈ ಚಿತ್ರದ ನಂತರ ಯುವ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕೇಳಿಬರುತ್ತಿದೆ.

‘ಎಕ್ಕ’ ಚಿತ್ರವನ್ನು ಚಿತ್ರವನ್ನು ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ KRG ಸ್ಟುಡಿಯೋಸ್‍ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲಂಸ್‍ ಜೊತೆಯಾಗಿ ನಿರ್ಮಿಸಿದ್ದವು. ‘ಎಕ್ಕ’ ಚಿತ್ರದ ಬಿಡುಗಡೆಗೂ ಮೊದಲೇ ಇದೇ ಸಂಸ್ಥೆಗಳಡಿ ಹೊಸದೊಂದು ಚಿತ್ರ ಘೋಷಣೆಯಾಗಿತ್ತು.

ವಿಶೇಷವೆಂದರೆ, ಈ ಚಿತ್ರದಲ್ಲೂ ಯುವ ರಾಜಕುಮಾರ್ ನಟಿಸುತ್ತಿದ್ದು, ಸೂರಿ ನಿರ್ದೇಶಿಸಬೇಕಿತ್ತು. ವಿಶೇಷವೆಂದರೆ, ಚಿತ್ರದ ಮೂಲಕ ವಿಜಯ್‍ ಅವರನ್ನು ಹೀರೋ ಮಾಡಿದ್ದ ಸೂರಿ, ಈ ಚಿತ್ರದಲ್ಲಿ ವಿಜಯ್‍ ಅವರ ಮಗಳು ರಿತನ್ಯಾ ಅವರನ್ನು ಮೊದಲ ಬಾರಿಗೆ ನಿರ್ದೇಶನ ಮಾಡಬೇಕಿತ್ತು. ಈ ಚಿತ್ರದ ಮುಹೂರ್ತ ಈ ವರ್ಷದ ಅಕ್ಷಯ ತೃತೀಯ ದಿನ ಆಗಿತ್ತು. ಆದರೆ, ಈ ಚಿತ್ರ ಇದೀಗ ನಿಂತಿರುವ ಸುದ್ದಿ ಕೇಳಿಬರುತ್ತಿದೆ.

ಇದನ್ನು ಓದಿ: ನವೆಂಬರ್.06ಕ್ಕೆ ಬರಲಿದೆ ಉಪೇಂದ್ರ, ರಮ್ಯಾ ಅಭಿನಯದ ‘ರಕ್ತ ಕಾಶ್ಮೀರ’

ಇನ್ನೂ ಹೆಸರಿಡದ ಈ ಚಿತ್ರಕ್ಕೆ ಮೇ ತಿಂಗಳ ಕೊನೆಯಲ್ಲಿ ಚಿತ್ರೀಕರಣ ಪ್ರಾರಂಭವಾಗಬೇಕಿತ್ತು. ಆದರೆ, ಅಕ್ಟೋಬರ್ ಆದರೂ ಚಿತ್ರ ಮುಂದುವರೆಯುವ ಲಕ್ಷಣಗಳು ಕಾಣುತ್ತಿಲ್ಲ. ಈ ಮಧ್ಯೆ, ಧ್ರುವ ಸರ್ಜಾ ಅಭಿನಯದಲ್ಲಿ ಸೂರಿ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಮತ್ತು ಆ ಚಿತ್ರ ಸದ್ಯದಲ್ಲೇ ಸೆಟ್ಟೇರಲಿದೆ ಎಂಬ ಮಾತು ಕೇಳಿಬರುತ್ತಿದೆ. ಹೀಗಿರುವಾಗ, ಸೂರಿ ಮತ್ತು ಯುವ ಕಾಂಬಿನೇಷನ್‍ನ ಚಿತ್ರ ನಿಂತು ಹೋಯಿತಾ? ಎಂಬ ಚರ್ಚೆಯಾಗುತ್ತಿದೆ.

ಮೂಲಗಳ ಪ್ರಕಾರ, ‘ಎಕ್ಕ’ ಚಿತ್ರವನ್ನು ಮುಹೂರ್ತದಿಂದ ಏಳೂವರೆ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ, ಹೊಸ ಚಿತ್ರವನ್ನು ಎಂಟು ತಿಂಗಳಲ್ಲಿ ಮುಗಿಸಿ ಕೊಡಬೇಕು ಎಂದು ನಿರ್ಮಾಪಕರ ಷರತ್ತಾಗಿತ್ತಂತೆ. ಆದರೆ, ಸೂರಿ ತಮಗೆ ಚಿತ್ರೀಕರಣಕ್ಕೆ ಹೆಚ್ಚು ಸಮಯ ಬೇಕು ಮತ್ತು ಎಂಟು ತಿಂಗಳಲ್ಲಿ ಸಿನಿಮಾ ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ, ಈ ಚಿತ್ರವನ್ನು ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ, ಯುವ ಕೂಡಾ ಈ ಚಿತ್ರ ಬಿಟ್ಟು ಬೇರೆ ಕಥೆಗಳನ್ನು ಕೇಳುತ್ತಿದ್ದಾರೆ ಎಂಬ ಸುದ್ದಿ ಇದೆ.

ಆದರೆ, ಚಿತ್ರ ನಿಂತಿರುವ ಕುರಿತು ಚಿತ್ರತಂಡದವರು ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago