ಮನರಂಜನೆ

ಕಟ್ಟ ಕಾಮೆಂಟ್ ಮಾಡೋರಿಗೆ ಹಾಡಿನ ಮೂಲಕ ಟಾಂಗ್ ಕೊಟ್ಟ ಇಶಾನಿ

‘ಬಿಗ್ ಬಾಸ್’ ನಂತರ ಹಿಪ್‍ಹಾಪ್‍ ಗಾಯಕಿ ಇಶಾನಿ ಸುದ್ದಿಯೇ ಇರಲಿಲ್ಲ. ಅವರೇನು ಮಾಡುತ್ತಿದ್ದರು ಎಂಬ ಪ್ರಶ್ನೆಗೆ ಅವರು ಉತ್ತರ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಸೋಷಿಯಲ್‍ ಮೀಡಿಯಾದಲ್ಲಿ ತಮ್ಮ ಬಗ್ಗೆ ಕೆಟ್ಟ ಕಾಮೆಂಟ್‍ಗಳನ್ನು ಮಾಡುತ್ತಿದ್ದವರಿಗೂ ಅವರು ಈ ಹಾಡಿನ ಮೂಲಕ ಉತ್ತರ ಕೊಟ್ಟಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಇಶಾನಿ ಸಾಕಷ್ಟು ಟ್ರೋಲ್‍ ಆಗಿದ್ದಾರೆ. ‘ಯುವತಿಯರು ಮಾಡ್ರನ್ ಡ್ರೆಸ್ ಹಾಕೋದು, ಬೋಲ್ಡ್ ಆಗಿರುವುದು ತಪ್ಪೇ, ನನ್ನ ಇಷ್ಟದಂತೆ ನಾನಿರೋದನ್ನು ಯಾಕೆ ಸಹಿಸಲ್ಲ’ ಎಂದು ಈ ಹಿಂದೆ ಅವರು ಪ್ರಶ್ನಿಸಿದ್ದರು. ಅಂಥವರಿಗೆ ‘ಅಸಲಿ ಬಣ್ಣ’ ಎಂಬ ಹಿಪಪ್ ಸಾಂಗ್ ಮೂಲಕ ಇಶಾನಿ ತಿರುಗೇಟು ಕೊಟ್ಟಿದ್ದಾರೆ.

ಈಶಾನಿ, ಶುಕ್ರವಾರದಂದು ತಮ್ಮ ಹುಟ್ಟುಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಯೂಟ್ಯೂಬ್ ಚಾನೆಲ್ ನಲ್ಲಿ ‘ಅಸಲಿ ಬಣ್ಣ’ ಹಿಪ್ ಹಾಪ್ ಹಾಡು ಬಿಡುಗಡೆ ಆಗಿದೆ. ಈ ಗೀತೆಯನ್ನು ಈಶಾನಿ ಹಾಡುವ ಜೊತೆಗೆ ಅದರಲ್ಲಿ ಅವರೇ ಅಭಿನಯಿಸಿದ್ದಾರೆ. ಅವರ ಒಂದಷ್ಟು ಸ್ನೇಹಿತರೇ ಸೇರಿ ಈ ಹಾಡನ್ನು ಮಾಡಿದ್ದಾರೆ.

ವೆಂಕಟ್ ಅವರು ಈ ಹಾಡನ್ನು ನಿರ್ಮಿಸಿದ್ದು, ಗಿರಿಗೌಡ ನಿರ್ದೇಶನ, ಮಾರ್ಟಿನ್ ಸಾಹಿತ್ಯ, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣ, ಡಿಜೆ ಲೆಥಲ್ ಅವರ ಸಂಗೀತ ಸಂಯೋಜನೆ ಈ ಹಾಡಿಗಿದೆ.

ಈ ಬಗ್ಗೆ ಮಾತನಾಡಿದ ಇಶಾನಿ ‘ಈ ಹಾಡಿನ ಮೂಲಕ ಮಹಿಳೆಯರಿಗೆ ಕೆಟ್ಟದಾಗಿ ಟ್ರೋಲ್‍ ಮಾಡುವವರಿಗೆ ಟಾಂಗ್ ಕೊಟ್ಟಿದ್ದೇನೆ. ಅಂಥವರಿಗೆ ನಮ್ಮ ಭಾವನೆಗಳು ಅರ್ಥ ಆಗಬೇಕು. ನನ್ನ ಬಗ್ಗೆ ಯಾರೆಲ್ಲ ಕೆಟ್ಟ ಪದಗಳನ್ನು ಬಳಸಿದ್ದರೋ, ಅದೇ ಪದಗಳನ್ನು ಅವರಿಗೆ ವಾಪಸ್ ಕೊಟ್ಟಿದ್ದೇನೆ. ‘ಬಿಗ್ ಬಾಸ್’ ನಡೆಯುತ್ತಿರುವಾಗಲೇ ಈ ಹಾಡನ್ನು ಬರೆದಿದ್ದೆ. ನನಗನಿಸಿದ್ದನ್ನು ಹೇಳಿಕೊಳ್ಳಲು ಇದು ಒಳ್ಳೆಯ ದಾರಿ ಎಂದನಿಸಿತು. ಮಾರ್ಟಿನ್ ಇದಕ್ಕೆ ಪೈನಲ್ ಟಚ್ ಕೊಟ್ಟಿದ್ದಾರೆ. ಈ ಹಾಡಿನ ಉದ್ದೇಶ ಶೋಷಣೆಗೆ ಒಳಗಾದ ಹೆಣ್ಣು ಮಕ್ಕಳಿಗೆ ಧೈರ್ಯ ತುಂಬುವುದಾಗಿದೆ’ ಎಂದರು.

ನಿರ್ದೇಶಕ ಗಿರಿ ಗೌಡ ಮಾತನಾಡಿ, ‘ಈಶಾನಿ ಅವರನ್ನು ಇಷ್ಟಪಡುವವರಾಗಿ ನಾವು ಅವರಿಗೆ ಸಹಕಾರ ನೀಡುವ ದೃಷ್ಟಿಯಿಂದ ಈ ಗೀತೆ ಮಾಡಿದ್ದೇವೆ. ಇನ್ನು ಒಂದಿಷ್ಟು ಗೀತೆಗಳನ್ನು ಅವರ ಜೊತೆ ಮಾಡುತ್ತೇನೆ. ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಒಂದೇ ದಿನದಲ್ಲಿ ಇದನ್ನು ಚಿತ್ರೀಕರಿಸಿದ್ದೇವೆ’ ಎಂದರು.

ಈ ಹಾಡನ್ನು ವಿಭಿನ್ನ ವ್ಯಾಪಾರಗಳಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳಾದ ಸುರೇಶ್, ಮಂಜೇಶ್ ಹಾಗೂ ಮನೀಶ್ ಬಿಡುಗಡೆ ಮಾಡಿದರು. ‘ಬಿಗ್ ಬಾಸ್ ‘ ಗೆಳೆಯರಾದ ತನಿಷಾ ಕುಪ್ಪುಂಡ, ಸಿರಿ, ಐಶ್ವರ್ಯ ರಂಗರಾಜನ್‍, ಅವಿನಾಶ್‍, ಪವಿ ಪೂವಯ್ಯ, ರಕ್ಷಕ್‍ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿದರು.

ಭೂಮಿಕಾ

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

3 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

3 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

3 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

3 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

4 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

4 hours ago