ಮನರಂಜನೆ

ಯಾರೂ ಮುಟ್ಟದ ಕಥೆಯೊಂದನ್ನು ಚಿತ್ರ ಮಾಡ್ತಿದ್ದಾರಂತೆ ನಮ್‍ ಋಷಿ

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ ಬಿಡುಗಡೆಯಾಗಿದೆ.

ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದ್ದಾರೆ. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ:-ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್‍ ರುದ್ರನಾಗ್‍ ನಿರ್ದೇಶನ

ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ. ಒಳ್ಳೆಯ ತಂಡ ಬೇಕು ಎನ್ನುವ ಋಷಿ, ‘ಒಳ್ಳೆಯ ತಂಡವೆಂದರೆ, ಒಬ್ಬರನ್ನೊಬ್ಬರು ಪ್ರೀತಿಸುವಂತಿರಬೇಕು. ಅವರು ಬೆಳೆದರೆ ನಾವು ಖುಷಿಪಡಬೇಕು. ನಾವು ಬೆಳೆದರೆ ಅವರು ಖುಷಿಪಡಬೇಕು. ಸಣ್ಣ ವಿಷಯಗಳಿಗೆ ಕಿತ್ತಾಟಗಳಾಗುತ್ತವೆ. ಅದನ್ನೆಲ್ಲಾ ಮೀರಿದ ಒಂದು ತಂಡವಿರಬೇಕು. ನಾನು ಕಲಾವಿದರಿಗೆ ದುಡ್ಡು ಕೊಟ್ಟು ನಟನೆ ಮಾಡಿಸುವುದಿಲ್ಲ. ಕಲಾವಿದರಲ್ಲಿ ಎರಡು ತರಹದ ಕಲಾವಿದರಿರುತ್ತಾರೆ. ಕೆಲವರು ವೃತ್ತಿಪರ ಕಲಾವಿದರು. ಇನ್ನೂ, ಕೆಲವರು ಪ್ಯಾಷನ್‍ಗಾಗಿ ಅಭಿನಯ ಮಾಡುತ್ತಾರೆ. ಅವರಿಗೆ ಹಣದ ಅವಶ್ಯಕತೆ ಇರುವುದಿಲ್ಲ. ವೃತ್ತಿಪರ ಕಲಾವಿದರಿಗೆ ದುಡ್ಡು ಕೊಡಬೇಕಾಗುತ್ತದೆ. ಆದರೆ, ಪ್ಯಾಷನ್ ಇರುವವರನ್ನು ಆಯ್ಕೆ ಮಾಡಿಕೊಂಡರೆ, ಅವರಿಗೆ ಹಣ ನೀಡದಿದ್ದರೂ ಆಗುತ್ತದೆ. ಜೊತೆಗೆ ಅವರಿಂದ ಸಹಕಾರವೂ ಸಿಗುತ್ತದೆ. ನಾನು ಅಂಥವರನ್ನೇ ಆಯ್ಕೆ ಮಾಡಿಕೊಂಡು ಚಿತ್ರ ಮಾಡುತ್ತಿದ್ದೇನೆ’ ಎಂದರು.

‘ಫ್ರಾಡ್‍ ಋಷಿ’ ಚಿತ್ರೀಕರಣ ಅಕ್ಟೋಬರ್‍ ತಿಂಗಳಲ್ಲಿ ಶುರುವಾಗಿ, ಡಿಸೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗುತ್ತದಂತೆ. ಈ ಕುರಿತು ಮಾತನಾಡುವ ಅವರು, ‘ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದೆ. ಅಕ್ಟೋಬರ್.10ರಿಂದ ಚಿತ್ರೀಕರಣ ಶುರುವಾಗಲಿದೆ. ಇದು ದೊಡ್ಡ ಬಜೆಟ್‍ ಚಿತ್ರವಲ್ಲ. ಆದರೆ, ಕಂಟೆಂಟ್‍ ಬಹಳ ಚೆನ್ನಾಗಿದೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ನನ್ನ ಮೂರು ಯಶಸ್ವಿ ಹಾಡುಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಕಡಿಮೆ ಬಜೆಟ್‍ನಲ್ಲಿ ಈ ಚಿತ್ರ ಮಾಡುತ್ತಿದ್ದೇನೆ. ಶಂಕರ್ ಛಾಯಾಗ್ರಹಣ ಮತ್ತು ಶ್ರೀಗುರು ಸಂಗೀತ ಈ ಚಿತ್ರಕ್ಕಿದೆ. ಒಂದೊಳ್ಳೆಯ ತಂಡ ಕಟ್ಟಿದ್ದೇನೆ. ಚಿತ್ರದಲ್ಲಿ ನಾಲ್ವರು ನಾಯಕಿಯರಿದ್ದಾರೆ. ಇದುವರೆಗೂ ಯಾರೂ ಮುಟ್ಟದ ಮತ್ತು ಎಲ್ಲರೂ ಹೇಳುವುದಕ್ಕೆ ಹೆದರುವ ಒಂದು ವಿಷಯವನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಇದೊಂದು ಸೂಕ್ಷ್ಮ ವಿಷಯವಿರುವ ಕಥೆ. ಜನರಿಗೆ ಚಿತ್ರ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

22 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

2 hours ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

2 hours ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

2 hours ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

3 hours ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

3 hours ago