ಮನರಂಜನೆ

ಶ್ರೇಯಾ ಘೋಶಾಲ್‍ ಕನ್ನಡ ಚಿತ್ರಗಳಿಂದ ದೂರಾಗುತ್ತಿದ್ದಾರೆಯೇ?

ಜನಪ್ರಿಯ ಗಾಯಕಿ ಶ್ರೇಯಾ ಘೋಶಾಲ್‍ ಯಾಕೆ ಕನ್ನಡ ಹಾಡುಗಳನ್ನು ಹಾಡುತ್ತಿಲ್ಲ? ಇಂಥದ್ದೊಂದು ಪ್ರಶ್ನೆ ಕನ್ನಡ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದೆ. ಅದಕ್ಕೆ ಸರಿಯಾಗಿ, ಶ್ರೇಯಾ ಘೋಷಾಲ್‍ ಅವರು ಕನ್ನಡದಲ್ಲಿ ಹಾಡೊಂದನ್ನು ಹಾಡಿ ಬಹಳ ಸಮಯವಾಗಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವಕ್ಕೆ ಅವರಿಂದ ಒಂದು ಹಾಡು ಹಾಡಿಸಬೇಕು ಎಂದು ನಿರ್ದೇಶಕ ನಾಗಶೇಖರ್ ಪ್ರಯತ್ನಿಸಿ ಸೋತಿದ್ದಾರೆ.

ಈ ಕುರಿತು ಮಾತನಾಡುವ ನಾಗಶೇಖರ್, ‘ಶ್ರೇಯಾ ಘೋಶಾಲ್‍ ಅವರು ಕನ್ನಡ ಹಾಡುಗಳನ್ನು ಹಾಡುವುದಿಲ್ಲ ಎಂದು ಎಲ್ಲೂ ಹೇಳಿಕೊಂಡಿಲ್ಲ. ಆದರೆ, ಅವರು ಇತ್ತೀಚೆಗೆ ಯಾವೊಂದು ಹಾಡನ್ನೂ ಹಾಡುತ್ತಿಲ್ಲ. ಅವರಿಂದ ಕನ್ನಡ ಹಾಡುಗಳನ್ನು ಹಾಡಿಸಬೇಕು ಎಂದು ಕಾದಿರುವವರ ದೊಡ್ಡ ಸಂಖ್ಯೆ ಇದೆ. ಆದರೆ, ಅವರಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ನಮ್ಮ ಚಿತ್ರದ ಒಂದು ಹಾಡಿಗೆ ಅವರ ಧ್ವನಿ ಸೂಕ್ತವಾಗಿತ್ತು. ಆದರೆ, ಅದು ಸಾಧ್ಯವಾಗದೆ ಸಂಗೀತ ರವೀಂದ್ರನಾಥ್‍ ಅವರಿಂದ ಹಾಡಿಸಿದೆವು’ ಎನ್ನುತ್ತಾರೆ ನಾಗಶೇಖರ್‍.

ಈ ಕುರಿತು ಇನ್ನಷ್ಟು ಬೆಳಕು ಚೆಲ್ಲುವ ಅವರು, ‘ನಮ್ಮ ಚಿತ್ರದ ‘ಮಳೆಯಂತೆ ಬಾ …’ ಹಾಡನ್ನು ಸಂಗೀತಾ ರವೀಂದ್ರನಾಥ್‍ ಅವರಿಂದಲೇ ಹಾಡಿಸಬೇಕು ಎಂದು ಚಿತ್ರತಂಡದ ಆಸೆ ಇತ್ತು. ನಿರ್ಮಾಪಕರೂ ಅದನ್ನೇ ಹೇಳಿದರು. ನಾನು ಮಾತ್ರ ಶ್ರೇಯಾ ಘೋಶಾಲ್‍ ಹಾಡಬೇಕು ಎಂದು ಪಟ್ಟುಹಿಡಿದಿದ್ದೆ. ಏಕೆಂದರೆ, ನನ್ನ ಹಿಂದಿನ ಚಿತ್ರಗಳಲ್ಲಿ ಎರಡು ಸೂಪರ್‍ ಹಿಟ್‍ ಗೀತೆಗಳನ್ನು ಕೊಟ್ಟವರು ಅವರು. ಸಂಗೀತ ನಿರ್ದೇಶಕ ಶ್ರೀಧರ್‍ ಸಂಭ್ರಮ್‍, ಶ್ರೇಯಾ ಘೋಶಾಲ್‍ ಅವರನ್ನು ಸಂಪರ್ಕಿಸುವುದಕ್ಕೆ ಪ್ರಯತ್ನ ಮಾಡಿ ಸೋತರು. ಕೊನೆಗೆ ನಾನೇ ಮಾತನಾಡುತ್ತೇನೆ ಎಂದೆ. ನನ್ನ ‘ಸಂಜು ವೆಡ್ಸ್ ಗೀತಾ’ ಚಿತ್ರದ ‘ಗಗನವೇ ಬಾಗಿ …’ ಮತ್ತು ‘ಮೈನಾ’ ಚಿತ್ರದ ‘ಮೊದಲ ಮಳೆಯಂತೆ …’ ಹಾಡುಗಳನ್ನು ಅವರಿಗೆ ಕಳಿಸಿದೆ. ‘ಗಗನವೇ ಬಾಗಿ …’ ಹಾಡಿಗೆ ಅವರಿಗೆ ಫಿಲಂಫೇರ್‍ ಪ್ರಶಸ್ತಿ ಸಹ ಸಿಕ್ಕಿತ್ತು. ಅದನ್ನೂ ನೆನಪಿಸಿದೆ. ಆದರೆ, ಅಂತಿಮವಾಗಿ ಅವರು ಯಾಕೋ ಆಸಕ್ತಿ ತೋರಿಸುತ್ತಿಲ್ಲ ಎಂದು ಅವರ ಮ್ಯಾನೇಜರ್‍ ಹೇಳಿದರು. ಕೊನೆಗೆ ಪ್ರಯತ್ನ ಬಿಟ್ಟು, ಸಂಗೀತಾ ರವೀಂದ್ರನಾಥ್‍ ಅವರಿಂದಲೇ ಹಾಡನ್ನೂ ಹಾಡಿಸಿದೆವು’ ಎನ್ನುತ್ತಾರೆ ನಾಗಶೇಖರ್‍.

2003ರಲ್ಲಿ ಬಿಡುಗಡೆಯದ ‘ಪ್ಯಾರಿಸ್‍ ಪ್ರಣಯ’ ಚಿತ್ರದ ‘ಕೃಷ್ಣ ನೀ ಬೇಗನೆ ಬಾರೋ ..’ ಹಾಡನ್ನು ಹಾಡುವ ಮೂಲಕ ಕನ್ನಡಕ್ಕೆ ಬಂದ ಶ್ರೇಯಾ, ನಂತರದ ವರ್ಷಗಳಲ್ಲಿ ಕನ್ನಡದಲ್ಲಿ ನೂರಾರು ಜನಪ್ರಿಯ ಹಾಡುಗಳನ್ನು ಹಾಡಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

17 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

17 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

17 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

17 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

17 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

17 hours ago