ಮನರಂಜನೆ

ಸಿನಿ ಪಯಣಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ವಿದಾಯ?

ಚೆನ್ನೈ : ವಿಶ್ವ ಮೆಚ್ಚಿದ ಸೂಪರ್‌ ಸ್ಟಾರ್‌, ಕ್ರೇಜ್‌ ಕಾ ಬಾಪ್‌ ರಜನಿಕಾಂತ್‌ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ.

ರಜನಿಕಾಂತ್‌ ಅವರಿಗೆ ಟ್ರೆಂಡ್‌ಗೆ ತಕ್ಕಂತೆ ಸಿನಿಮಾ ಮಾಡಿ ಸೈ ಅನ್ನಿಸಿಕೊಂಡು ಅದನ್ನ ಗೆಲ್ಲಿಸುವ ತಾಕತ್ತು ಇದೆ. ಇದೀಗ ತಲೈವಾ ರಜನಿಕಾಂತ್ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಗಳಾಗುತ್ತಿವೆ.

ಸದ್ಯಕ್ಕೆ ತಲೈವಾ ಕೈಯಲ್ಲಿ ನೂರಾರು ಕೋಟಿಯ ನಾಲ್ಕು ಪ್ರಾಜೆಕ್ಟ್‌ಗಳಿವೆ. `ಜೈಲರ್ 2′ ಸಿನಿಮಾವನ್ನೂ ಪೂರ್ಣಗೊಳಿಸಿದ್ದಾರೆ. ಕಮಲ್ ಹಾಸನ್ ಜೊತೆಗಿನ ಕಾಂಬೋ ಚಿತ್ರ ಘೋಷಣೆಯಾಗಿದೆ. ಡೈರೆಕ್ಟರ್ ನೆಲ್ಸನ್ ಜೊತೆ ಇನ್ನೊಂದು ಚಿತ್ರವೂ ಫಿಕ್ಸ್ ಆಗಿದೆ. ಇಷ್ಟೇ ಅಲ್ಲ ನಿರ್ಮಾಪಕ ಸಿ ಸುಂದರ್ ಜೊತೆಯೂ ರಜನಿಕಾಂತ್ ಡೇಟ್ ಇದೆ. ಹೀಗೆ ಸದ್ಯಕ್ಕೆ ರಜನಿಕಾಂತ್ ಇನ್ನೂ 2027ರವರೆಗೆ ಶೂಟಿಂಗ್ ಮಾಡಿದರೂ ಮುಗಿಯದಷ್ಟು ಪ್ರಾಜೆಕ್ಟ್‌ಗಳನ್ನ ಇಟ್ಟುಕೊಂಡಿದ್ದಾರೆ. ಆದರೆ ಈ ಹೊತ್ತಲ್ಲೇ ರಜನಿಕಾಂತ್ ನಿವೃತ್ತಿ ತೆಗೆದುಕೊಳ್ಳಲು ನಿರ್ಧರಿಸಿರುವುದರ ಮಾತು ಕೇಳಿಬರುತ್ತಿದೆ.

ಇದನ್ನು ಓದಿ: ಮೈಸೂರಲ್ಲಿ ರಜನಿಕಾಂತ್‌ : ಅಭಿಮಾನಿಗಳಿಗೆ ನಮಸ್ಕರಿಸಿದ ತಲೈವಾ

ತಲೈವಾ ಕುರಿತು ನಿವೃತ್ತಿ ಮಾತು ಕೇಳಿಬರ್ತಿರೋದು ಇದೇ ಮೊದಲಲ್ಲ. ರಜನಿಕಾಂತ್ ತಮ್ಮ ಮನೆಗೆ ಕಥೆ ಪಟ್ಟಿ ಹಿಡ್ಕೊಂಡು ಬರುವ ನಿರ್ದೇಶಕ ಹಾಗೂ ಚೆಕ್‌ಬುಕ್ ಹಿಡ್ಕೊಂಡು ಬರುವ ನಿರ್ಮಾಪಕರನ್ನ ವಾಪಸ್ ಕಳುಹಿಸುತ್ತಿದ್ದಾರಂತೆ. ಇದೇ ವಿಚಾರಕ್ಕೆ ರಜನಿಕಾಂತ್ ವಿದಾಯ ಹೇಳುವ ಸುದ್ದಿ ಗುಲ್ಲಾಗಿದೆ. ಹಾಗಂತ ಅವರು ರಾಜಕೀಯ ಎಂಟ್ರಿ ಮಾಡ್ತಿದ್ದಾರೆ ಅಂತೇನಿಲ್ಲ, ಕಾರಣ ಮಾತ್ರ ಬೇರೆಯೇ ಇದೆ. ರಜನಿಕಾಂತ್ ವಯಸ್ಸು ಏರುತ್ತಿದೆ. 70 ವರ್ಷ ವಯಸ್ಸು ದಾಟಿದ ಬಳಿಕ ಸಹಜವಾಗೇ ದೇಹ ಕ್ವೀಣಿಸುತ್ತದೆ, ಸುಸ್ತೂ ಜಾಸ್ತಿ ಆಗುತ್ತದೆ. ಹಾಗಂತ ಇದುವೇ ವಿದಾಯಕ್ಕೆ ರೀಸನ್ ಅಲ್ವೇ ಅಲ್ಲ.ರಜನಿಕಾಂತ್ ಮನಸ್ಸು ಆಧ್ಯಾತ್ಮದತ್ತ ಹೆಚ್ಚಾಗಿ ವಾಲುತ್ತಿದೆ.

ಸರಳವಾಗಿ ಬದುಕೋದನ್ನ ಜೀವನದಲ್ಲಿ ರೂಢಿಸಿಕೊಂಡು ಬಂದವರು ರಜನಿ. ಹೀಗಾಗಿ ವರ್ಷಕ್ಕೊಮ್ಮೆಯಾದ್ರೂ ಆಧ್ಯಾತ್ಮಿಕ ಪ್ರವಾಸ ಮಾಡ್ತಾರೆ. ಮನಸ್ಸಾದಾಗೆಲ್ಲ ಕಾರು ಹತ್ತಿ, ಹುಟ್ಟೂರು ಬೆಂಗಳೂರಿಗೆ ಬಂದು ಯಾರಿಗೂ ಗೊತ್ತಾಗದಂತೆ ಇದ್ದುಬಿಡ್ತಾರೆ. ಇಂಥಹ ರಜನಿಕಾಂತ್ ಎಲ್ಲಾ ಮೋಹಗಳನ್ನೂ ತ್ಯಜಿಸಿ ಜೀವಿಸುತ್ತಿರುವ ವ್ಯಕ್ತಿ. ವಯಸ್ಸು ಮಾಗಿದಂತೆ ಮನಸ್ಸೂ ಮಾಗುತ್ತಿದೆ. ಹೀಗಾಗಿ ಕೈಯಲ್ಲಿದ್ದ ಪ್ರಾಜೆಕ್ಟ್‌ಗಳನ್ನ ಮುಗಿಸಿಕೊಟ್ಟು, ಬಳಿಕ ನೋಡಿದ್ರಾಯ್ತು ಎಂದು ಯಾವುದೇ ಪ್ರಾಜೆಕ್ಟ್‌ಗಳನ್ನ ರಜನಿ ಒಪ್ಪಿಕೊಳ್ತಿಲ್ಲ. ಹೀಗಾಗಿ ರಜನಿಕಾಂತ್ ಚಿತ್ರರಂಗಕ್ಕೆ ವಿದಾಯದ ಎಲ್ಲೆಡೆ ಸುದ್ದಿ ಚರ್ಚೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

11 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago