‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ ಬಿಡುಗಡೆಯಾಗಿದೆ.
ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದ್ದಾರೆ. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಈ ಹಾಡು ಬಿಡುಗಡೆಯಾಗಿದೆ.
ಇದನ್ನೂ ಓದಿ:-ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್ ರುದ್ರನಾಗ್ ನಿರ್ದೇಶನ
ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ. ಒಳ್ಳೆಯ ತಂಡ ಬೇಕು ಎನ್ನುವ ಋಷಿ, ‘ಒಳ್ಳೆಯ ತಂಡವೆಂದರೆ, ಒಬ್ಬರನ್ನೊಬ್ಬರು ಪ್ರೀತಿಸುವಂತಿರಬೇಕು. ಅವರು ಬೆಳೆದರೆ ನಾವು ಖುಷಿಪಡಬೇಕು. ನಾವು ಬೆಳೆದರೆ ಅವರು ಖುಷಿಪಡಬೇಕು. ಸಣ್ಣ ವಿಷಯಗಳಿಗೆ ಕಿತ್ತಾಟಗಳಾಗುತ್ತವೆ. ಅದನ್ನೆಲ್ಲಾ ಮೀರಿದ ಒಂದು ತಂಡವಿರಬೇಕು. ನಾನು ಕಲಾವಿದರಿಗೆ ದುಡ್ಡು ಕೊಟ್ಟು ನಟನೆ ಮಾಡಿಸುವುದಿಲ್ಲ. ಕಲಾವಿದರಲ್ಲಿ ಎರಡು ತರಹದ ಕಲಾವಿದರಿರುತ್ತಾರೆ. ಕೆಲವರು ವೃತ್ತಿಪರ ಕಲಾವಿದರು. ಇನ್ನೂ, ಕೆಲವರು ಪ್ಯಾಷನ್ಗಾಗಿ ಅಭಿನಯ ಮಾಡುತ್ತಾರೆ. ಅವರಿಗೆ ಹಣದ ಅವಶ್ಯಕತೆ ಇರುವುದಿಲ್ಲ. ವೃತ್ತಿಪರ ಕಲಾವಿದರಿಗೆ ದುಡ್ಡು ಕೊಡಬೇಕಾಗುತ್ತದೆ. ಆದರೆ, ಪ್ಯಾಷನ್ ಇರುವವರನ್ನು ಆಯ್ಕೆ ಮಾಡಿಕೊಂಡರೆ, ಅವರಿಗೆ ಹಣ ನೀಡದಿದ್ದರೂ ಆಗುತ್ತದೆ. ಜೊತೆಗೆ ಅವರಿಂದ ಸಹಕಾರವೂ ಸಿಗುತ್ತದೆ. ನಾನು ಅಂಥವರನ್ನೇ ಆಯ್ಕೆ ಮಾಡಿಕೊಂಡು ಚಿತ್ರ ಮಾಡುತ್ತಿದ್ದೇನೆ’ ಎಂದರು.
‘ಫ್ರಾಡ್ ಋಷಿ’ ಚಿತ್ರೀಕರಣ ಅಕ್ಟೋಬರ್ ತಿಂಗಳಲ್ಲಿ ಶುರುವಾಗಿ, ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದಂತೆ. ಈ ಕುರಿತು ಮಾತನಾಡುವ ಅವರು, ‘ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದೆ. ಅಕ್ಟೋಬರ್.10ರಿಂದ ಚಿತ್ರೀಕರಣ ಶುರುವಾಗಲಿದೆ. ಇದು ದೊಡ್ಡ ಬಜೆಟ್ ಚಿತ್ರವಲ್ಲ. ಆದರೆ, ಕಂಟೆಂಟ್ ಬಹಳ ಚೆನ್ನಾಗಿದೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ನನ್ನ ಮೂರು ಯಶಸ್ವಿ ಹಾಡುಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಕಡಿಮೆ ಬಜೆಟ್ನಲ್ಲಿ ಈ ಚಿತ್ರ ಮಾಡುತ್ತಿದ್ದೇನೆ. ಶಂಕರ್ ಛಾಯಾಗ್ರಹಣ ಮತ್ತು ಶ್ರೀಗುರು ಸಂಗೀತ ಈ ಚಿತ್ರಕ್ಕಿದೆ. ಒಂದೊಳ್ಳೆಯ ತಂಡ ಕಟ್ಟಿದ್ದೇನೆ. ಚಿತ್ರದಲ್ಲಿ ನಾಲ್ವರು ನಾಯಕಿಯರಿದ್ದಾರೆ. ಇದುವರೆಗೂ ಯಾರೂ ಮುಟ್ಟದ ಮತ್ತು ಎಲ್ಲರೂ ಹೇಳುವುದಕ್ಕೆ ಹೆದರುವ ಒಂದು ವಿಷಯವನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಇದೊಂದು ಸೂಕ್ಷ್ಮ ವಿಷಯವಿರುವ ಕಥೆ. ಜನರಿಗೆ ಚಿತ್ರ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…