ಮನರಂಜನೆ

ಸಿನಿ ಪಯಣಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ವಿದಾಯ?

ಚೆನ್ನೈ : ವಿಶ್ವ ಮೆಚ್ಚಿದ ಸೂಪರ್‌ ಸ್ಟಾರ್‌, ಕ್ರೇಜ್‌ ಕಾ ಬಾಪ್‌ ರಜನಿಕಾಂತ್‌ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಜನಿಕಾಂತ್‌ ಅವರಿಗೆ ಟ್ರೆಂಡ್‌ಗೆ ತಕ್ಕಂತೆ ಸಿನಿಮಾ ಮಾಡಿ ಸೈ ಅನ್ನಿಸಿಕೊಂಡು ಅದನ್ನ ಗೆಲ್ಲಿಸುವ ತಾಕತ್ತು ಇದೆ. ಇದೀಗ ತಲೈವಾ ರಜನಿಕಾಂತ್ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಗಳಾಗುತ್ತಿವೆ.

ಸದ್ಯಕ್ಕೆ ತಲೈವಾ ಕೈಯಲ್ಲಿ ನೂರಾರು ಕೋಟಿಯ ನಾಲ್ಕು ಪ್ರಾಜೆಕ್ಟ್‌ಗಳಿವೆ. `ಜೈಲರ್ 2′ ಸಿನಿಮಾವನ್ನೂ ಪೂರ್ಣಗೊಳಿಸಿದ್ದಾರೆ. ಕಮಲ್ ಹಾಸನ್ ಜೊತೆಗಿನ ಕಾಂಬೋ ಚಿತ್ರ ಘೋಷಣೆಯಾಗಿದೆ. ಡೈರೆಕ್ಟರ್ ನೆಲ್ಸನ್ ಜೊತೆ ಇನ್ನೊಂದು ಚಿತ್ರವೂ ಫಿಕ್ಸ್ ಆಗಿದೆ. ಇಷ್ಟೇ ಅಲ್ಲ ನಿರ್ಮಾಪಕ ಸಿ ಸುಂದರ್ ಜೊತೆಯೂ ರಜನಿಕಾಂತ್ ಡೇಟ್ ಇದೆ. ಹೀಗೆ ಸದ್ಯಕ್ಕೆ ರಜನಿಕಾಂತ್ ಇನ್ನೂ 2027ರವರೆಗೆ ಶೂಟಿಂಗ್ ಮಾಡಿದರೂ ಮುಗಿಯದಷ್ಟು ಪ್ರಾಜೆಕ್ಟ್‌ಗಳನ್ನ ಇಟ್ಟುಕೊಂಡಿದ್ದಾರೆ. ಆದರೆ ಈ ಹೊತ್ತಲ್ಲೇ ರಜನಿಕಾಂತ್ ನಿವೃತ್ತಿ ತೆಗೆದುಕೊಳ್ಳಲು ನಿರ್ಧರಿಸಿರುವುದರ ಮಾತು ಕೇಳಿಬರುತ್ತಿದೆ.

ಇದನ್ನು ಓದಿ: ಮೈಸೂರಲ್ಲಿ ರಜನಿಕಾಂತ್‌ : ಅಭಿಮಾನಿಗಳಿಗೆ ನಮಸ್ಕರಿಸಿದ ತಲೈವಾ

ತಲೈವಾ ಕುರಿತು ನಿವೃತ್ತಿ ಮಾತು ಕೇಳಿಬರ್ತಿರೋದು ಇದೇ ಮೊದಲಲ್ಲ. ರಜನಿಕಾಂತ್ ತಮ್ಮ ಮನೆಗೆ ಕಥೆ ಪಟ್ಟಿ ಹಿಡ್ಕೊಂಡು ಬರುವ ನಿರ್ದೇಶಕ ಹಾಗೂ ಚೆಕ್‌ಬುಕ್ ಹಿಡ್ಕೊಂಡು ಬರುವ ನಿರ್ಮಾಪಕರನ್ನ ವಾಪಸ್ ಕಳುಹಿಸುತ್ತಿದ್ದಾರಂತೆ. ಇದೇ ವಿಚಾರಕ್ಕೆ ರಜನಿಕಾಂತ್ ವಿದಾಯ ಹೇಳುವ ಸುದ್ದಿ ಗುಲ್ಲಾಗಿದೆ. ಹಾಗಂತ ಅವರು ರಾಜಕೀಯ ಎಂಟ್ರಿ ಮಾಡ್ತಿದ್ದಾರೆ ಅಂತೇನಿಲ್ಲ, ಕಾರಣ ಮಾತ್ರ ಬೇರೆಯೇ ಇದೆ. ರಜನಿಕಾಂತ್ ವಯಸ್ಸು ಏರುತ್ತಿದೆ. 70 ವರ್ಷ ವಯಸ್ಸು ದಾಟಿದ ಬಳಿಕ ಸಹಜವಾಗೇ ದೇಹ ಕ್ವೀಣಿಸುತ್ತದೆ, ಸುಸ್ತೂ ಜಾಸ್ತಿ ಆಗುತ್ತದೆ. ಹಾಗಂತ ಇದುವೇ ವಿದಾಯಕ್ಕೆ ರೀಸನ್ ಅಲ್ವೇ ಅಲ್ಲ.ರಜನಿಕಾಂತ್ ಮನಸ್ಸು ಆಧ್ಯಾತ್ಮದತ್ತ ಹೆಚ್ಚಾಗಿ ವಾಲುತ್ತಿದೆ.

ಸರಳವಾಗಿ ಬದುಕೋದನ್ನ ಜೀವನದಲ್ಲಿ ರೂಢಿಸಿಕೊಂಡು ಬಂದವರು ರಜನಿ. ಹೀಗಾಗಿ ವರ್ಷಕ್ಕೊಮ್ಮೆಯಾದ್ರೂ ಆಧ್ಯಾತ್ಮಿಕ ಪ್ರವಾಸ ಮಾಡ್ತಾರೆ. ಮನಸ್ಸಾದಾಗೆಲ್ಲ ಕಾರು ಹತ್ತಿ, ಹುಟ್ಟೂರು ಬೆಂಗಳೂರಿಗೆ ಬಂದು ಯಾರಿಗೂ ಗೊತ್ತಾಗದಂತೆ ಇದ್ದುಬಿಡ್ತಾರೆ. ಇಂಥಹ ರಜನಿಕಾಂತ್ ಎಲ್ಲಾ ಮೋಹಗಳನ್ನೂ ತ್ಯಜಿಸಿ ಜೀವಿಸುತ್ತಿರುವ ವ್ಯಕ್ತಿ. ವಯಸ್ಸು ಮಾಗಿದಂತೆ ಮನಸ್ಸೂ ಮಾಗುತ್ತಿದೆ. ಹೀಗಾಗಿ ಕೈಯಲ್ಲಿದ್ದ ಪ್ರಾಜೆಕ್ಟ್‌ಗಳನ್ನ ಮುಗಿಸಿಕೊಟ್ಟು, ಬಳಿಕ ನೋಡಿದ್ರಾಯ್ತು ಎಂದು ಯಾವುದೇ ಪ್ರಾಜೆಕ್ಟ್‌ಗಳನ್ನ ರಜನಿ ಒಪ್ಪಿಕೊಳ್ತಿಲ್ಲ. ಹೀಗಾಗಿ ರಜನಿಕಾಂತ್ ಚಿತ್ರರಂಗಕ್ಕೆ ವಿದಾಯದ ಎಲ್ಲೆಡೆ ಸುದ್ದಿ ಚರ್ಚೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago