ಮನರಂಜನೆ

ಯಾರೂ ಮುಟ್ಟದ ಕಥೆಯೊಂದನ್ನು ಚಿತ್ರ ಮಾಡ್ತಿದ್ದಾರಂತೆ ನಮ್‍ ಋಷಿ

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ ಬಿಡುಗಡೆಯಾಗಿದೆ.

ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದ್ದಾರೆ. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ:-ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್‍ ರುದ್ರನಾಗ್‍ ನಿರ್ದೇಶನ

ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ. ಒಳ್ಳೆಯ ತಂಡ ಬೇಕು ಎನ್ನುವ ಋಷಿ, ‘ಒಳ್ಳೆಯ ತಂಡವೆಂದರೆ, ಒಬ್ಬರನ್ನೊಬ್ಬರು ಪ್ರೀತಿಸುವಂತಿರಬೇಕು. ಅವರು ಬೆಳೆದರೆ ನಾವು ಖುಷಿಪಡಬೇಕು. ನಾವು ಬೆಳೆದರೆ ಅವರು ಖುಷಿಪಡಬೇಕು. ಸಣ್ಣ ವಿಷಯಗಳಿಗೆ ಕಿತ್ತಾಟಗಳಾಗುತ್ತವೆ. ಅದನ್ನೆಲ್ಲಾ ಮೀರಿದ ಒಂದು ತಂಡವಿರಬೇಕು. ನಾನು ಕಲಾವಿದರಿಗೆ ದುಡ್ಡು ಕೊಟ್ಟು ನಟನೆ ಮಾಡಿಸುವುದಿಲ್ಲ. ಕಲಾವಿದರಲ್ಲಿ ಎರಡು ತರಹದ ಕಲಾವಿದರಿರುತ್ತಾರೆ. ಕೆಲವರು ವೃತ್ತಿಪರ ಕಲಾವಿದರು. ಇನ್ನೂ, ಕೆಲವರು ಪ್ಯಾಷನ್‍ಗಾಗಿ ಅಭಿನಯ ಮಾಡುತ್ತಾರೆ. ಅವರಿಗೆ ಹಣದ ಅವಶ್ಯಕತೆ ಇರುವುದಿಲ್ಲ. ವೃತ್ತಿಪರ ಕಲಾವಿದರಿಗೆ ದುಡ್ಡು ಕೊಡಬೇಕಾಗುತ್ತದೆ. ಆದರೆ, ಪ್ಯಾಷನ್ ಇರುವವರನ್ನು ಆಯ್ಕೆ ಮಾಡಿಕೊಂಡರೆ, ಅವರಿಗೆ ಹಣ ನೀಡದಿದ್ದರೂ ಆಗುತ್ತದೆ. ಜೊತೆಗೆ ಅವರಿಂದ ಸಹಕಾರವೂ ಸಿಗುತ್ತದೆ. ನಾನು ಅಂಥವರನ್ನೇ ಆಯ್ಕೆ ಮಾಡಿಕೊಂಡು ಚಿತ್ರ ಮಾಡುತ್ತಿದ್ದೇನೆ’ ಎಂದರು.

‘ಫ್ರಾಡ್‍ ಋಷಿ’ ಚಿತ್ರೀಕರಣ ಅಕ್ಟೋಬರ್‍ ತಿಂಗಳಲ್ಲಿ ಶುರುವಾಗಿ, ಡಿಸೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗುತ್ತದಂತೆ. ಈ ಕುರಿತು ಮಾತನಾಡುವ ಅವರು, ‘ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದೆ. ಅಕ್ಟೋಬರ್.10ರಿಂದ ಚಿತ್ರೀಕರಣ ಶುರುವಾಗಲಿದೆ. ಇದು ದೊಡ್ಡ ಬಜೆಟ್‍ ಚಿತ್ರವಲ್ಲ. ಆದರೆ, ಕಂಟೆಂಟ್‍ ಬಹಳ ಚೆನ್ನಾಗಿದೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ನನ್ನ ಮೂರು ಯಶಸ್ವಿ ಹಾಡುಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಕಡಿಮೆ ಬಜೆಟ್‍ನಲ್ಲಿ ಈ ಚಿತ್ರ ಮಾಡುತ್ತಿದ್ದೇನೆ. ಶಂಕರ್ ಛಾಯಾಗ್ರಹಣ ಮತ್ತು ಶ್ರೀಗುರು ಸಂಗೀತ ಈ ಚಿತ್ರಕ್ಕಿದೆ. ಒಂದೊಳ್ಳೆಯ ತಂಡ ಕಟ್ಟಿದ್ದೇನೆ. ಚಿತ್ರದಲ್ಲಿ ನಾಲ್ವರು ನಾಯಕಿಯರಿದ್ದಾರೆ. ಇದುವರೆಗೂ ಯಾರೂ ಮುಟ್ಟದ ಮತ್ತು ಎಲ್ಲರೂ ಹೇಳುವುದಕ್ಕೆ ಹೆದರುವ ಒಂದು ವಿಷಯವನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಇದೊಂದು ಸೂಕ್ಷ್ಮ ವಿಷಯವಿರುವ ಕಥೆ. ಜನರಿಗೆ ಚಿತ್ರ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

25 mins ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

34 mins ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

1 hour ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

1 hour ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

5 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

5 hours ago